![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 3, 2023, 8:04 PM IST
ಸಾಗರ: ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟೆಯ ಶರಾವತಿ ಹಿನ್ನೀರ ಪ್ರಾಂತ್ಯದಲ್ಲಿ ನೀರು ಕಡಿಮೆಯಾಗಿದ್ದು, ಮುಳುಗಡೆಯಾಗಿರುವ ಜಾಗದಲ್ಲಿ ಹಳೆ ಮರದ ತುಂಡುಗಳು ಮತ್ತು ಕೆಸರು ಲಾಂಚಿನ ಬುಡಕ್ಕೆ ತಗುಲುತ್ತಿರುವ ಹಿನ್ನೆಲೆಯಲ್ಲಿ ಹಸಿರುಮಕ್ಕಿ ಭಾಗದಲ್ಲಿ ಲಾಂಚಿನ ಓಡಾಟವನ್ನು ನಿಲ್ಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಇಲ್ಲೀವರೆಗೂ ದಿನಕ್ಕೆ 5 ರಿಂದ 7 ಬಾರಿ ದಡಗಳ ನಡುವೆ ತಿರುಗಾಟ ನಡೆಸುತ್ತಿದ್ದ ಲಾಂಚ್ ಶನಿವಾರ ಕೇವಲ 2-3 ಟ್ರಿಪ್ ಓಡಾಡಿದೆ. ಜತೆಯಲ್ಲಿ ಭಾರದ ವಾಹನಗಳನ್ನು ಹಾಕಲು ಲಾಂಚಿನ ಸಿಬ್ಬಂದಿ ಮುಂದಾಗುತ್ತಿಲ್ಲ. ಹೀಗಾಗಿ ಶನಿವಾರದಿಂದ ಕೇವಲ ದ್ವಿಚಕ್ರ ವಾಹನಗಳನ್ನು ಮಾತ್ರ ದಾಟಿಸಲಾಗುತ್ತಿದೆ. ಆದ್ದರಿಂದ ಹಸಿರುಮಕ್ಕಿ ಮಾರ್ಗದಿಂದ ನಿಟ್ಟೂರು, ಕೊಲ್ಲೂರಿಗೆ ಪ್ರಯಾಣಿಸುವವರು ಹೊಸನಗರ, ನಗರ ಮಾರ್ಗವಾಗಿಯೇ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತಾಡಿದ ಒಳನಾಡು ಸಾರಿಗೆ ಅಧಿಕಾರಿಗಳು ಭಾನುವಾರ ಹಸಿರುಮಕ್ಕಿಗೆ ತೆರಳಿ, ಸ್ಥಳ ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ನೀರು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಂಚಿನ ಓಡಾಟ ನಿಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.
ಇದನ್ನೂ ಓದಿ: Gangavati ಬಿಸಿಯೂಟ ಅಕ್ಕಿ ಪೂರೈಕೆ ; ಗೋಧಿ ಗೋಡೌನ್ನಲ್ಲೇ !
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.