ಶಕ್ತಿ ಯೋಜನೆ: ಮೊದಲ ದಿನ 5.71 ಲಕ್ಷ ಮಹಿಳೆಯರ ಪ್ರಯಾಣ

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ "ಶಕ್ತಿ" ಯೋಜನೆಗೆ ಭರ್ಜರಿ ಸ್ಪಂದನೆ

Team Udayavani, Jun 13, 2023, 7:07 AM IST

SHAKTI

ಬೆಂಗಳೂರು: “ಶಕ್ತಿ” ಯೋಜನೆಯಡಿ ಮೊದಲ ದಿನವೇ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಯೋಜನೆಗೆ ರವಿವಾರ ಮಧ್ಯಾಹ್ನ 1ಕ್ಕೆ ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ. ಮಧ್ಯರಾತ್ರಿ 12ರ ವರೆಗೆ ಅಂದರೆ ಕೇವಲ 11 ತಾಸುಗಳಲ್ಲಿ 5,71,023 ಮಹಿಳೆಯರು ವಿವಿಧೆಡೆ ಪ್ರಯಾಣಿಸಿದ್ದಾರೆ. ಈ ಪೈಕಿ ಬಿಎಂಟಿಸಿಯಲ್ಲಿ ಅತಿಹೆಚ್ಚು, ಅಂದರೆ 2.01 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಎಸ್‌ಆರ್‌ಟಿಸಿಯಲ್ಲಿ 1.93 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಒಟ್ಟು 5.71 ಲಕ್ಷ ಪ್ರಯಾಣಿಕರ ಪ್ರಯಾಣದ ಮೊತ್ತ 1.40 ಕೋಟಿ ರೂ. ಆಗಿದೆ.

ವಾರಾಂತ್ಯ ಹಾಗೂ ಮೊದಲ ದಿನವಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ ತುಸು ಕಡಿಮೆಯೇ ಎಂದು ಹೇಳಬೇಕು. ಮುಂದಿನ ದಿನಗಳಲ್ಲಿ ಮಹಿಳೆಯರ ಪ್ರಮಾಣ ಹಲವು ಪಟ್ಟು ಹೆಚ್ಚಲಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಕೆಎಸ್‌ಆರ್‌ಟಿಸಿ ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಲಗೇಜ್‌ ಟಿಕೆಟ್‌; ಗೊಂದಲ
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಬೆನ್ನಲ್ಲೇ ಬಸ್‌ಗಳಲ್ಲಿ ಸೋಮವಾರ ಲಗೇಜ್‌ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಇದು ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ವಾಗ್ವಾದಕ್ಕೂ ಎಡೆಮಾಡಿಕೊಟ್ಟಿತು. ಮಹಿಳಾ ಪ್ರಯಾಣಿಕರಿಗೆ ಸಂಪೂರ್ಣ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಯೋಜನೆ ಫ‌ಲಾನುಭವಿಗಳು ತರುವ ಲಗೇಜ್‌ಗೆ ಶುಲ್ಕ ಪಾವತಿಸಲು ತಕರಾರು ತೆಗೆಯುತ್ತಿದ್ದಾರೆ. ಈ ಬಗ್ಗೆ ಮನದಟ್ಟು ಮಾಡುವಲ್ಲಿ ನಿರ್ವಾಹಕರು ಹೈರಾಣಾಗುತ್ತಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇದು ವಾಗ್ವಾದಕ್ಕೂ ಕಾರಣವಾಗಿದೆ. ಬಸ್‌ಗಳಲ್ಲಿ ಗರಿಷ್ಠ ಲಗೇಜು 30 ಕೆ.ಜಿ. ಲಗೇಜು ಕೊಂಡೊಯ್ಯಲು ಅವಕಾಶ ಇದೆ. ಇದನ್ನು ಮೀರಿದರೆ, ಕಡ್ಡಾಯವಾಗಿ ಆ ಲಗೇಜ್‌ಗೆ ಟಿಕೆಟ್‌ ಪಡೆಯಬೇಕಾಗುತ್ತದೆ. ಆದರೆ ಕೆಲವರು ಇದಕ್ಕೆ ಆಕ್ಷೇಪ ಎತ್ತುತ್ತಿದ್ದಾರೆ.

ಸರಕಾರಿ ಬಸ್‌ ಹತ್ತಲು ನೂಕು ನುಗ್ಗಲು
“ಶಕ್ತಿ” ಯೋಜನೆ ಆರಂಭವಾದ 2ನೇ ದಿನವಾದ ಸೋಮವಾರವೂ ರಾಜ್ಯದ ಹಲವೆಡೆ ಸರಕಾರಿ ಬಸ್‌ಗಳಲ್ಲಿ ಮಹಿಳೆಯರ ನೂಕುನುಗ್ಗಲು ಕಂಡುಬಂತು. ರಾಮನಗರ ಜಿಲ್ಲೆಯಲ್ಲಿ ಬಸ್‌ಗಾಗಿ ಪ್ರಯಾಣಿಕರು ಪರದಾ ಡುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳಿಗೆ ಶಾಪ ಹಾಕಿದರು. ಚನ್ನಪಟ್ಟಣ, ರಾಮನಗರ ಬಸ್‌ನಿಲ್ದಾಣದಿಂದ ಹೊರಟ ಎಲ್ಲ ಬಸ್‌ಗಳ ಸೀಟುಗಳು ಭರ್ತಿಯಾಗಿದ್ದವು. ನಿಲ್ಲುವುದಕ್ಕೂ ಜಾಗವಿಲ್ಲದೆ ಕೆಲವು ಪ್ರಯಾಣಿಕರು ಫ‌ುಟ್‌ ಬೋರ್ಡ್‌ ಮೇಲೆ ನಿಂತು ಪ್ರಯಾಣಿಸಿದರು. ಸಾರಿಗೆ ಸಂಸ್ಥೆ ಬಸ್‌ಗಳ ಕೊರತೆಯಿಂದ ಕೆಲವರು ಖಾಸಗಿ ಬಸ್‌ಗಳನ್ನು ಅವಲಂಬಿಸುವಂತಾಯಿತು. ರೈಲಿನಲ್ಲಿ ಮತ್ತು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರೂ ಕೆಎಸ್‌ಆರ್‌ಟಿಸಿ ಬಸ್‌ ಕಡೆ ಮುಖ ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲೂ ಸರಕಾರಿ ಬಸ್‌ಗಳಲ್ಲಿ ನೂಕುನುಗ್ಗಲು ಕಂಡು ಬಂತು. ಪಕ್ಕದಲ್ಲೇ ಇರುವ ಖಾಸಗಿ ಬಸ್‌ಗಳು ಖಾಲಿಯಾಗಿ ಓಡುತ್ತಿದ್ದವು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.