ರಣಹೇಡಿಗಳ ವಿಚಾರ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ: ಬಿ.ಕೆ.ಹರಿಪ್ರಸಾದ್


Team Udayavani, Jun 8, 2023, 11:59 AM IST

ರಣಹೇಡಿಗಳ ವಿಚಾರ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಎಂದು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ ಬ್ರಿಟಿಷರಿಗೆ ಯಾಕೆ ನಾನು ಕ್ಷಮಾಪಣೆ ಕೇಳಿದ್ದೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ಇಂತಹ ರಣಹೇಡಿಗಳ ಬಗ್ಗೆ ನಮ್ಮ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಬಿಜೆಪಿ ಅವರು ಎಲೆಕ್ಷನ್ ಅಜೆಂಡವಾಗಿ ಮಾಡಿಕೊಂಡರೆ ಬಹಳ ಸಂತೋಷ. ಈ ಬಾರಿ ಅವರನ್ನು ಜನ ಮನೆಗೆ ಕಳಿಸಿದ್ದಾರೆ. ಮುಂದಿನ ಬಾರಿ ಅವರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.

ಪಠ್ಯಪುಸ್ತಕ ಒಂದೇ ಅಲ್ಲ, ಬಿಜೆಪಿ ಅನೈತಿಕ ಸರ್ಕಾರ ಮಾಡಿದ ನಂತರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನೇ ಸಂಪೂರ್ಣ ಕೇಸರಿಕರಣ ಮಾಡಲು ಹೊರಟಿದ್ದರು. ಭಾರತ ಸಾವಿರಾರು ವರ್ಷದಿಂದ ಜಾತ್ಯತೀತ ರಾಷ್ಟ್ರವಾಗಿ ಉಳಿದುಕೊಂಡಿದೆ. ಇದರ ಅರಿವಿಲ್ಲದೇ ವ್ಯವಸ್ಥೆ ಬುಡಮೇಲು ಮಾಡಲು ಬಿಜೆಪಿ ಹೊರಟಿತ್ತು. ಎಲ್ಲಾ ಕಡೆ ಬಿಜೆಪಿ, ಆರ್ ಎಸ್ಎಸ್ ತಮ್ಮ ಸಿದ್ದಾಂತವನ್ನು ತೂರಲು ಪ್ರಯತ್ನ ಮಾಡಿದ್ದಾರೆ. ಆ ಎಲ್ಲಾ ಕ್ಷೇತ್ರದಲ್ಲೂ ಸರಿ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ ಎಂದರು.

ಇದನ್ನೂ ಓದಿ:ರೋಹಿತ್ ಬಳಗ ಹತಾಶರಾಗಿ ಕಾಣುತ್ತಿತ್ತು..: WTC Final ಮೊದಲ ದಿನದ ಬಳಿಕ ಗಾವಸ್ಕರ್ ಮಾತು

ಹೆಡ್ಗೇವಾರ್ ಪಠ್ಯಪುಸ್ತಕ ಕೈ ಬಿಡುವ ವಿಚಾರವಾಗಿ ಮಾತನಾಡಿ, ಹೆಡ್ಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಮೊದಲು ಸಾಬೀತುಪಡಿಸಲಿ. ಬ್ರಿಟಿಷರ ಬಳಿ ಕ್ಷಮೆ ಕೇಳಿದ ನಕಲಿ ಸ್ವತಂತ್ರ ಹೋರಾಟಗಾರರಿಗೆ ಮನ್ನಣೆ ನೀಡುವುದಾದರೆ ಹೇಗೆ? ಗೋಡ್ಸೆ ಕೂಡ ರಾಷ್ಟ್ರಭಕ್ತ ಎಂದು ಯಾರೋ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರ ರಾಷ್ಟ್ರಭಕ್ತಿಗೂ, ಜನಸಾಮಾನ್ಯರ ರಾಷ್ಟ್ರಭಕ್ತಿಗೂ ಬಹಳಷ್ಟು ವ್ಯತ್ಯಾಸವಿದೆ ಎಂದರು.

ನೈತಿಕ ಪೊಲೀಸ್ ಗಿರಿ ವಿಚಾರವಾಗಿ ಮಾತನಾಡಿ, ನೈತಿಕ ಪೊಲೀಸ್ ಗಿರಿ ಇರುವುದು ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಾತ್ರ. ಬಜರಂಗದಳ ವಿಚಾರದ ಬಗ್ಗೆ ನಮ್ಮ ನಿಲುವನ್ನ ನಾವು ಸ್ಪಷ್ಟಪಡಿಸಿದ್ದೇವೆ. ಬಜರಂಗ ದಳದ ಹೆಸರು ಅವರು ಹೇಳಿದ್ದಕ್ಕೆ ಜನ ಸೋಲಿಸಿ ಕಳಿಸಿದ್ದಾರೆ. ಬಜರಂಗ ಬಲಿ, ಬಜರಂಗದಳ ಅಂತ ಹೇಳಿದ್ದಕ್ಕೆ ನೀವು ಯೋಗ್ಯರಲ್ಲ ಅಂದು ಜನ ತೀರ್ಮಾನಿಸಿದ್ದಾರೆ. ಇವೆಲ್ಲಾ ಬಿಟ್ಟು ಜನರ ಬದುಕಿನ ಬಗ್ಗೆ ಹಾಗೂ ಜನರ ಕಲ್ಯಾಣದ ಬಗ್ಗೆ ಕಾರ್ಯಕ್ರಮ ಮಾಡಬೇಕು. ಇನ್ನು ಮುಂದಾದರೂ ಕೂಡ ಕರ್ನಾಟಕವನ್ನು ಸರ್ವ ಜನ ಸಮಭಾವವೆಂದು ಹೇಳುತ್ತೇವೆ ಅದಕ್ಕೆ ಗೌರವ ಕೊಟ್ಟು ಬಾಳುವುದು ಒಳ್ಳೆಯದು ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.