ಒಡೆದ ಪೈಪ್‌ ಸರಿಪಡಿಸದ ಅಧಿಕಾರಿಗಳು; ಕಲುಷಿತ ನೀರು ಸೇವಿಸುತ್ತಿರುವ ಜನತೆ


Team Udayavani, Jun 12, 2023, 5:20 PM IST

ಒಡೆದ ಪೈಪ್‌ ಸರಿಪಡಿಸದ ಅಧಿಕಾರಿಗಳು; ಕಲುಷಿತ ನೀರು ಸೇವಿಸುತ್ತಿರುವ ಜನತೆ

ದೋಟಿಹಾಳ: ಕಳೆದ ಒಂದು ತಿಂಗಳಿನಿಂದ ಜೆಜೆಎಂನವರು ನೀಡುವ ನೀರನ್ನೇ ಕುಡಿಯುತ್ತಿದ್ದೇವೆ. ಕಲುಷಿತ ನೀರಿನ ಬಗ್ಗೆ ಅಧಿ ಕಾರಿಗಳಿಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕೇಸೂರ ಗ್ರಾಪಂ ವ್ಯಾಪ್ತಿಯ ಕಲಕೇರಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅಳವಡಿಸಲಾದ ಪೈಪಲೈನ್‌ ಗಳು ಒಡೆದು ಸುಮಾರು 2 ತಿಂಗಳಾದರು ಸರಿಪಡಿಸುವ ಕೆಲಸಕ್ಕೆ ಜೆಜೆಎಂ ಅ ಧಿಕಾರಿಗಳು ಮುಂದಾಗಿಲ್ಲ. ಇದರಿಂದ ಈ ಗ್ರಾಮದ ಜನ ಪ್ರತಿನಿತ್ಯ ಕಲುಷಿತ ನೀರನ್ನೇ ಕುಡಿಯುತ್ತಿದ್ದಾರೆ.

ಕಲಕೇರಿ ಗ್ರಾಮದಲ್ಲಿ ಇದುವರೆಗೂ ಒಂದು ಶುದ್ಧ ಕುಡಿಯುವ ನೀರಿ ಘಟಕವಿಲ್ಲ. ಇಲ್ಲಿ ಜನ ನಲಿ ನೀರನ್ನು ಕುಡಿಯುತ್ತಿದ್ದಾರೆ. ಕಲಕೇರಿ ಗ್ರಾಮದಲ್ಲಿ ಸುಮಾರು 800ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಇವರಿಗೆ ಇದುವರೆಗೂ ಶುದ್ಧ ನೀರು ಸಿಗುತ್ತಿಲ್ಲ. ಹೀಗಾಗಿ ಶುದ್ಧ ಕುಡಿಯುವ ನೀರಿನಗಾಗಿ ಗ್ರಾಮಸ್ಥರು ನಡವಲಕೊಪ್ಪ, ಕೇಸೂರು ಹಾಗೂ ದೋಟಿಹಾಳ ಗ್ರಾಮಗಳಿಗೆ ಹೋಗಿ ತರಬೇಕು.
ಕೆಲವು ಗ್ರಾಮಸ್ಥರು ಈ ಗ್ರಾಮಗಳನ್ನೇ ಅವಲಂಬಿಸಿದ್ದಾರೆ.

ಇಂತಹ ಸ್ಥಿತಿಯಲ್ಲಿ ಹಾಗೂ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಸದ್ಯ ವಾಂತಿ ಭೇದಿಗಳ ಪ್ರಕರಣಗಳು ಕಾಣಿಸುತ್ತಿದ್ದರು. ಈ ಗ್ರಾಮದ ಜನರ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಹಾಗೂ ಗ್ರಾಮದಲ್ಲಿ ಒಡೆದ ಪೈಪ್‌ಗ್ಳನ್ನು ಸರಿಪಡಿಸುತ್ತಿಲ್ಲ. ಕಲುಷಿತ ನೀರು ಸೇವಿಸಿ ಹತ್ತು ವರ್ಷದ ಬಾಲಕಿ ಮೃತಪಟ್ಟಿದಾಳೆ. ಇಡೀ ತಾಲೂಕು ಆಡಳಿತ ಕಳೆದ 3-4 ದಿನಗಳಿಂದ ಹಗಲಿರುಳು ಶ್ರಮಿಸುತ್ತಿದೆ. ಆದರೆ ಜೆಜೆಎಂ ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲವೆಂಬಂತೆ ಕಾಲಹರಣ ಮಾಡುತ್ತಿದ್ದಾರೆ
ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಎಚ್ಚರಗೊಳ್ಳಿ
ತಾಲೂಕಿನ ಬಿಜಕಲ್‌ ಜುಮಲಾಪುರ, ಸಾಸ್ವಿಹಾಳ, ಕೆ. ಬೋದೂರ, ಕೆ. ಬೋದೂರ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಈಗಾಗಲೇ ವಾಂತಿ ಭೇದಿ ಪ್ರಕರಣಗಳು ಒಂದೊಂದಾಗಿ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜೆಜೆಎಂ ನವರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವದರ ಜೊತೆಗೆ ಕಳಪೆ ಮಟ್ಟದ ಕಾಮಗಾರಿಗಳನ್ನು ಸರಿಪಡಿಸಿ ಮುಂದೇ ಆಗುವ ಅನಾಹುತಗಳು ತಡೆಗಟ್ಟಬೇಕು ಎಂಬುವುದು ಪ್ರಜ್ಞಾವಂತರ ನಾಗರಿಕರ ಕಳಕಳಿಯಾಗಿದೆ.

ವಾಂತಿ ಭೇದಿ ಆತಂಕ
ತಾಲೂಕಿನ ಅನೇಕ ಹಳ್ಳಿಗಳಲ್ಲಿ ಜೆಜೆಎಂನವರು ಹಾಕಿರುವ ಪೈಪ್‌ಲೈನಗಳು ತಿಪ್ಪೆಗುಂಡಿ, ಚರಂಡಿ ಸೇರಿದಂತೆ ಅನೇಕ ಅನೈರ್ಮಲ್ಯ ಪ್ರದೇಶಗಳ ಇರುವ ಜಾಗಗಳಲ್ಲಿ ಇವೆ. ಒಂದು ವೇಳೆ ಆ ಪೈಪ್‌ಗಳಲ್ಲಿ ಡ್ಯಾಮೇಜ್‌ ಉಂಟಾದರೆ ಆ ನೀರು ಕುಡಿಯುವ ಜನರು ವಾಂತಿ ಭೇದಿಯಿಂದ ನರಳಬೇಕಾಗುತ್ತದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಹೀಗಾಗಿ 15 ದಿನಗಳನಿಂದ ನಲ್ಲಿ ನೀರನ್ನೆ ಕುಡಿಯುತ್ತಿದ್ದೇವೆ. ಜೆಜೆಎಂ ನಲ್ಲಿ ಮೂಲಕ ನೀರು ಕಲುಷಿತವಾಗಿ ಬರುತ್ತದೆ. ಅದೇ ನೀರಿನ್ನೆ ಕುಡಿಯುತ್ತಿದೇವೆ. ಗ್ರಾಮದಲ್ಲಿ 1-2 ಕಡೆಗಳಲ್ಲಿ ಪೈಪ್‌ಗಳು ಒಡೆದಿವೆ. ಅವುಗಳನ್ನು ಸರಿಪಡಿಸಿಲ್ಲ.
ಲಕ್ಷ್ಮವ್ವ ಬಲಕುಂದಿ, ಕಲಕೇರಿ ಗ್ರಾಮಸ್ಥೆ

ಕಲಕೇರಿ ಗ್ರಾಮದಲ್ಲಿ ಜೆಜೆಎಂ ನೀರು ಜನರು ಕುಡಿಯುತ್ತಿದ್ದಾರೆ. ಅಲ್ಲಿ 1-2 ಕಡೆ ಜೆಜೆಎಂ ಪೈಪ್‌ಲೈನ್‌ ಡ್ಯಾಮೇಜ್‌ ಆಗಿದೆ.
ಇದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ಹಾಗೂ ನೀರು ಸರಬರಾಜು, ಜೆಜೆಎಂ ಅ ಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ
ಯಾವುದೇ ಪ್ರಯೋಜನವಾಗಿಲ್ಲ.
ಅಮೀನಸಾಬ್‌ ಅಲಂದಾರ
ಕೇಸೂರ ಗ್ರಾಪಂ ಪಿಡಿಒ

ಕೂಡಲೇ ಕಲಕೇರಿ ಗ್ರಾಮದಲ್ಲಿ ಜೆಜೆಎಂ ಪೈಪ್‌ಲೈನ್‌ ಡ್ಯಾಮೇಜ್‌ ಆಗಿದನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳುತ್ತೇವೆ.
ಶಿವಪ್ಪ ಸುಭೇದಾರ, ತಾಪಂ ಇಒ ಕುಷ್ಟಗಿ

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.