ಪ್ಲಾಸ್ಟಿಕ್‌ ಪಾರ್ಕ್‌ ಕಾಮಗಾರಿಗೆ ವೇಗ: ನಿವೇಶನಗಳಿಗೆ ಬೇಡಿಕೆ, ಶೀಘ್ರ ಶಿಲಾನ್ಯಾಸ ಸಾಧ್ಯತೆ


Team Udayavani, May 30, 2023, 6:27 AM IST

plastic

ಮಂಗಳೂರು: ಇಲ್ಲಿಗೆ ಸಮೀಪದ ಗಂಜಿಮಠದಲ್ಲಿ ಸ್ಥಾಪನೆಯಾಗಲಿರುವ ಬಹುನಿರೀಕ್ಷಿತ ಪ್ಲಾಸ್ಟಿಕ್‌ ಪಾರ್ಕ್‌ಗೆ ನಿರೀಕ್ಷೆಗೂ ಮೀರಿದ ಬೇಡಿಕೆ ಕಂಡುಬಂದಿದೆ.

ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆಗೆ ಆಗಬೇಕಾದ ಬಹುತೇಕ ಎಲ್ಲ ಮೂಲ ಕೆಲಸಗಳೂ ಬಹುತೇಕ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ಅದಕ್ಕೆ ಶಿಲಾನ್ಯಾಸ ನೆರವೇರಿಸುವ ನಿರೀಕ್ಷೆ ಇದೆ.

ಡಿಪಿಆರ್‌ ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಬಳಿಕ ಸಾಕಷ್ಟು ಕೆಲಸಗಳು ನಡೆದಿವೆ. ಪ್ಲಾಸ್ಟಿಕ್‌ ಕ್ಷೇತ್ರದಲ್ಲಿ ಹೆಸರಾಂತ ಸುಮಾರು 35ರಷ್ಟು ಕಂಪೆನಿಗಳು ಈ ಪಾರ್ಕ್‌ನಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿವೆ. ಅವರ ಬೇಡಿಕೆ ಪ್ರಕಾರ 90 ಎಕ್ರೆ ಸ್ಥಳ ಅಗತ್ಯವಿದೆ. ಆದರೆ ಮೊದಲ ಹಂತದಲ್ಲಿ ಲಭ್ಯವಿರುವುದು 60 ಎಕ್ರೆ. ಹಾಗಾಗಿ ಮೊದಲ ಹಂತದಲ್ಲಿ ಒಂದಷ್ಟು ಭೂಮಿ ನೀಡಿ ಎರಡನೇ ಹಂತದಲ್ಲಿ ಮತ್ತೆ ಕೊಡುವ ಸಾಧ್ಯತೆ ಇದೆ.

ಸದ್ಯ ಪ್ಲಾಸ್ಟಿಕ್‌ ಪಾರ್ಕ್‌ ಅಭಿವೃದ್ಧಿಗಾಗಿ ಟೆಂಡರ್‌ ನೀಡಲಾಗಿದ್ದು, ಭೂಮಿ ಮಟ್ಟಸಗೊಳಿಸುವ ಕೆಲಸ 62.77 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಈ ವೆಚ್ಚವನ್ನು ಕೇಂದ್ರ, ರಾಜ್ಯ ಸರಕಾರಗಳು ಶೇ. 50ರಂತೆ ಹಂಚಿಕೊಂಡಿವೆ.

ಗಂಜಿಮಠದ ರಫ್ತು ಉತ್ತೇಜನ ಪಾರ್ಕ್‌ನ ಎರಡನೇ ಹಂತವನ್ನೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿಗೆ ವಿದ್ಯುತ್‌ ಪೂರೈಕೆ ಸಮಸ್ಯೆಯಿಲ್ಲ, ಹತ್ತಿರದ ಗುರುಪುರ ನದಿಯ ನೀರನ್ನೇ ಬಳಸಿಕೊಳ್ಳುವುದಕ್ಕೂ ನಿರ್ಧರಿಸಲಾಗಿದೆ.

ಸಿಪೆಟ್‌ ಸಂಸ್ಥೆ ಬಂದರೆ ಕೌಶಲಾಭಿವೃದ್ಧಿ

ಮುಖ್ಯವಾಗಿ ಈ ಭಾಗದಲ್ಲಿನ ಪ್ಲಾಸ್ಟಿಕ್‌ ಕುರಿತ ಸಂಶೋಧನೆ, ಕೌಶಲಾಭಿವೃದ್ಧಿ ಮಾಡಲು ಸೆಂಟ್ರಲ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಪೆಟ್ರೋಕೆಮಿಕಲ್ಸ್‌ ಎಂಜಿನಿಯರಿಂಗ್‌(ಸಿಪೆಟ್‌) ಸ್ಥಾಪಿಸಲಾಗುತ್ತಿದೆ. 16 ಎಕ್ರೆ ಪ್ರದೇಶವನ್ನು ಅದಕ್ಕೆ ಮೀಸಲಿಡಲಾಗಿದೆ, ಅದರ ಕಟ್ಟಡ ನಿರ್ಮಾಣ ಕಾರ್ಯವೂ ನಡೆಯುತ್ತಿದೆ. ಇತರ 50 ವಿವಿಧ ಗಾತ್ರದ ನಿವೇಶನಗಳನ್ನು ಪ್ಲಾಸ್ಟಿಕ್‌ ಕೈಗಾರಿಕಾ ಘಟಕಗಳಿಗಾಗಿ ಮೀಸಲಿರಿಸಲಾಗಿದೆ.

ಸಿಪೆಟ್‌ನಲ್ಲಿ ಅತ್ಯಾಧುನಿಕ ಲ್ಯಾಬ್‌, ವರ್ಕ್‌ಶಾಪ್‌ ಇರಲಿದ್ದು, ಪ್ಲಾಸ್ಟಿಕ್‌ ಪಾರ್ಕ್‌ಗೆ ಪೂರಕವಾದ ಸಂಶೋಧನೆ, ತರಬೇತಿ ನಡೆಸಲಾಗುವುದು. ಇದರಿಂದ ಈ ಭಾಗದ ಉದ್ಯೋಗಾಕಾಂಕ್ಷಿಗಳ ಕೌಶಲಾಭಿವೃದ್ಧಿಯಾಗಲಿದ್ದು, ಉದ್ಯೋಗಕ್ಕೆ ನೆರವು ಸಿಗಲಿದೆ.

ತುಸು ವಿಳಂಬ

ಪ್ಲಾಸ್ಟಿಕ್‌ ಪಾರ್ಕ್‌ನಲ್ಲಿ ಸುಮಾರು 40 ಎಕ್ರೆಯಷ್ಟು ಭೂಮಿ ಖಾಸಗಿಯವರದ್ದಾಗಿದ್ದು, ಪರಿಹಾರಕ್ಕೆ ಸಂಬಂಧಿಸಿದ ವಿವಾದ ಇದುವರೆಗೆ ನ್ಯಾಯಾಲಯದಲ್ಲಿತ್ತು. ಈಗ ಪರಿಹಾರದ ಮೊತ್ತವನ್ನು ಕೋರ್ಟ್‌ಗೆ ಪಾವತಿಸಿ ಕೆಲಸ ಮುಂದುವರಿಸಲಾಗಿದೆ, ಈಗ ಕೆಲಸ ತ್ವರಿತವಾಗಿ ಸಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

2021ರ ಜನವರಿ ಪ್ರಾರಂಭದಲ್ಲಿ ಕೇಂದ್ರ ಸರಕಾರ ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ತಾತ್ವಿಕ ಒಪ್ಪಿಗೆ ನೀಡಿತ್ತು. ಇದಾದ ಆರು ತಿಂಗಳೊಳಗೆ ಡಿಪಿಆರ್‌ ನೀಡಬೇಕು, ಬಳಿಕ ಅನುಮೋದನೆಯಾಗಿ ಅಂತಿಮ ಒಪ್ಪಿಗೆ ಪಡೆಯಬಹುದು ಎಂದು ಕೇಂದ್ರ ಸರಕಾರದ ರಾಸಾಯನಿಕ ಮತ್ತು ಪೆಟ್ರೋರಾಸಾಯನಿಕ ಇಲಾಖೆ ನಿರ್ದೇಶನ ನೀಡಿತ್ತು. ಅದರಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಎಂಜಿನಿಯರಿಂಗ್‌ ವಿಭಾಗದವರು ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸಿದ್ದರು. ¤.

104 ಎಕ್ರೆ ಜಾಗ

ಗಂಜಿಮಠದಲ್ಲಿ 104 ಎಕ್ರೆ ಜಾಗವನ್ನು ಪ್ಲಾಸ್ಟಿಕ್‌ ಪಾರ್ಕ್‌ಗೆ ಮೀಸಲಿರಿಸಲಾಗಿದೆ. ಇದನ್ನು ಅಭಿವೃದ್ಧಿಪಡಿಸಿ ರಸ್ತೆ ಮತ್ತಿತರ ಕಡ್ಡಾಯ ಶೀರ್ಷಿಕೆಗಳಿಗೆ ಮೀಸಲಿರಿಸಿದ ಬಳಿಕ 60 ಎಕ್ರೆ ಉಳಿಯಲಿದೆ.

ಎಸ್‌ಪಿವಿ ರಚನೆ

ಎರಡು ತಿಂಗಳ ಹಿಂದೆಯಷ್ಟೇ ಪ್ಲಾಸ್ಟಿಕ್‌ ಪಾರ್ಕ್‌ನ ಕಾರ್ಯ ವ್ಯವಹಾರಗಳನ್ನು ಸರಿದೂಗಿಸಿಕೊಂಡು ಹೋಗುವುದಕ್ಕಾಗಿ ವಿಶೇಷ ಉದ್ದೇಶ ವಾಹಿನಿಯನ್ನು ರಚಿಸಲಾಗಿದೆ. ಇದರಲ್ಲಿ ರಾಜ್ಯ ಕೈಗಾರಿಕಾ ಇಲಾಖೆಯ ಆಯುಕ್ತರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಕೆಐಎಡಿಬಿಯ ಸಿಇಒ, ಹಾಗೂ ಸ್ಥಳೀಯ ಕೈಗಾರಿಕಾ ಪ್ರತಿನಿಧಿಯೊಬ್ಬರು ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಈಗಾಗಲೇ ಒಂದು ಸಭೆ ಕೂಡ ನಡೆದಿದೆ.

 ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.