![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 8, 2023, 5:16 AM IST
ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲ.ರೂ.ಗಳನ್ನು ಪಡೆದು ವಂಚಿಸಿರುವ ಘಟನೆ ನಡೆದಿದೆ.
ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ದೂರುದಾರರಿಗೆ ಜೂ. 4ರಂದು ಇನ್ಸ್ಟಾಗ್ರಾಂ ಮೆಸೆಂಜರ್ನಲ್ಲಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ. ಲಾಭಾಂಶ ಬರುವುದಾಗಿ ಹೇಳಿದ್ದ. ಅದರಂತೆ ದೂರುದಾರರು 50,000 ರೂ. ಹಣ ವರ್ಗಾಯಿಸಿದರು. ಆಗ ಅಪರಿಚಿತ ವ್ಯಕ್ತಿ 6,90,000 ರೂ. ಲಾಭಾಂಶ ಬಿಟ್ಕಾಯಿನ್ ರೂಪದಲ್ಲಿ ಬಂದಿರುವುದಾಗಿ ತಿಳಿಸಿದ.
ಆ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಕಳುಹಿಸಿದ. ಅದನ್ನು ಖಾತೆಗೆ ಜಮೆ ಮಾಡಬೇಕಾದರೆ 64,000 ರೂ. ವರ್ಗಾಯಿಸುವಂತೆ ಹೇಳಿದ್ದ ದೂರುದಾರರು ಅದನ್ನು ನಂಬಿ ಹಣ ವರ್ಗಾಯಿಸಿದ್ದರು. ಮತ್ತೆ ಕಮಿಷನ್ ಮೊತ್ತವಾಗಿ ಹಣ ನೀಡುವಂತೆ ಅಪರಿಚಿತ ವ್ಯಕ್ತಿ ಹೇಳಿದ್ದು ಅದನ್ನು ಕೂಡ ದೂರುದಾರರು ವರ್ಗಾಯಿಸಿದ್ದರು. ಅನಂತರ ಲಾಭಾಂಶದ ಎಲ್ಲ ಹಣವನ್ನು ಖಾತೆಗೆ ಜಮೆ ಮಾಡಬೇಕಾದರೆ ಇನ್ಸ್ಟಾ ಗ್ರಾಂ ಖಾತೆಯನ್ನು ಖಾತರಿಗೊಳಿಸಬೇಕಾಗಿದೆ.
ಇನ್ಸ್ಟಾಗ್ರಾಂ ಖಾತೆಯ ಪ್ರೊಫೈಲ್ ಎಡಿಟ್ ಮಾಡಿ ತಾನು ನೀಡಿದ ಇ-ಮೇಲ್ ಐಡಿ ಹಾಕುವಂತೆ ಹೇಳಿದ. ದೂರುದಾರರು ಅದರಂತೆ ಮಾಡಿದಾಗ ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ. ಆ ಇನ್ಸ್ಟಾ ಗ್ರಾಂ ಖಾತೆಯನ್ನು ಬಳಸಿ ಅಪರಿಚಿತ ವ್ಯಕ್ತಿಯು ದೂರುದಾರರ ಸ್ನೇಹಿತರಿಗೆ ಹಣ ಹೂಡಿಕೆ ಮಾಡುವಂತೆ ಸಂದೇಶಗಳನ್ನು ಕಳುಹಿಸಿದ್ದಾನೆ. ಅಪರಿಚಿತ ವ್ಯಕ್ತಿ ಒಟ್ಟು 1.64 ಲ.ರೂ. ವಂಚಿಸಿದ್ದಾನೆ ಎಂಬುದಾಗಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.