![1hatharas](https://www.udayavani.com/wp-content/uploads/2024/07/1hatharas-415x233.jpg)
Congress ಆಡಳಿತವಿರುವ ರಾಜ್ಯಗಳ ಸ್ಥಿತಿ ನೋಡಿ :’ವಿಜಯ ಶಂಖನಾದ’ದಲ್ಲಿ ಪ್ರಿಯಾಂಕಾ
ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು 'ಘೋಷಣೆ'ಗಳಲ್ಲಲ್ಲ 'ಸತ್ಯ'ದ ಮೂಲಕ ಸೋಲಿಸುತ್ತೇವೆ...
Team Udayavani, Jun 12, 2023, 4:04 PM IST
![1-fssdf](https://www.udayavani.com/wp-content/uploads/2023/06/1-fssdf-620x408.jpg)
ಜಬಲ್ ಪುರ್(ಮಧ್ಯಪ್ರದೇಶ) : ಕರ್ನಾಟಕದಲ್ಲಿ ಗಮನಾರ್ಹ ಗೆಲುವಿನ ನಂತರ ಕಾಂಗ್ರೆಸ್ ಮಧ್ಯಪ್ರದೇಶ ಚುನಾವಣೆಗೆ ಸರ್ವ ಸಿದ್ಧತೆಗಳನ್ನು ನಡೆಸುತ್ತಿದ್ದು,ಬಿಜೆಪಿ ಕಸಿದುಕೊಂಡಿದ್ದ ಅಧಿಕಾರವನ್ನು ಮರಳಿ ಪಡೆಯಲು ಪಕ್ಷವು ಎಲ್ಲಾ ತಂತ್ರಗಳನ್ನು ಹಣೆಯುತ್ತಿರುವಂತೆ ತೋರುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಮಧ್ಯಪ್ರದೇಶಕ್ಕೆ ಭೇಟಿ ನೀಡಿ ನರ್ಮದಾ ಪೂಜೆ ನೆರವೇರಿಸಿದ್ದಾರೆ. ಪ್ರಿಯಾಂಕಾ ಅವರೊಂದಿಗೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಕಮಲ್ ನಾಥ್ ಕೂಡ ಇದ್ದರು.
ಜಬಲ್ ಪುರ್ ನಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ” ಕಾಂಗ್ರೆಸ್ ಪಕ್ಷವು ಛತ್ತೀಸ್ ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಿದೆ.ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸ್ಥಿತಿಯನ್ನು ಒಮ್ಮೆ ನೋಡಿ. ನಿಮಗೆ ಆಗ ಅರ್ಥವಾಗುತ್ತದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಖಾತರಿ ಯೋಜನೆ ಜಾರಿಗೆ ತರುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. ರಾಜ್ಯದ ಪ್ರತಿ ಮಹಿಳೆಗೆ ಪ್ರತಿ ತಿಂಗಳು 1500 ರೂಪಾಯಿ, ಗ್ಯಾಸ್ ಸಿಲಿಂಡರ್ ಬೆಲೆಯನ್ನು 1000 ರೂ.ನಿಂದ 500 ರೂ.ಗೆ ಇಳಿಸಲಾಗುವುದು, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು, ರೈತರ ಸಾಲ ಮನ್ನಾ, 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಿದ್ದು, 200 ಯೂನಿಟ್ ಬಳಕೆಯೊಳಗೆ ವೆಚ್ಚವನ್ನು ಅರ್ಧಕ್ಕೆ ಇಳಿಸಲಾಗುವುದು ಎಂದು ಭರವಸೆ ನೀಡಿದರು.
‘ಸತ್ಯ’ದಲ್ಲಿ ಅವರನ್ನು ಸೋಲಿಸಬಲ್ಲೆ
ಸಭೆಯನ್ನುದ್ದೇಶಿಸಿ ಮಾತನಾಡಿದ ಕಮಲ್ ನಾಥ್ ‘ಘೋಷಣೆ’ಗಳ ಮೂಲಕ ನಾನು ಶಿವರಾಜ್ ಸಿಂಗ್ ಜಿಯನ್ನು ಸೋಲಿಸಲು ಸಾಧ್ಯವಿಲ್ಲ, ಆದರೆ ‘ಸತ್ಯ’ದಲ್ಲಿ ಅವರನ್ನು ಸೋಲಿಸಬಲ್ಲೆ.ಇದಕ್ಕಾಗಿ ನಾನು ಶಿವರಾಜ್ ಸಿಂಗ್ ಅವರಿಗೆ ಸವಾಲು ಹಾಕುತ್ತೇನೆ.ನಾನು ಶಿವರಾಜ್ ಸಿಂಗ್ ಜೀ ಅವರನ್ನು ಕೇಳುತ್ತೇನೆ, ನೀವು ಮಧ್ಯಪ್ರದೇಶದ ಜನರಿಗೆ ಏನು ನೀಡಿದ್ದೀರಿ? ಹಣದುಬ್ಬರ, ನಿರುದ್ಯೋಗ, ನೇಮಕಾತಿ ಹಗರಣ ಮತ್ತು ಮಾಫಿಯಾ ಆಡಳಿತವನ್ನು ರಾಜ್ಯಕ್ಕೆ ನೀಡಿದ್ದೀರಿ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
![1hatharas](https://www.udayavani.com/wp-content/uploads/2024/07/1hatharas-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
MUST WATCH
ಹೊಸ ಸೇರ್ಪಡೆ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.