Diabetics: ಮಧುಮೇಹಿಗಳ ರಾಷ್ಟ್ರವಾಗುತ್ತಿದೆ ಭಾರತ 

India is becoming a nation of diabetics

Team Udayavani, Jun 13, 2023, 7:29 AM IST

DIABETES
ಆಧುನಿಕ ಜೀವನ ಶೈಲಿ, ಜಂಕ್‌ ಫ‌ುಡ್‌ ಸೇವನೆ,  ವ್ಯಾಯಾಮದ  ಕೊರತೆ, ಒತ್ತಡದ ಬದುಕು ಇವೆಲ್ಲವುಗಳನ್ನು ನಿಭಾಯಿಸುವಲ್ಲಿ ವಿಫ‌ಲವಾಗಿರುವ ಭಾರತವು ಇಂದು ಮಧುಮೇಹಿಗಳ ರಾಷ್ಟ್ರವಾಗುತ್ತಿದೆ. ದಿ ಲ್ಯಾನ್‌ಸೆಟ್‌ ಜರ್ನಲ್‌ ಇತ್ತೀಚಿಗೆ ಪ್ರಕಟಿಸಿದ ಸಮೀಕ್ಷೆಯ ವರದಿಯಲ್ಲಿ ಈ ಮಾಹಿತಿ ಹೊರಬಿದ್ದಿದೆ. ಭಾರತದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಆರೋಗ್ಯ ಸಮೀಕ್ಷೆಯಲ್ಲಿ ದೇಶದಲ್ಲಿ ಮಧುಮೇಹ ಸಮಸ್ಯೆಗೆ ಒಳಗಾಗಿರುವವರ  ಸಂಖ್ಯೆ ಅಧಿಕವಾಗಿದ್ದು  ಈ ನಿಟ್ಟಿನಲ್ಲಿ ಶೀಘ್ರವಾಗಿ ಕ್ರಮ ತೆಗೆದು ಕೊಳ್ಳಬೇಕು ಎಂದು  ವರದಿ ಹೇಳಿದೆ. ಏನಿದು ವರದಿ ? ವರದಿಯಲ್ಲೇನಿದೆ? ಎಂಬ ಮಾಹಿತಿ ಇಲ್ಲಿದೆ.
ಯಾರ ಸಮೀಕ್ಷೆ ?
ಮದ್ರಾಸ್‌ ಡಯಾಬಿಟಿಕ್ಸ್‌ ರಿಸರ್ಚ್‌ ಫೌಂಡೇಶನ್‌ (ಎಂಡಿಆರ್‌ಆಫ್ ), ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌), ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಜಂಟಿಯಾಗಿ ಮಧುಮೇಹ ಹಾಗೂ ಕ್ರೋನಿಕ್‌ ನಾನ್‌ ಕಮ್ಯುನಿಕೇಬಲ್‌ ಡಿಸೀಸ್‌ನ (ಎನ್‌ಸಿಡಿ ) ಮೇಲೆ ಕೈಗೊಂಡ ದೇಶದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ.
ಗೋವಾದಲ್ಲಿ ಅಧಿಕ 
ಈ ಸಮೀಕ್ಷೆಯ ಪ್ರಕಾರ 2019-2021ರ ನಡುವೆ ಭಾರತದಲ್ಲಿ 101 ಮಿಲಿಯನ್‌ ಮಧುಮೇಹ  ಹಾಗೂ 136 ಮಿಲಿಯನ್‌ ಜನರು ಪೂರ್ವ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ರಾಜ್ಯವಾರು ಸಮೀಕ್ಷೆಯಲ್ಲಿ ಗೋವಾ ಗರಿಷ್ಠ ಅಂದರೆ ಶೇ.26.4 ರಷ್ಟು ಮಧುಮೇಹಿಗಳನ್ನು ಒಳಗೊಂಡಿದ್ದು ಮೊದಲ ಸ್ಥಾನದಲ್ಲಿದ್ದರೆ, ಅನಂತರದ ಸ್ಥಾನದಲ್ಲಿ  ಪುದುಚೇರಿ, ಕೇರಳ (ಶೇ.25) ರಾಜ್ಯಗಳಿವೆ. ಇನ್ನು ಕನಿಷ್ಠ ಅಂದರೆ ಶೇ.4.8ರಷ್ಟು ಮಧುಮೇಹಿಗಳನ್ನು ಹೊಂದಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ವರದಿಯ ಪ್ರಕಾರ ಭಾರತದ ಗ್ರಾಮೀಣ ಭಾಗದಲ್ಲಿ ಮುಂದಿನ 5 ವರ್ಷಗಳಲ್ಲಿ ಈ ಪರಿಸ್ಥಿತಿ ತೀವ್ರಸ್ತರಕ್ಕೆ ಹೋಗಲಿದೆ ಎಂದು ಎಚ್ಚರಿಸಿದೆ. ಜತೆಗೆ ವಿಶ್ವಸಂಸ್ಥೆಯು ಕುರುಡುತನ, ಕಿಡ್ನಿ ವೈಫ‌ಲ್ಯ, ಹೃದಯಾಘಾತ, ಪಾರ್ಶ್ವವಾಯು ಅಂತಹ ಸಮಸ್ಯೆಗಳಿಗೆ ಮಧುಮೇಹವೇ ಮೂಲ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಮಧುಮೇಹ ದೊಂದಿಗೆ ದೇಶದಲ್ಲಿ 315 ಮಿಲಿಯನ್‌ ಮಂದಿ ಅಧಿಕ ರಕ್ತದೊತ್ತಡ, 254 ಮಿಲಿಯನ್‌ ಬೊಜ್ಜಿನ ಹಾಗೂ 351 ಮಿಲಿಯನ್‌ ಹೊಟ್ಟೆಯ ಬೊಜ್ಜಿನ ಸಮಸ್ಯೆಗೆ ಒಳಗಾಗಿದ್ದಾರೆ ಅಲ್ಲದೇ 213 ಮಿಲಿಯನ್‌ ಜನರು ಹೈಪರ್‌ಕೊಲೆಸ್ಟ್ರಾಲ್‌ ಹಾಗೂ 185 ಮಿಲಿಯನ್‌ ಮಂದಿ ಅಧಿಕ ಎಲ್‌ಡಿಎಲ್‌ ಕೊಲೆಸ್ಟ್ರಾಲ್‌ನ್ನು ಹೊಂದಿದ್ದಾರೆ ಎಂದು ವರದಿಯಲ್ಲಿದೆ.
ಮಧುಮೇಹ ಹಾಗೂ ಎನ್‌ಸಿಡಿ 
ಸಮಸ್ಯೆಯು ದೇಶದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿದ್ದು, ಕೆಲವು ರಾಜ್ಯಗಳಲ್ಲಿ ಇದು ಅಧಿಕ ವಾಗುವ ಲಕ್ಷಣಗಳಿವೆ ಎಂದು ವರದಿ ಉಲ್ಲೇಖೀಸಿದೆ. ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ರಾಜ್ಯವಾರು ಯೋಜನೆಗಳನ್ನು ಶೀಘ್ರವಾಗಿ ರೂಪಿಸುವ ಅಗತ್ಯವಿದೆ ಎಂದು ಸಂಶೋಧನಕಾರರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.