ಹಾನಗಲ್ಲನಲ್ಲಿ ವಾರದ ಸಂತೆ ಸ್ಥಳಾಂತರ
ಮುಂದಿನ ವಾರ ಏನಾಗುವುದೋ ಕಾದು ನೋಡಬೇಕಾಗಿದೆ.
Team Udayavani, Jun 10, 2023, 4:35 PM IST
ಹಾನಗಲ್ಲ: ಬಹುದಿನಗಳಿಂದ ಹಾನಗಲ್ಲ-ಶಿವಮೊಗ್ಗ ರಸ್ತೆಯಲ್ಲಿ ವಾಹನ ನಿಲುಗಡೆ ಹಾಗೂ ವಾರದ ಸಂತೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಸಾರ್ವಜನಿಕರು, ವಾಹನ ಸವಾರರಿಗೆ ಶುಕ್ರವಾರ ರಿಲೀಫ್ ಸಿಕ್ಕಿದೆ. ಪ್ರತಿ ಶುಕ್ರವಾರ ವಾರದ ಸಂತೆಯಂದು
ಹಾನಗಲ್ಲ-ಶಿವಮೊಗ್ಗ ರಸ್ತೆಗೆ ಹೊಂದಿಕೊಂಡು ತಾರಕೇಶ್ವರ ದೇವಸ್ಥಾನಕ್ಕೆ ಹೋಗುವ ಅಡ್ಡ ರಸ್ತೆಯಲ್ಲಿ ತರಕಾರಿ ಸಹಿತ ಗೃಹ ಬಳಕೆ ವಸ್ತುಗಳ ವ್ಯಾಪಾರ ನಡೆಸಿಕೊಂಡು ಬಂದಿದ್ದರು.
ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗಿತ್ತು. ಹಲವಾರು ಬಾರಿ ಸಂಬಂಧಿಸಿದ ಪುರಸಭೆಗೆ ಮನವಿ ಮಾಡಿದರೂ ವಾರದ ಸಂತೆ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ.
ಇತ್ತೀಚೆಗೆ ಇದೇ ಕ್ರಾಸ್ನಲ್ಲಿ ಬಾಲಕನೋರ್ವ ಅಪಘಾತದಲ್ಲಿ ಮೃತಪಟ್ಟಿದ್ದ. ಹೀಗಾಗಿ, ಗ್ರಾಮಸ್ಥರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪುರಸಭೆ ಕಳೆದ ಬುಧವಾರ ಸಭೆ ನಡೆಸಿ ಸಂತೆ ಮಾರುಕಟ್ಟೆಯನ್ನು ಮೊದಲಿದ್ದ ಹಾಗೆ ಸ್ಥಳಾಂತರಿಸಲು ನಿರ್ಧಸಿತ್ತು. ಆದಾಗ್ಯೂ, ವ್ಯಾಪಾರಸ್ಥರ ವಿರೋಧವಿತ್ತು. ಗುರುವಾರ ದಿನ ಮತ್ತೆ ಪುರಸಭೆ ವಾಹನದ ಮೂಲಕ ಸಂತೆ ಮಾರುಕಟ್ಟೆ ಸ್ಥಳಾಂತರಿಸಿದ ಬಗ್ಗೆ ಪ್ರಚಾರ ಮಾಡಿತ್ತು.
ಶುಕ್ರವಾರ ಬೆಳಿಗ್ಗಿನಿಂದ ಸಿಪಿಐ ಎಸ್.ಆರ್.ಶ್ರೀಧರ, ಪಿಎಸ್ಐ ಶರಣಬಸಪ್ಪ ಕಾಂದೆ ಹಾಗೂ ಪೊಲೀಸ್ ಸಿಬ್ಬಂದಿ ಅವರು ಸ್ಥಳದಲ್ಲೇ ಇದ್ದು ಅಂಗಡಿಗಳನ್ನು ಹಚ್ಚದಂತೆ ನಿಗಾ ವಹಿಸಿ ಬೇರೆ ಸ್ಥಳಗಳನ್ನು ಗುರುತಿಸಿ ಅಂಗಡಿ ಹಚ್ಚುವಂತೆ ಮನವಿ ಮಾಡಿದರು. ಇವರೊಂದಿಗೆ ಹಾನಗಲ್ಲ ಟೌನ್ ವೆಂಡಿಂಗ್ ಕಮಿಟಿ ಸದಸ್ಯ ಮಹ್ಮದಗೌಸ ಸವಣೂರ, ನಾಗೇಂದ್ರ ತುಮರಿಕೊಪ್ಪ ಸೇರಿದಂತೆ ಹಿರಿಯ ವ್ಯಾಪಾರಸ್ಥರು ಮಧ್ಯಸ್ಥಿಕೆ ವಹಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂಗಡಿಗಳನ್ನು ಹಚ್ಚಿ ವ್ಯಾಪಾರ
ಮಾಡಲು ಅನುಕೂಲ ಮಾಡಿಕೊಡಲಾಯಿತು.
ನಂತರ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆದವು. ಆದರೆ, ಖರೀದಿ ಮಾಡುವ ಗ್ರಾಹಕರಿಗೆ ಸ್ವಲ್ಪ ಕಿರಿಕಿರಿ ಆಗಿದೆ. ಮುಂದಿನ ವಾರ ಏನಾಗುವುದೋ ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.