ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಆತಂಕ: ಬಸವರಾಜ ಬೊಮ್ಮಾಯಿ
ಬಾಯಿಗೆ ಬಂದಂತೆ ಮಾತಾಡುವ ಸಚಿವರು; ಗೋ ಹತ್ಯೆ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಕಾಂಗ್ರೆಸ್ಗೆ ಆಪತ್ತು
Team Udayavani, Jun 6, 2023, 7:55 AM IST
ಬೆಳಗಾವಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ಗೆ ಈಗಾ ಗಲೇ ಅಧಿಕಾರದ ಅಮಲು ಏರಿದೆ. ಪ್ರತಿ ಯೊಬ್ಬ ಸಚಿವರೂ ವಿವಾದಾತ್ಮಕ ಮತ್ತು ಜನವಿರೋಧಿ ಹೇಳಿಕೆ ನೀಡು ತ್ತಿದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ದಿನಗಳು ಬರುವ ಆತಂಕ ಕಾಣುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಒಬ್ಬ ಸಚಿವರು ಗೋಹತ್ಯೆ ನಿಷೇಧ ಕಾನೂನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಸರಕಾರದ ವಿರುದ್ಧ ಮಾತನಾ ಡಿದರೆ ಜೈಲಿಗೆ ಹಾಕುತ್ತಾರೆಂದು ಬೆದರಿಸುತ್ತಾರೆ. ಜನರ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಪಶುಸಂಗೋಪನೆ ಸಚಿವರು ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಹೇಳಿದ್ದಾರೆ. ಇದಕ್ಕೆ ಕೆಲವು ಸಚಿವರು ದನಿಗೂಡಿಸಿದ್ದಾರೆ. ಗೋಹತ್ಯೆ ಕಾಯ್ದೆ ನಾವು ಜಾರಿ ಮಾಡಿದ್ದಲ್ಲ. 1960ರ ಅವಧಿಯಲ್ಲೇ ಇದು ಜಾರಿಗೆ ಬಂದಿದೆ. ನಾವು ಗೋ ಹತ್ಯೆ ಮಾಡಿದರೆ ಅದಕ್ಕೆ ಕಠಿನ ಶಿಕ್ಷೆ ಕಾಯ್ದೆ ಜಾರಿ ಮಾಡಿದ್ದೇವೆ. ಒಂದು ವೇಳೆ ಕಾಂಗ್ರೆಸ್ ಸರಕಾರ ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಮುಂದಾದರೆ ಖಂಡಿತ ಅದಕ್ಕೆ ಆಪತ್ತು ಕಾದಿದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಅಭಿವೃದ್ಧಿ ಮಾಡಲು ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ವಿಪಕ್ಷವಾಗಿ ಸುಮ್ಮನೆ ಕುಳಿತುಕೊಳ್ಳು ವುದಿಲ್ಲ. ಯಾರನ್ನು ಜೈಲಿಗೆ ಹಾಕುತ್ತೀರಿ ಹಾಕಲಿ. ನಿಮ್ಮ ನೀತಿಯಿಂದ ಜನ ತಿರುಗಿ ಬಿದ್ದರೆ ಯಾವ ಜೈಲುಗಳು ಸಾಕಾಗುವುದಿಲ್ಲ. ಚಾಬೂಕಿನಿಂದ ಹೊಡೆಯಲು ಇದು ಇಸ್ಲಾಂ ರಾಷ್ಟ್ರವೂ ಅಲ್ಲ. ತುರ್ತು ಪರಿಸ್ಥಿತಿ ತರುವ ಪ್ರಯತ್ನಕ್ಕೆ ಪ್ರಜಾಪ್ರಭುತ್ವದಲ್ಲಿ ಜನರ ಶಕ್ತಿ ದೊಡ್ಡದಿದೆ ಎಂದರು.
ವಿದ್ಯುತ್ ಕ್ಷೇತ್ರಕ್ಕೆ ಹೊರೆ
ವಿದ್ಯುತ್ ಕ್ಷೇತ್ರ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಆಗ ಎಲ್ಲ ವಿದ್ಯುತ್ ನಿಗಮಗಳ ಮೇಲೆ ದೊಡ್ಡ ಆರ್ಥಿಕ ಹೊರೆ ಹಾಕಿತ್ತು. ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.