World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?


Team Udayavani, Jun 2, 2023, 2:23 PM IST

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

ಮುಂಬೈ: ಕೆಲವೇ ದಿನಗಳ ಹಿಂದೆ ಐಪಿಎಲ್‌ ಕೂಟ ಮುಗಿದಿದ್ದು ಚೆನ್ನೈ ಸೂಪರ್‌ ಕಿಂಗ್ಸ್‌ ಕಪ್‌ ಗೆದ್ದಿದ್ದೂ ಆಗಿದೆ. ಆದರೆ, ಈ ಐಪಿಎಲ್‌ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿರುವ ಹಲವಾರು ಆಟಗಾರರು ಈಗ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ನ ತಂಡದಲ್ಲಿದ್ದಾರೆ. ಈ ಆಟಗಾರರಿಂದ ಟೆಸ್ಟ್‌ನಲ್ಲೂ ಅಂಥದ್ದೇ ಪ್ರದರ್ಶನ ಬರಬಹುದು ಎಂಬ ನಂಬಿಕೆ ಅಭಿಮಾನಿಗಳದ್ದಾಗಿದೆ.

ವಿರಾಟ್‌ ಕೊಹ್ಲಿ, ಶುಭಮನ್‌ ಗಿಲ್‌, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಮೊಹಮ್ಮದ್‌ ಶಮಿ, ಅಕ್ಷರ್‌ ಪಟೇಲ್‌ ಉತ್ತಮವಾದ ಆಟ ಪ್ರದರ್ಶಿಸಿದ್ದು, ಇವರ ಕಡೆಯಿಂದ ಅಂಥದ್ದೇ ಆಟವನ್ನು ಆಸ್ಟ್ರೇಲಿಯ ವಿರುದ್ಧವೂ ನಿರೀಕ್ಷಿಸಲಾಗುತ್ತಿದೆ.

ಜೂ.7ರಂದು ಇಂಗ್ಲೆಂಡ್‌ನ‌ ಓವಲ್‌ ಅಂಗಳದಲ್ಲಿ ಐದು ದಿನಗಳ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯ ಆರಂಭವಾಗಲಿದೆ. ಭಾರತ ಸತತ ಎರಡನೇ ಬಾರಿಗೆ ಫೈನಲ್‌ ಪ್ರವೇಶಿಸಿರುವುದು ವಿಶೇಷ.

ಕಳೆದ ಬಾರಿ ನ್ಯೂಜಿಲೆಂಡ್‌ ಅನ್ನು ಫೈನಲ್‌ ನಲ್ಲಿ ಭಾರತ ಎದುರಿಸಿ, ರನ್ನರ್‌ ಅಪ್‌ ಆಗಿತ್ತು. ಈ ಬಾರಿ ಆಸ್ಟ್ರೇಲಿಯ ವಿರುದ್ಧ ಆಡುತ್ತಿದೆ. ಸಮಯವಿಲ್ಲದೇ ಇರುವುದರಿಂದ ಭಾರತ ಅಭ್ಯಾಸ ಪಂದ್ಯ ಆಡಿಲ್ಲ. ಆದರೂ, ಈಗಾಗಲೇ ತಂಡದ ಎಲ್ಲ ಸದಸ್ಯರೂ ಲಂಡನ್‌ಗೆ ತೆರಳಿದ್ದು, ಅಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ಪೋಸ್ಟ್: ಬಿಜೆಪಿ ಕಾರ್ಯಕರ್ತ ವಶಕ್ಕೆ

143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ. ಹೀಗಾಗಿ, ಬೌಲರ್‌ ಗಳು ಉತ್ತಮವಾಗಿ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಹೇಳಿದ್ದಾರೆ.

ಇನ್ನು ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋರ್‌ ಅವರು, ಬ್ಯಾಟಿಗರಿಗೆ ಅಭ್ಯಾಸ ಪಂದ್ಯ ಸಿಗದೇ ಇದ್ದರೂ, ಐಪಿಎಲ್‌ನಿಂದ ನೇರವಾಗಿ ಬಂದಿರುವುದು ನೆರವು ನೀಡಬಹುದು ಎಂದಿದ್ದಾರೆ.

ಭಾರತಕ್ಕಿದೆ ಸದೃಢ ಬ್ಯಾಟಿಂಗ್‌ ಪಡೆ: ಐಪಿಎಲ್‌ ನ ಲೆಕ್ಕಾಚಾರದಲ್ಲಿ ನೋಡುವುದಾದರೆ ಭಾರತ ಸದೃಢ ಬ್ಯಾಟಿಂಗ್‌ ಪಡೆಯನ್ನು ಹೊಂದಿದೆ. ಗುಜರಾತ್‌ ಟೈಟನ್ಸ್‌ ಅನ್ನು ಪ್ರತಿನಿಧಿಸಿದ್ದ ಶುಭಮನ್‌ ಗಿಲ್‌ ಅದ್ಭುತ ಫಾರ್ಮ್ನಲ್ಲಿದ್ದಾರೆ. 16 ಪಂದ್ಯಗಳಿಂದ 890 ರನ್‌ ಬಾರಿಸಿರುವ ಅವರು 59.33ರ ಆವರೇಜ್‌ ಹೊಂದಿದ್ದಾರೆ. ಹಾಗೆಯೇ ವಿರಾಟ್‌ ಕೊಹ್ಲಿ ಕೂಡ ಉತ್ತಮ ಫಾರ್ಮ್ನಲ್ಲಿದ್ದು ಬ್ಯಾಟಿಂಗ್‌ ಬೆನ್ನೆಲುಬು ಆಗಬಹುದು. ಕೊಹ್ಲಿ ಕೂಡ 639 ರನ್‌ ಗಳಿಸಿದ್ದಾರೆ. ಕೆ.ಎಲ್‌.ರಾಹುಲ್‌ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಅಜಿಂಕ್ಯ ರಹಾನೆ ಕೂಡ ಉತ್ತಮ ಲಯ ಕಂಡುಕೊಂಡಿದ್ದಾರೆ.

ಇನ್ನು ಬೌಲಿಂಗ್‌ ವಿಚಾರಕ್ಕೆ ಬಂದರೆ, ಮೊಹಮ್ಮದ್‌ ಶಮಿ, ಸಿರಾಜ್‌ ಉತ್ತಮ ಲಯದಲ್ಲಿದ್ದಾರೆ. ಶಮಿ 28 ವಿಕೆಟ್‌ ಪಡೆದಿದ್ದರೆ, ಸಿರಾಜ್‌ 19 ವಿಕೆಟ್‌ ಪಡೆದಿದ್ದಾರೆ. ಆಲ್‌ ರೌಂಡರ್‌ ರವೀಂದ್ರ ಜಡೇಜ ಕೂಡ 20 ವಿಕೆಟ್‌ ಪಡೆದು ಸಖತ್ತಾಗಿಯೇ ಮಿಂಚಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.