![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 3, 2023, 1:12 PM IST
ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶನಿವಾರ ತಿಹಾರ್ ಜೈಲಿನಿಂದ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಲು ತಮ್ಮ ನಿವಾಸಕ್ಕೆ ಆಗಮಿಸಿದರು.
ಬಂಧನದಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಪರಿಹಾರವನ್ನು ಪಡೆದಿದ್ದು, ಅವರಿಗೆ ಜೂ. 3 ರಂದು ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಲು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅವಕಾಶ ನೀಡಿತ್ತು.
ಸಿಸೋಡಿಯಾ ಅವರನ್ನು ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭದ್ರತೆಯಲ್ಲಿ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಸಂಜೆ 5 ಗಂಟೆಗೆ ಮತ್ತೆ ಜೈಲಿಗೆ ಹಿಂತಿರುಗಬೇಕು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಸೋಡಿಯಾ ಅವರು ತಮ್ಮ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ. ಅವರು ಇಂಟರ್ನೆಟ್ ಬಳಸಲು ಅಥವಾ ಮಾಧ್ಯಮದೊಂದಿಗೆ ಸಂವಹನ ನಡೆಸಲು ಅನುಮತಿಯಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಇದೇ ಪ್ರಕರಣದಲ್ಲಿ ಬಂಧಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.