‘ಆಡೇ ನಮ್ ಗಾಡ್’ ಅಂತಿದ್ದಾರೆ ನಟರಾಜ್ ಆ್ಯಂಡ್ ಗ್ಯಾಂಗ್!
Team Udayavani, Jun 13, 2023, 4:31 PM IST
“ಪಂಚಮ ವೇದ’, “ಶ್ರೀಗಂಧ’, “ಅರಗಿಣಿ’, “ಅರುಣೋದಯ’, “ರಂಗೋಲಿ’, “ಅಂಡಮಾನ್’, “ಮುಂಜಾನೆ ಮಂಜು’, “ಮುಸುಕು’ ಸಿನಿಮಾಗಳ ಖ್ಯಾತಿಯ ಹಿರಿಯ ನಿರ್ದೇಶಕ ಪಿ. ಹೆಚ್ ವಿಶ್ವನಾಥ್ ಈ ಬಾರಿ ಔಟ್ ಆ್ಯಂಡ್ ಔಟ್ ಕಾಮಿಡಿ ಕಥಾಹಂದರವನ್ನು ಪ್ರೇಕ್ಷಕರ ಮುಂದೆ ತರಲು ತಯಾರಿ ಮಾಡಿಕೊಂಡಿದ್ದಾರೆ. ಅಂದಹಾಗೆ, ಪಿ.ಹೆಚ್ ವಿಶ್ವನಾಥ್ ಆ್ಯಕ್ಷನ್-ಕಟ್ ಹೇಳುತ್ತಿರುವ ಈ ಹೊಸ ಸಿನಿಮಾಕ್ಕೆ “ಆಡೇ ನಮ್ ಗಾಡ್’ ಎಂಬ ಶೀರ್ಷಿಕೆ ಇಡಲಾಗಿದೆ.
“ಬಿ. ಬಿ. ಆರ್ ಫಿಲಂಸ್’ ಹಾಗೂ “ಎವರೆಸ್ಟ್ ಇಂಡಿಯಾ ಎಂಟರ್ ಟೈನರ್’ ಬ್ಯಾನರ್ನಡಿ ಪ್ರೊ. ಬಿ. ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಿಸುತ್ತಿರುವ “ಆಡೇ ನಮ್ ಗಾಡ್’ ಸಿನಿಮಾದಲ್ಲಿ “ಮ್ಯಾನ್ ಆಫ್ ದಿ ಮ್ಯಾಚ್’, “ರಾಮ ರಾಮ ರೇ’ ಸಿನಿಮಾಗಳ ಖ್ಯಾತಿಯ ನಟರಾಜ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಅನೂಪ್ ಶೂನ್ಯ, ಸಾರಿಕ ರಾವ್, ಬಿ. ಸುರೇಶ್ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಳೇ ಮೈಸೂರಿನ ಗ್ರಾಮೀಣ ಹಿನ್ನೆಲೆಯಲ್ಲಿ ಮತ್ತು ಮೂಡನಂಬಿಕೆಯ ಸುತ್ತ “ಆಡೇ ನಮ್ ಗಾಡ್’ ಸಿನಿಮಾದ ಕಥಾಹಂದರ ಸಾಗುತ್ತದೆ. ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಬಿ. ಎಸ್ ಕೆಂಪರಾಜು ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಸ್ವಾಮಿನಾಥನ್ ಸಂಗೀತ ಸಂಯೋಜನೆಯಿದೆ.
ಈಗಾಗಲೇ ಸದ್ದಿಲ್ಲದೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ ಸೆನ್ಸಾರ್ನಿಂದಲೂ ಬಿಡುಗಡೆಗೆ ಅನುಮತಿ ಪಡೆದುಕೊಂಡಿರುವ “ಆಡೇ ನಮ್ ಗಾಡ್’ ಚಿತ್ರತಂಡ, ಸದ್ಯ ಸಿನಿ ಮಾದ ಟೈಟಲ್ ಬಿಡುಗಡೆ ಮಾಡುವ ಮೂಲಕ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ “ಆಡೇ ನಮ್ ಗಾಡ್’ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.