PU, ಖಾಸಗಿ ಶಾಲೆಗಳ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಸಡಿಲಿಕೆ


Team Udayavani, Jun 8, 2023, 6:35 AM IST

TEACHER

ಬೆಂಗಳೂರು: ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸಹಿತ ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ಹುದ್ದೆಗಳ ಮೊದಲ ನೇರ ನೇಮಕಾತಿಗೆ ಮಾತ್ರ ಅನ್ವಯಿಸುವಂತೆ ಒಂದು ವರ್ಷದ ಅವಧಿಗೆ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯನ್ನು ರಾಜ್ಯ ಸರಕಾರ ನೀಡಿದೆ.

ಸರಕಾರದ ನಿಯಮದಿಂದಾಗಿ ಅನುದಾನಿತ ಪದವಿ ಪೂರ್ವ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ನೇಮಕಾತಿಗಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಕೋವಿಡ್‌ ಕಾರಣದಿಂದ ಆರ್ಥಿಕ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ 2020-21 ಮತ್ತು 2021-22ರ ಶೈಕ್ಷಣಿಕ ವರ್ಷದಲ್ಲಿ ನೇಮಕಾತಿ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸರಕಾರ ಈ ವಿನಾಯಿತಿಯನ್ನು ನೀಡಿದೆ.
2015ಕ್ಕೆ ಮುಂಚಿತವಾಗಿ ನಿವೃತ್ತಿ, ಮರಣ, ರಾಜೀನಾಮೆ ಮುಂತಾದ ಕಾರಣಗಳಿಂದ ಖಾಲಿಯಾಗಿರುವ ಅನುದಾನಿತ, ಖಾಸಗಿ ಪಿಯು ಕಾಲೇಜು ಮತ್ತು ಶಾಲೆಗಳ ಉಪನ್ಯಾಸಕರು ಮತ್ತು ಶಿಕ್ಷಕರ ಹುದ್ದೆ ಭರ್ತಿ ಮಾಡಲು ಸರಕಾರ ಈಗಾಗಲೇ ಅವಕಾಶ ನೀಡಿದೆ. ಈ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶಾಲಾ ಕಾಲೇಜುಗಳಲ್ಲಿ ವಿವಿಧ ಹಂತಗಳಲ್ಲಿ ಚಾಲ್ತಿಯಲ್ಲಿದೆ.

ಸರಕಾರ ಈಗ ಒಂದು ವರ್ಷದ ಮಟ್ಟಿಗೆ ಎರಡು ವರ್ಷಗಳ ವಯೋಮಿತಿ ಸಡಿಲಗೊಳಿಸಿರುವುದರಿಂದ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಲ್ಲಿದ್ದ ಆದರೆ ವಯೋಮಿತಿ ದಾಟುವ ಆತಂಕದಲ್ಲಿದ್ದ ಅಭ್ಯರ್ಥಿಗಳಿಗೆ ಅನುಕೂಲ ತಂದಿದೆ.

ಆದರೆ ಸರಕಾರ ಕೇವಲ ಒಂದು ವರ್ಷ (ಮೇ 23, 2023ರಿಂದ) ಮಾತ್ರ ವಿನಾಯಿತಿ ನೀಡಿರುವುದರಿಂದ ನೇಮಕಾತಿ ಪ್ರಕ್ರಿಯೆ ಮುಂದಿನ ವರ್ಷದ ಮೇ 23ರೊಳಗೆ ಮುಕ್ತಾಯಗೊಂಡರೆ ಮಾತ್ರ ವಯೋಮಿತಿಯ ಗಡಿಯಲ್ಲಿರುವ ಅಭ್ಯರ್ಥಿಗಳಿಗೆ ಸಹಾಯವಾಗಲಿದೆ.

ಸರಕಾರ ಒಂದೇ ಬಾರಿ ನೇಮಕಾತಿ ಪ್ರಕಿಯೆಗೆ ಚಾಲನೆ ನೀಡುತ್ತದೆ. ಆದರೆ ಅನುದಾನಿತ ಶಾಲೆ, ಕಾಲೇಜುಗಳಲ್ಲಿ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಸರಕಾರದ ಇಂದಿನ ತೀರ್ಮಾನದಿಂದಾಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನೇಮಕಾತಿ ಪ್ರಯತ್ನ ನಡೆಸುತ್ತಿರುವ, ವಯಸ್ಸಿನ ಮಿತಿ ದಾಟಿರುವ ಸಾವಿರಾರು ಶಿಕ್ಷಕರು ಮತ್ತು ಸಿಬಂದಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ರಾಜ್ಯ ಪಿಯು ಗಣಿತ ಫಾರಂನ ಅಧ್ಯಕ್ಷ ಎಸ್‌. ಆರ್‌. ವೆಂಕಟೇಶ್‌ ಹೇಳುತ್ತಾರೆ.

ಟಾಪ್ ನ್ಯೂಸ್

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ

Kabbinale

Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌ ಗುಂಡೂರಾವ್‌

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌ ಗುಂಡೂರಾವ್‌

Dinesh Gundu Rao: ತುಪ್ಪದ ಗುಣಮಟ್ಟ ಪರಿಶೀಲನೆಗೆ ಸೂಚನೆ

Dinesh Gundu Rao: ತುಪ್ಪದ ಗುಣಮಟ್ಟ ಪರಿಶೀಲನೆಗೆ ಸೂಚನೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ

badminton

Badminton; ಅನ್ಮೋಲ್‌ ಖರಬ್‌ಗೆ ಬ್ಯಾಡ್ಮಿಂಟನ್‌ ಪ್ರಶಸ್ತಿ

1-dtt

Duleep Trophy:ಇಂಡಿಯಾ ಎ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.