ಜಗತ್ತಿಗೆ ತಾಪಮಾನದ ವಾರ್ನಿಂಗ್:; ದಶಕದಲ್ಲಿ 0.2 ಡಿ.ಸೆ. ಏರಿಕೆ!

ವಿಶ್ವದ 50 ಪ್ರಮುಖ ವಿಜ್ಞಾನಿಗಳಿಂದ ಎಚ್ಚರಿಕೆಯ ಕರೆಗಂಟೆ

Team Udayavani, Jun 9, 2023, 7:33 AM IST

TEMPERATURE

ಲಂಡನ್‌: ಬೇಸಗೆಯ ಧಗೆಯಿಂದ ಇನ್ನೇನು ಮುಂಗಾರಿನ ಸಿಂಚನದತ್ತ ದೇಶವು ತೆರೆದುಕೊಳ್ಳುತ್ತಿರುವಂತೆಯೇ 50 ವಿಜ್ಞಾನಿಗಳ ತಂಡವೊಂದು ಆಘಾತಕಾರಿ ಸುದ್ದಿಯನ್ನು ನೀಡಿದೆ. ಜಗತ್ತಿನ ತಾಪಮಾನ ಪ್ರತಿ 10 ವರ್ಷಗಳಿಗೆ 0.2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುತ್ತಿದೆ ಎಂಬ ಎಚ್ಚರಿಕೆಯ ಕರೆಗಂಟೆಯನ್ನು ಈ ವಿಜ್ಞಾನಿಗಳು ನೀಡಿದ್ದಾರೆ.
2013ರಿಂದ 2022ರವರೆಗೆ ದಶಕದಲ್ಲಿ 0.2 ಡಿ.ಸೆ.ನಂತೆ ಮಾನವ ಉತ್ತೇಜಿತ ತಾಪಮಾನವು ಹೆಚ್ಚುತ್ತಿದ್ದು, ಇದು ಮಾನವಕುಲಕ್ಕೆ ಮುಂದಿನ ದಿನಗಳಲ್ಲಿ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ಈ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಜಗತ್ತಿನಾದ್ಯಂತ ತಾಪಮಾನ ಏರಿಕೆಯಾಗಲು ಮಾನವನ ಚಟುವಟಿಕೆಗಳೇ ಕಾರಣ ಎನ್ನುತ್ತದೆ ಹವಾಮಾನ ಬದಲಾವಣೆಗೆ ಸಂಬಂಧಿಸಿದ ಅಂತರ್‌ ಸರ್ಕಾರಿ ಸಮಿತಿ(ಐಪಿಸಿಸಿ) ವರದಿ. ಮನುಷ್ಯರ ಚಟುವಟಿಕೆಗಳು ಹಸಿರುಮನೆ ಇಂಧನಗಳ ಹೊರಸೂಸುವಿಕೆಯನ್ನು ಹೆಚ್ಚಿಸಿರುವುದರಿಂದ ಜಾಗತಿಕ ತಾಪಮಾನ ಹೆಚ್ಚಳವಾಗಿದೆ ಎಂದೂ ಈ ವರದಿ ಹೇಳಿದೆ.

ಸಾರ್ವಕಾಲಿಕ ದಾಖಲೆ:
ಕಳೆದ ಒಂದು ದಶಕದಲ್ಲಿ ಪ್ರತಿ ವರ್ಷ ಸರಾಸರಿ 54 ಗಿಗಾ ಟನ್‌ಗಳನ್ನು ಇಂಗಾಲದ ಡೈಆಕ್ಸೆ„ಡ್‌ ವಾತಾವರಣಕ್ಕೆ ಬಿಡುಗಡೆಯಾಗುತ್ತಿದೆ. ಈ ಮೂಲಕ ಹಸಿರುಮನೆ ಇಂಧನ ಹೊರಸೂಸುವಿಕೆಯು ಸಾರ್ವಕಾಲಿಕ ದಾಖಲೆ ಬರೆದಿದೆ ಎಂದೂ ವರದಿ ತಿಳಿಸಿದೆ. ಇದೇ ವರ್ಷದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ ಕಾಪ್‌28 ಹವಾಮಾನ ಸಮ್ಮೇಳನ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಈ ವರದಿ ಬಿಡುಗಡೆಯಾಗಿದೆ. 2050ರೊಳಗೆ ಜಾಗತಿಕ ತಾಪಮಾನವನ್ನು 1.5 ಡಿ.ಸೆ.ನಲ್ಲಿ ಮಿತಿಗೊಳಿಸುವ ನಿಟ್ಟಿನಲ್ಲಿ ಇಡಲಾದ ಹೆಜ್ಜೆಗಳ ಕುರಿತು ಈ ಸಮ್ಮೇಳನದಲ್ಲಿ ಪರಿಶೀಲನೆ ಕೈಗೊಳ್ಳಲಾಗುತ್ತದೆ.

ದೇಶಗಳು ಮಾಡಬೇಕಾದ್ದೇನು?
ಜಗತ್ತಿನ ತಾಪಮಾನದ ಮೇಲೆ ಎಂದೆಂದೂ ಸರಿಪಡಿಸಲಾಗದಂಥ ಹಾನಿ ಆಗಿದೆ. ಈಗ ನಮ್ಮ ಮುಂದಿರುವ ದಾರಿಯೆಂದರೆ, 2015ರ ಪ್ಯಾರಿಸ್‌ ಒಪ್ಪಂದದ ವೇಳೆ ನಿಗದಿಪಡಿಸಲಾದ ತಾಪಮಾನದ ಮಿತಿಯೊಳಗೆ ಇರಲು ಪ್ರಯತ್ನಿಸುವುದು. ಅಂದರೆ,
– 2035ರೊಳಗೆ ವಿಶ್ವವು ಹಸಿರುಮನೆ ಇಂಧನ ಹೊರಸೂಸುವಿಕೆಯನ್ನು ಶೇ.60ರಷ್ಟು ಕಡಿತಗೊಳಿಸಬೇಕು.
– ಇಂಗಾಲದ ಡೈ ಆಕ್ಸೆ„ಡ್‌, ಮೀಥೇನ್‌ ಹಾಗೂ ಪಳೆಯುಳಿಕೆ ಇಂಧನದ ಸುಡುವಿಕೆಯು 250 ಶತಕೋಟಿ ಟನ್‌ಗಳ ಮಿತಿ ಮೀರಬಾರದು.
– 2030ರೊಳಗಾಗಿ ಇಂಗಾಲದ ಡೈ ಆಕ್ಸೆ„ಡ್‌ ಹೊರಸೂಸುವಿಕೆಯನ್ನು ಕನಿಷ್ಠ ಶೇ.40ರಷ್ಟು ತಗ್ಗಿಸುವುದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.