K.Venakatesh;ನಿಮ್ಮ ಚಲನವಲನಕ್ಕಾಗಿ ಏಜೆಂಟ್ ಇಟ್ಟಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ

ಜನ ಪರ ಕೆಲಸ ಮಾಡಿ ಇಲ್ಲ ಜಾಗ ಖಾಲಿ ಮಾಡಿ

Team Udayavani, Jun 5, 2023, 5:16 PM IST

1-wqwqee

ಪಿರಿಯಾಪಟ್ಟಣ: ಅಧಿಕಾರಿಗಳ ಚಲನವಲನದ ಮೇಲೆ ಕಣ್ಣಿಡಲು ತಾಲ್ಲೂಕಿನಲ್ಲಿ ನಾನು ಏಜೆಂಟುಗಳನ್ನು ಇಟ್ಟಿಲ್ಲ,ಒಳ್ಳೆಯ ರೀತಿಯಲ್ಲಿ ಸಾರ್ವಜನಿಕರ ಕೆಲಸ ಮಾಡುವ ಅಧಿಕಾರಿಗಳಿಗೆ ಸದಾ ನನ್ನ ಬೆಂಬಲ ಮತ್ತು ಸಹಕಾರವಿದೆ ಎಂದು ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತ ಪ್ರಗತಿ ಪರಿಶೀಲಿ ಸಭೆಯಲ್ಲಿ ಮಾತನಾಡಿದರು. ಹಿಂದಿನ ಶಾಸಕರು ಹಾಗೂ ಅಧಿಕಾರಿಗಳು ಸೇರಿ ತಾಲ್ಲೂಕಿನಲ್ಲಿ ಏನೆಲ್ಲಾ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ನನಗಿದೆ, ವಿವಿಧ ಇಲಾಖೆಗಳ ಸೌಲಭ್ಯಗಳ ಹಂಚಿಕೆ ಹಾಗೂ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ನೆರೆ ಹಾವಳಿಗೆ ತುತ್ತಾಗಿ ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಕಲ್ಪಿಸುವ ವಿಷಯದಲ್ಲಿ ಅರ್ಹ ಫಲಾನುಭವಿಗಳನ್ನು ವಂಚಿಸಿ ಕೇವಲ ತಮ್ಮ ಪಕ್ಷ ಬೆಂಬಲಿತರು ಎಂಬ ಕಾರಣಕ್ಕೆ ಮಾಜಿ ಶಾಸಕ ಹೇಳಿದವರಿಗೆ ಹಾಗೂ ಯಾವುದೇ ಮನೆ ಕಳೆದುಕೊಳ್ಳದವರಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅವೈಜ್ಞಾನಿಕವಾಗಿ ಮನೆಗಳಿಗೆ ಪರಿಹಾರ ನೀಡಲಾಗಿದ್ದು, ಇದನ್ನು ಮರು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಈಗಾಗಲೇ ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಅರ್ಹರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದರು .

ತಾಲೂಕಿನಲ್ಲಿ ಅನೇಕ ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿ ಕೊಡಲು ಜನರನ್ನು ವಿನಃ ಕಾರಣ ಅಲೆದಾಡಿಸುವುದು, ಹಣಕ್ಕಾಗಿ ಬೇಡಿಕೆ ಇಡುವುದು ನನ್ನ ಗಮನದಲ್ಲಿದೆ ಆದ್ದರಿಂದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ನನ್ನ ಈ ಮಾತನ್ನು ಅಧಿಕಾರಿಗಳು
ಸಲಹೆ ಎಂದು ಬೇಕಾದರೂ ಸ್ವೀಕರಿಸಿ ಇಲ್ಲ ಎಚ್ಚರಿಕೆ ಎಂದಾದರೂ ತಿಳಿದುಕೊಳ್ಳಿ ಒಟ್ಟಿನಲ್ಲಿ ಜನರ ಕೆಲಸ ಮಾಡಬೇಕು ಇದಕ್ಕೆ ಒಪ್ಪದವರು ತಾವಾಗಿಯೇ ತಾಲ್ಲೂಕನ್ನು ಬಿಟ್ಟು ಹೊರಡುವಂತೆ ತಿಳಿಸಿದರು.

ಪಟ್ಟಣದ ಪುರಸಭೆಗೆ ಬರುವ ಸಾರ್ವಜನಿಕರ ಜೇಬು ಖಾಲಿ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ದುಡ್ಡಿಲ್ಲದೆ ಇಲ್ಲಿ ಯಾವುದೇ ಕೆಲಸ ಆಗುವುದಿಲ್ಲ ಎಂಬ ಧೋರಣೆ ಜನರಲ್ಲಿದೆ ಇದು ಬದಲಾಗಬೇಕು ಇಲ್ಲದಿದ್ದರೆ ಅಂಥವರಿಗೆ ಬುದ್ದಿ ಕಲಿಸಲಾಗುವುದು. ಕಚೇರಿಗಳಲ್ಲಿ ಅಧಿಕಾರಿಗಳು ಮಾಡುವ ಕೆಲಸಗಳು ನನಗೇನು ಗೊತ್ತಾಗಲ್ಲ ಎಂದು ಲಂಚಕ್ಕೆ ಕೈಚಾಚ ಬೇಡಿ, ಮುಂದೆ ಒಂದು ಹಿಂದೆ ಒಂದು ಮಾಡುವ ಸ್ವಭಾವ ನನ್ನದಲ್ಲ ಸದಾ ಜನರ ಪರ ಕೆಲಸ ಮಾಡಿ, ನೀವು ಜನರ ಕೆಲಸವನ್ನು ಸರಿಯಾಗಿ ಮಾಡಿದರೆ ನನಗೆ ಬರುವ ದೂರುಗಳ ಸಂಖ್ಯೆ ಕಡಿಮೆಯಾಗುತ್ತವೆ ಕಡಿಮೆಯಾಗುತ್ತದೆ, ಒಳ್ಳೆಯ ಆಡಳಿತಕ್ಕೆ ನೀವು ಸಿದ್ದರಾಗುವ ಮೂಲಕ ಜನರ ಕೆಲಸ ಮಾಡಿ.

ದುಡ್ಡಿನ ಆಸೆಯಿಂದ ಜನರನ್ನು ಅಲೆದಾಡಿಸುವ ಕೆಲಸ ಮಾಡಬೇಡಿ, ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ನನ್ನ ಸಹಕಾರವಿದೆ ಜನರಿಗೆ ಹಿಂಸೆ ನೀಡದೆ ಕೆಲಸ ಮಾಡುವವರಿಗೆ ನನ್ನ ಬೆಂಬಲವಿದೆ ಸರ್ಕಾರಿ ಕಚೇರಿಗಳು ಲಂಚದಿಂದ ಮುಕ್ತವಾಗಬೇಕು ಎಂದು ಹಿತ ವಚನ ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕುಂಞಿ ಅಹಮದ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗಂಗಣ್ಣ, ಶಿರಸ್ತೇದಾರ್ ನಂದಕುಮಾರ್, ಟ್ರೀಜಾ ಅಶೋಕ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಸೋಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್, ಆರ್ಎಫ್ಓ ರತನ್ ಕುಮಾರ್, ಎಡಿಎಲ್ಆರ್ ಮುನಿಯಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಸಿದ್ದೇಗೌಡ, ಧರ್ಮರಾಜ್, ಡಾ.ಶರತ್ ಬಾಬು, ಮಧು, ಪುಷ್ಪಲತಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.