![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 27, 2023, 5:47 AM IST
ಮಂಗಳೂರು: ನಗರದ ಹೊರ ವಲಯದ ಬಾಳೆಪುಣಿ ಗ್ರಾಮದ ಮೂಳೂರು ಎಂಬಲ್ಲಿ ಬಸ್ ತಂಗುದಾಣದ ಮೇಲೆ ಲಾರಿ ಉರುಳಿ ಬಿದ್ದ ಪರಿಣಾಮ ತಂಗುದಾಣದೊಳಗಿದ್ದ ರಾಮದಾಸ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಟುಂಬದ ದೈವಾರಾಧನೆಗೆ ಬಂದಿದ್ದ ಮೋಹನದಾಸ್ ಮತ್ತು ರಾಮದಾಸ್ ಅವರು ಗುರುವಾರ ರಾತ್ರಿ ಮೂಳೂರು ಬಸ್ ತಂಗುದಾಣದಲ್ಲಿ ಕುಳಿತು ಮಾತನಾಡುತ್ತಿದ್ದಾಗ ಜೈಲು ರಸ್ತೆಯಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಸ್ ತಂಗುದಾಣದ ಮೇಲೆ ಬಿದ್ದಿದೆ. ಪರಿಣಾಮ ರಾಮದಾಸ್ ಅವರ ತಲೆಗೆ ಬಸ್ ತಂಗುದಾಣದ ಮೇಲ್ಛಾವಣಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿಯಲ್ಲಿದ್ದ ಪ್ರಯಾಣಿಕ ಕೃಷ್ಣಪ್ಪ ಅವರಿಗೆ ಸಣ್ಣ ಮಟ್ಟಿನ ಗಾಯವಾಗಿದೆ. ಗಾಯಾಳುಗಳನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಹಾಗೂ ಮೋಹನದಾಸ್ ಅವರು ಪಾರಾಗಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.