ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ


Team Udayavani, May 31, 2023, 8:00 AM IST

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ಹೊಸದಿಲ್ಲಿ: ಜಾಗತಿಕ ರಕ್ಷಣ ಸರಕುಗಳ ಉತ್ಪಾದನೆ ವಲಯದಲ್ಲಿ ಭಾರತವು ವಿಶಿಷ್ಟವಾದ ಛಾಪು ಮೂಡಿಸಿದ್ದು, 10 ವರ್ಷಗಳಲ್ಲಿ ಭಾರತದ ರಕ್ಷಣ ರಫ್ತು ಪ್ರಮಾಣ ಸಾರ್ವಕಾಲಿಕ ದಾಖಲೆ ಮಾಡಿದೆ.

2013-14ರಲ್ಲಿ 686 ಕೋಟಿ ರೂ. ಮೌಲ್ಯದ ಸರಕುಗಳು ಭಾರತದಿಂದ ರಫ್ತಾದರೆ, 2022-23ರಲ್ಲಿ ಈ ಪ್ರಮಾಣ 16 ಸಾವಿರ ಕೋಟಿ ರೂ.ಗೇರಿದೆ. ಮಂಗಳವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕುರಿತ ವರದಿಯನ್ನು ಬಿಡುಗಡೆ ಮಾಡಿದೆ.

ಭಾರತದ ರಕ್ಷಣ ರಫ್ತು ಪ್ರಮಾಣ 2013-14ಕ್ಕೆ ಹೋಲಿಸಿದರೆ ಈಗ 23 ಪಟ್ಟು ಹೆಚ್ಚಳವಾಗಿದೆ. ಪ್ರಸ್ತುತ 100ರಷ್ಟು ಕಂಪೆನಿಗಳು ಭಾರತದಲ್ಲಿ ರಕ್ಷಣ ಸರಕುಗಳನ್ನು ಉತ್ಪಾದಿಸಿ, 85ಕ್ಕೂ ಅಧಿಕ ದೇಶಗಳಿಗೆ ರಫ್ತು ಮಾಡುತ್ತಿವೆ. ಹಿಂದೆ ಭಾರತವು ರಕ್ಷಣ ಸಾಮಗ್ರಿಗಳ ಆಮದುದಾರನಾಗಿತ್ತು. ಈಗ ರಫ್ತುದಾರ ರಾಷ್ಟ್ರವಾಗಿ ಬೆಳೆದಿದೆ ಎಂದೂ ಸಚಿವಾಲಯ ಹೇಳಿದೆ.

ಪ್ರಮುಖ ರಫ್ತು

ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಕೇಂದ್ರ ಸರಕಾರವು ವಿದೇಶಿ ರಕ್ಷಣ ಸರಕುಗಳ ಆಮದು ನಿರ್ಬಂಧ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಭಾರತದಲ್ಲೇ ಎಲ್ಲ ರೀತಿಯ ಸರಕುಗಳನ್ನು ವಿನ್ಯಾಸಗೊಳಿಸಲು ಮತ್ತು ಉತ್ಪಾದಿಸಲು ಉತ್ತೇಜನ ನೀಡಿದೆ. ಪರಿಣಾಮವಾಗಿ ಪ್ರಸ್ತುತ ದೇಶದಿಂದ ಪ್ರಮುಖವಾಗಿ ಡಾರ್ನಿಯರ್‌-228, ಆರ್ಟಿಲರಿ ಗನ್‌ಗಳು, ಬ್ರಹ್ಮೋಸ್‌ ಕ್ಷಿಪಣಿಗಳು, ಪಿನಾಕಾ ರಾಕೆಟ್‌ಗಳು ಮತ್ತು ಲಾಂಚರ್‌ಗಳು, ರೇಡಾರ್‌ಗಳು, ಸಿಮ್ಯುಲೇಟರ್‌ಗಳು ಮತ್ತು ಸಶಸ್ತ್ರ ವಾಹನಗಳು ರಫ್ತಾಗುತ್ತಿವೆ. ಅಲ್ಲದೆ ಎಲ್‌ಸಿಎ-ತೇಜಸ್‌, ಲಘು ಯುದ್ಧ ಹೆಲಿಕಾಪ್ಟರ್‌ಗಳು, ವಿಮಾನ ವಾಹಕಗಳಿಗೆ ವಿದೇಶಗಳಿಂದ ಬೇಡಿಕೆ ಹೆಚ್ಚಿದೆ. ಒಟ್ಟು ರಫ್ತಿನ ಮೊತ್ತವನ್ನು 2025ರ ವೇಳೆಗೆ 35 ಸಾವಿರ ಕೋಟಿ ರೂ.ಗಳಿಗೆ ಏರಿಸುವ ಗುರಿಯನ್ನು ಸರಕಾರ ಹಾಕಿಕೊಂಡಿದೆ.

ಇದೇ ವೇಳೆ ವಿದೇಶಗಳಿಂದ ರಕ್ಷಣ ಸಾಮಗ್ರಿಗಳ ಆಮದು 2018-18ರಲ್ಲಿ ಒಟ್ಟು ವೆಚ್ಚದ ಶೇ.46ರಷ್ಟು ಇದ್ದದ್ದು, 2022ರ ಡಿಸೆಂಬರ್‌ ವೇಳೆಗೆ ಶೇ. 36.7ಕ್ಕೆ ಇಳಿಕೆಯಾಗಿದೆ ಎಂದೂ ರಕ್ಷಣ ಸಚಿವಾಲಯದ ವರದಿ ಹೇಳಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.