![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 12, 2023, 5:07 AM IST
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಅಡ್ಡೊಳೆ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಢಿಕ್ಕಿ ಹೊಡೆದು ಹೊಳೆಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ನಸುಕಿನ ವೇಳೆ ನಡೆದಿದೆ.
ತಮಿಳುನಾಡಿನ ಹೊಸೂರಿನಿಂದ ಧರ್ಮಸ್ಥಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹರಿಪ್ರಸಾದ್ (45) ಅಪಘಾತದಿಂದಾಗಿ ಸಾವನ್ನಪ್ಪಿದ ನತದೃಷ್ಠ. ಕಾರಿನಲ್ಲಿದ್ದ ಚಾಲಕ ಗೋಪಿ (45) ಎಂಬವರ ಕಾಲು ಮುರಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನ ಪ್ರಯಾಣದ ವೇಳೆ ಚಾಲಕ ನಿದ್ದೆ ಮಂಪರಿಗೆ ಜಾರಿದ ಕಾರಣಕ್ಕೋ ಅಥವಾ ವಾಹನವನ್ನು ಹಿಂದಿಕ್ಕುವ ಭರದಲ್ಲಿಯೋ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಬೇಲಿಯನ್ನು ಭೇದಿಸಿ ಕಾರು ಹೊಳೆಗೆ ಬಿದ್ದಿದೆ. ಘಟನೆ ಸಂಭವಿಸಿದಾಕ್ಷಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಲ್ಲಿನ ಜನ ಸ್ಥಳೀಯರ ನೆರವಿನೊಂದಿಗೆ ರಕ್ಷಣೆಗೆ ಮುಂದಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಹಕಾರದೊಂದಿಗೆ ರಕ್ಷಣ ಕಾರ್ಯಾಚರಣೆಯನ್ನು ನಡೆಸಿದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.