ಪ್ರತ್ಯೇಕ ಮಂಡಳಿ ರಚನೆ: 93 ಅಲೆಮಾರಿ ಸಮುದಾಯದ ಮುಖಂಡರಿಂದ ಡಿಸಿಎಂಗೆ ಮನವಿ

ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವ

Team Udayavani, Jun 12, 2023, 4:32 PM IST

DKShi

ಬೆಂಗಳೂರು: ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದೆ.

ಕುಮಾರ ಕೃಪ ಅತಿಥಿ ಗೃಹದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜತೆ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿ ಮಾಡಿದ ದ್ವಾರಕನಾಥ್ ಅವರು ಈ ಸಮುದಾಯಗಳ ಸಮಸ್ಯೆ ಹಾಗೂ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚೆ ಮಾಡಿದರು.

ಕಳೆದ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿದರು. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ ಅವರನ್ನ ಭೇಟಿ ಮಾಡುವಂತೆ ಡಿಸಿಎಂ ಸೂಚಿಸಿದರು.

ದ್ವಾರಕನಾಥ್ ಅವರು ಅಲೆಮಾರಿ ಜನಾಂಗಕ್ಕೆ ಸೇರಿದ 93ಸಮುದಾಯಗಳ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು.ಈ ಸಮುದಾಯದವರನ್ನು ಗುರುತಿಸಿ ಅವರ ಸಮಸ್ಯೆ ಬಗೆಹರಿಸಿ ರಕ್ಷಣೆ ನೀಡಲು ಒಂದು ಸಮಿತಿ ರಚನೆಗೆ ಮನವಿ ಮಾಡಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕು, ಗುರುತು ಇಲ್ಲದವರಿಗೆ ಗುರುತು ನೀಡಬೇಕು. ತುಳಿತಕ್ಕೆ ಒಳಗಾದವರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಇದು ನಮ್ಮ ಪಕ್ಷದ ಸಿದ್ಧಾಂತ ಹಾಗೂ ಜವಾಬ್ದಾರಿ. ಹೀಗಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾದುತ್ತೇವೆ. ನಂತರ ಸಂಬಂಧ ಪಟ್ಟ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಹೇಳಿದರು.

ಪ್ರತ್ಯೇಕ ನಿಗಮ ಸ್ಥಾಪನೆ ಮಾಡುತ್ತೀರಾ ಎಂಬ ಪ್ರಶ್ನೆಗೆ, “ಮೊದಲು ಈ ಸಮುದಾಯದವರನ್ನು ಗುರುತಿಸಿ ಅವರ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗುವುದು. ನಿಗಮ ಮಂಡಳಿ ಮಾಡಿದ ತಕ್ಷಣ ಸಮಸ್ಯೆ ನಿವಾರಣೆ ಆಗುವುದಿಲ್ಲ. ಈಗಾಗಲೇ ರಚನೆ ಆಗಿರುವ ನಿಗಮ ಮಂಡಳಿಗಳು ಎಲ್ಲಾ ಸಮಸ್ಯೆ ಬಗೆಹರಿಸಿಲ್ಲ. ಹೀಗಾಗಿ ಮೊದಲು ಅವರ ರಕ್ಷಣೆ ಮಾಡುವ ಕಾರ್ಯ ಆಗಬೇಕು” ಎಂದು ಉತ್ತರಿಸಿದರು.

ನಿಷ್ಕ್ರಿಯ ನಿಗಮ ಮಂಡಳಿ ಕೈ ಬಿಡುವ ಚಿಂತನೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ, “ಈಗಲೇ ಈ ವಿಚಾರವಾಗಿ ಹೇಳುವುದಿಲ್ಲ. ನಾವು ಮೊದಲು ಬಜೆಟ್ ಮಂಡನೆ ಮಾಡುತ್ತೇವೆ. ಈ ವಿಚಾರವಾಗಿ ಹಣಕಾಸು ಸಚಿವರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.

ಸಂಘ ಪರಿವಾರದ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಭೂಮಿ ಮರುಪರಿಶೀಲನೆ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ, “ಕಂದಾಯ ಸಚಿವರು ಈ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಟಾಪ್ ನ್ಯೂಸ್

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.