ಮುಂಗಾರು ಆಗಮನ: ರೈತರ ಮೊಗದಲ್ಲಿ ಮಂದಹಾಸ


Team Udayavani, Jun 10, 2023, 5:39 AM IST

rain

ಗುರುವಾರದಂದು ನೈಋತ್ಯ ಮಾರುತಗಳು ಕೇರಳ ಪ್ರವೇಶಿಸುವು ದರೊಂದಿಗೆ ದೇಶದಲ್ಲಿ ಮುಂಗಾರು ಋತು ಆರಂಭಗೊಂಡಿದೆ. ನೈಋತ್ಯ ಮಾರುತಗಳು ಈ ಬಾರಿ ಒಂದು ವಾರ ತಡವಾಗಿ ಕೇರಳವನ್ನು ಪ್ರವೇಶಿ ಸಿದ್ದು ಅಲ್ಲಿನ ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮಾತ್ರವಲ್ಲದೆ ಖಾಸಗಿ ಹವಾಮಾನ ಸಂಸ್ಥೆಗಳು ಕೂಡ ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೊಂಚ ವಿಳಂಬವಾಗಲಿದೆ ಎಂದು ಮುನ್ಸೂಚನೆ ನೀಡಿದ್ದವು. ಆದರೆ ಅರಬಿ ಸಮುದ್ರದಲ್ಲಿ ನೈಋತ್ಯ ಮಾರುತಗಳ ಚಲನೆಗೆ ಪೂರಕ ವಾತಾವರಣ ನಿರ್ಮಾಣಗೊಳ್ಳದೇ ಮತ್ತಷ್ಟು ವಿಳಂಬವಾಗಿತ್ತು. ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮ ನೈಋತ್ಯ ಮಾರುತಗಳು ತೀವ್ರತೆಯನ್ನು ಕಂಡುಕೊಂಡು ಗುರುವಾರ ಕೇರಳದ ಕರಾವಳಿಯನ್ನು ಪ್ರವೇಶಿಸಿದ್ದು ಕರಾವಳಿ ಜಿಲ್ಲೆಗಳು ಮತ್ತು ಒಳನಾಡಿನ ಕೆಲವೆಡೆ ಭಾರೀ ಮಳೆ ಸುರಿಯಲಾರಂಭಿಸಿದೆ.

ನೈಋತ್ಯ ಮಾರುತಗಳು ರಾಜ್ಯದ ಕರಾವಳಿಯನ್ನು ಪ್ರವೇಶಿಸುತ್ತಿದ್ದಂತೆ ಮುಂಗಾರು ಮಾರುತಗಳು ರಾಜ್ಯದೆಲ್ಲೆಡೆ ವ್ಯಾಪಿಸಿ ಮಳೆ ಸುರಿಸಲಿದೆ. ಅನಂತರದ ದಿನಗಳಲ್ಲಿ ಮುಂಗಾರು ಮಾರುತಗಳ ಚಲನೆಯ ತೀವ್ರತೆ ಯನ್ನು ಅವಲಂಬಿಸಿ ಹಂತಹಂತವಾಗಿ ರಾಜ್ಯ, ದೇಶದೆಲ್ಲೆಡೆ ವ್ಯಾಪಿಸಲಿದೆ.

ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡ ಮಾರುತ ನೈಋತ್ಯ ಮಾರುತಗಳ ಚಲನೆಗೆ ತಡೆಯಾಗಲಿದೆ ಎಂಬ ಆತಂಕ ಆರಂಭದಲ್ಲಿ ವ್ಯಕ್ತವಾಗಿತ್ತಾದರೂ ಇದೀಗ ಮುಂಗಾರು ಮಾರುತಗಳು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿ ಮಳೆ ಸುರಿಸತೊಡಗಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಅಷ್ಟು ಮಾತ್ರವಲ್ಲದೆ ಇದರಿಂದಾಗಿ ಕರ್ನಾಟಕ ಸಹಿತ ದೇಶದೆಲ್ಲೆಡೆ ನೀರಿಗಾಗಿ ಎದ್ದಿದ್ದ ಹಾಹಾಕಾರ ಮುಂಬರುವ ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಮಳೆಗಾಗಿ ಕಾತರದಿಂದ ಆಗಸದತ್ತ ದೃಷ್ಟಿ ನೆಟ್ಟಿದ್ದ ಜನರು ಅದರಲ್ಲೂ ಮುಖ್ಯವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಮುಂಗಾರು ಆಗಮನದ ಬೆನ್ನಲ್ಲೇ ಕೃಷಿ ಚಟುವಟಿಕೆಗಳು ಬಿರುಸು ಪಡೆಯಲಿವೆ. ಕೃಷಿ, ತೋಟಗಾರಿಕೆ ಇಲಾಖೆಯೂ ರೈತರಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜ, ಕೃಷಿ ಸಾಧನ, ಸಲಕರಣೆಗಳು, ರಸಗೊಬ್ಬರ ಪೂರೈಕೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿವೆ. ದೇಶದಲ್ಲಿರುವ ಒಟ್ಟಾರೆ ಕೃಷಿ ಪ್ರದೇಶದಲ್ಲಿ ಶೇ. 52ರಷ್ಟು ಭಾಗವು ಮಳೆಯನ್ನೇ ಅವಲಂಬಿಸಿಕೊಂಡಿದೆ. ಅಷ್ಟು ಮಾತ್ರವಲ್ಲದೆ ದೇಶದ ಒಟ್ಟಾರೆ ಕೃಷಿ ಉತ್ಪಾದನೆಯಲ್ಲಿ ಸುಮಾರು ಶೇ. 40ರಷ್ಟನ್ನು ಮಳೆಯಾಶ್ರಿತ ಕೃಷಿಯಿಂದಲೇ ಉತ್ಪಾದಿಸಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಜಲಮೂಲಗಳ ಮರುಪೂರಣ ಮತ್ತು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲು ಉತ್ತಮ ಮಳೆ ಸುರಿಯುವುದು ಅತ್ಯವಶ್ಯಕವಾಗಿದೆ.

ಕುಡಿಯುವ ನೀರು, ಜಲ ವಿದ್ಯುದಾಗಾರಗಳಿಗೆ ಅವಶ್ಯವಿರುವ ನೀರಿಗೂ ಮಳೆಯೇ ಆಧಾರವಾಗಿದೆ. ದೇಶದಲ್ಲಿ ಆಹಾರ ಭದ್ರತೆ ಮತ್ತು ಆರ್ಥಿಕತೆಗೆ ಮಳೆ ನಿರ್ಣಾಯಕ ಕೊಡುಗೆಯನ್ನು ನೀಡುತ್ತದೆ. ಈ ಬಾರಿ ದೇಶದಲ್ಲಿ ವಾಡಿಕೆಯಷ್ಟು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದು ರೈತರು ಅತ್ಯುತ್ಸಾಹದಿಂದಲೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸನ್ನದ್ಧರಾಗಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಋತು, ಭೂಮಿ ಹಚ್ಚಹಸುರಿನಿಂದ ನಳನಳಿಸುವಂತೆ ಮಾಡಿ, ರೈತರ ಬದುಕನ್ನು ಹಸನಾಗಿಸಲಿ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.