Madhya Pradesh: ಮದುವೆಯಾಗಿ 17 ದಿನದಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ
Team Udayavani, Jun 8, 2023, 11:16 AM IST
ಇಂದೋರ್: ಮದುವೆಯಾದ 17 ದಿನದಲ್ಲೇ ಪತಿಯೇ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿರುವುದು ವರದಿಯಾಗಿದೆ.
ವಿಕ್ರಮ್ ಅವರ ವಿವಾಹ 22 ವರ್ಷದ ಅಂಜಲಿ ಸತೋಲಿಯಾ ಅವರೊಂದಿಗೆ ಮೇ.21 ರಂದು ನಡೆದಿದೆ. ಮದುವೆಯಾಗಿ ಸಂತಸದಲ್ಲಿ ಇರಬೇಕಾದ ನವದಂಪತಿ ಬಾಳಿನಲ್ಲಿ ಭೀಕರ ಘಟನೆ ನಡೆದಿದೆ.
ಇಂದೋರ್ ನ ಮ್ಹೋವ್ ಪ್ರದೇಶದ ಧರ್ ನಾಕಾದಲ್ಲಿ ಈ ಘಟನೆ ನಡೆದಿದ್ದು,ಗ್ರಾಮಾಂತರ ಎಸ್ಪಿ ಹಿತಿಕಾ ವಾಸಲ್ ಅವರು ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತಿ – ಪತ್ನಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಪತಿ ಸಿಟ್ಟಿನಲ್ಲಿ ಕಿಚನ್ ಗೆ ಹೋಗಿ ಚಾಕು ತಂದು, ಪತ್ನಿ ಅಂಜಲಿ ಅವರ ಕತ್ತು ಸೀಳಿ, 15 ಬಾರಿ ಚುಚ್ಚಿ ಕೊಲೆಗೈದಿದ್ದಾನೆ. ಆ ಬಳಿಕ ತನ್ನ ಕೈಗೆ ಚುಚ್ಚಿಕೊಂಡಿದ್ದಾರೆ ಎಂದು ಪೊಲೀಸರಿಗೆ ಮೃತ ಮಹಿಳೆಯ ಅತ್ತೆ ಹೇಳಿದ್ದಾರೆ.
ಘಟನೆ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ತೀವ್ರ ರಕ್ತಸ್ರಾವವಾಗಿ ಅಂಜಲಿ ಮೃತಪಟ್ಟಿದ್ದಾಳೆ. ಪತಿ ವಿಕ್ರಮ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅವರಿಗೆ, ಮದುವೆ ಇಷ್ಟವಿರಲಿಲ್ಲ. ಬಲವಂತವಾಗಿ ಮನೆಯವರು ಮದುವೆ ಮಾಡಿಸಿದ್ದಾರೆ. ಈ ಕಾರಣದಿಂದ ಅವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.