![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 27, 2023, 6:21 AM IST
ಬಂಟ್ವಾಳ: ಮಂಗಳೂರು-ಧರ್ಮಸ್ಥಳ ಮಾರ್ಗ ವಾಗಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ವ್ಯಕ್ತಿಯೋರ್ವ ಮಹಿಳೆಯ ಜಡೆ ಸವರುವ ವೀಡಿಯೋವೊಂದರ ಆಧಾರದಲ್ಲಿ ಬಂಟ್ವಾಳ ನಾವೂರು ಗ್ರಾಮ ನಿವಾಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ನಾವೂರು ಗ್ರಾಮದ ಪಲ್ಲಿಗುಡ್ಡೆ ನಿವಾಸಿ ಹಮೀದ್ ಪ್ರಕರಣದ ಆರೋಪಿಯಾಗಿದ್ದು, ಹಿಂದೂ ಜಾಗರಣ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಅವರು ಪೊಲೀಸರಿಗೆ ದೂರು ನೀಡಿದ್ದರು.
ವೀಡಿಯೋ ದಾಖಲು
ಘಟನೆಯು ಮೇ 25ರಂದು ಸಂಜೆ 4.30ರ ಸುಮಾರಿಗೆ ನಡೆದಿದ್ದು, ಆರೋಪಿಯು ಮಹಿಳೆ ಕೂತ ಸೀಟಿನ ಹಿಂಬದಿ ಕೂತು ಜಡೆ ಸವರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ. ಜತೆಗೆ ಬೆನ್ನಿನ ಹಿಂಬದಿಯಿಂದ ಸ್ಪರ್ಶಿಸಿ ಮಹಿಳೆಯ ಮಾನಕ್ಕೆ ಕುಂದುಂಟು ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.