Biperjoy: ಗುಜರಾತ್‌ಗೆ “ವ್ಯಾಪಕ ಹಾನಿ” ಭೀತಿ -ಚಂಡಮಾರುತದ ತೀವ್ರತೆ ಅಲ್ಪ ಕುಸಿತ

15ರವರೆಗೆ ಧಾರಾಕಾರ ಮಳೆ - ಗಂಟೆಗೆ 150 ಕಿ.ಮೀ. ವೇಗದಲ್ಲಿ ಬೀಸಲಿದೆ ಬಿರುಗಾಳಿ

Team Udayavani, Jun 14, 2023, 7:13 AM IST

BIPAR JOY GUJARTH

ನವದೆಹಲಿ: ಇದೇ 15ರಂದು(ಗುರುವಾರ) ಗುಜರಾತ್‌ನ ಜಖೌ ಬಂದರು ಸಮೀಪದಲ್ಲೇ ಅಪ್ಪಳಿಸಲಿರುವ ಪ್ರಬಲ ಚಂಡಮಾರುತ ಬೈಪರ್‌ಜಾಯ್‌ “ವ್ಯಾಪಕ ಹಾನಿ” ಉಂಟುಮಾಡುವ ಸಾಧ್ಯತೆಯಿದ್ದು, ಕಚ್‌, ದೇವಭೂಮಿ ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಹಾನಿಯಾಗುವ ಭೀತಿಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಹೇಳಿದೆ.

ಬೈಪರ್‌ಜಾಯ್‌ ಮಂಗಳವಾರ “ಅತ್ಯಂತ ತೀವ್ರತೆ”ಯಿಂದ “ಅತಿ ತೀವ್ರತೆ”ಯ ಚಂಡಮಾರುತವಾಗಿ ಮಾರ್ಪಾಡಾಗಿದೆ. ಜೂ.15ರ ಸಂಜೆ ಗಂಟೆಗೆ 125-150 ಕಿ.ಮೀ. ವೇಗದೊಂದಿಗೆ ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಮತ್ತು ಕಛ್‌ ಹಾಗೂ ಪಾಕಿಸ್ತಾನದ ಕರಾಚಿ ಕರಾವಳಿಯನ್ನು ಹಾದು ಹೋಗಲಿದೆ. ಗುಜರಾತ್‌ನ ಜಖೌ ಬಂದರಿನ ಸಮೀಪವೇ ಇದು ಅಪ್ಪಳಿಸಲಿದೆ. ಕಳವಳಕಾರಿ ಸಂಗತಿಯೆಂದರೆ, ಈ ಚಂಡಮಾರುತವು ಭಾರೀ ಪ್ರಮಾಣದಲ್ಲಿ ಹಾನಿ ಉಂಟುಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

20 ಸೆ.ಮೀ. ಮಳೆ:

ಚಂಡಮಾರುತದ ಪ್ರಭಾವವೆಂಬಂತೆ, ಕಛ್‌ ದ್ವಾರಕಾ, ಜಾಮ್‌ನಗರ ಮತ್ತು ಪೋರಬಂದರ್‌ ಜಿಲ್ಲೆಗಳಲ್ಲಿ ಜೂ.13ರಿಂದ 15ರವರೆಗೆ ಧಾರಾಕಾರ ಮಳೆಯಾಗಲಿದ್ದು, ಅಂದಾಜು 20 ಸೆ.ಮೀ. ಮಳೆ ಬೀಳುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಈ ಅವಧಿಯಲ್ಲಿ ಇಷ್ಟೊಂದು ಮಳೆಯಾಗುವುದಿಲ್ಲ. ಆದರೆ, ಈ ಬಾರಿ ಚಂಡಮಾರುತದಿಂದಾಗಿ ವರುಣ ಅಬ್ಬರಿಸಲಿದ್ದು, ತಗ್ಗುಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಹೆಚ್ಚಿದೆ ಎಂದೂ ಇಲಾಖೆ ತಿಳಿಸಿದೆ.

21,000 ಮಂದಿಯ ಸ್ಥಳಾಂತರ

ಕರಾವಳಿ ಪ್ರದೇಶಗಳ 10 ಕಿ.ಮೀ. ವ್ಯಾಪ್ತಿಯಲ್ಲಿನ ಜನರನ್ನು ಸ್ಥಳಾಂತರಿಸಲು ಗುಜರಾತ್‌ ಸರ್ಕಾರ ನಿರ್ಧರಿಸಿದೆ. ಅದರಂತೆ, ಈಗಾಗಲೇ ಒಟ್ಟು 21 ಸಾವಿರ ಮಂದಿಯನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯಾದ್ಯಂತ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಸೋಮವಾರ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಕರಾವಳಿ ರಕ್ಷಕ ಪಡೆಯ ಸುಧಾರಿತ ಲಘು ಹೆಲಿಕಾಪ್ಟರ್‌ ಮತ್ತು ಶೂರ್‌ ನೌಕೆಯ ಮೂಲಕ ಸೋಮವಾರ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ “ಕೀ ಸಿಂಗಾಪುರ’ ಎಂಬ ತೈಲ ಬಾವಿಯೊಳಗೆ ಕೆಲಸ ಮಾಡುತ್ತಿದ್ದ 50 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಚಂಡಮಾರುತದಿಂದ ಯಾವುದೇ ಪ್ರಾಣಹಾನಿ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಜಖೌ ಬಂದರು ಸ್ತಬ್ಧ

ಪ್ರತಿದಿನವೂ ಜನಸಂದಣಿಯಿಂದ ತುಂಬಿ ತುಳುಕುತ್ತಿದ್ದ ಗುಜರಾತ್‌ನ ಜಖೌ ಬಂದರು ಮಂಗಳವಾರ ಬಿಕೋ ಎನ್ನುತ್ತಿತ್ತು. ಪ್ರಬಲ ಚಂಡಮಾರುತವು ಈ ಬಂದರಿನ ಸಮೀಪವೇ ಅಪ್ಪಳಿಸಲಿರುವ ಕಾರಣ, ಇಲ್ಲಿರುವ ಬಹುತೇಕ ಮಂದಿಯನ್ನು ಸೋಮವಾರವೇ ಸ್ಥಳಾಂತರಿಸಲಾಗಿದೆ. ಕರ್ತವ್ಯದಲ್ಲಿರುವ ಬೆರಳೆಣಿಕೆಯ ಸಿಬ್ಬಂದಿ ಹೊರತುಪಡಿಸಿ ಎಲ್ಲರೂ ಇಲ್ಲಿಂದ ನಿರ್ಗಮಿಸಿದ್ದಾರೆ. ಹೀಗಾಗಿ, ಅಬ್ಬರಿಸುತ್ತಿರುವ ಕಡಲು, ಭೋರ್ಗರೆಯುತ್ತಿರುವ ಮಳೆಯ ಸದ್ದು ಬಿಟ್ಟರೆ, ಬಂದರಿನಲ್ಲಿ ಎಂದಿನ ಗೌಜುಗದ್ದಲ ಇಲ್ಲ. ನೂರಾರು ಮೀನುಗಾರಿಕಾ ದೋಣಿಗಳನ್ನು ದಡಕ್ಕೆ ತಂದು ಸಾಲಾಗಿ ನಿಲ್ಲಿಸಲಾಗಿದೆ. ಕರಾವಳಿ ರಕ್ಷಕ ಪಡೆ ಮತ್ತು ಬಿಎಸ್‌ಎಫ್ ಸಿಬ್ಬಂದಿ ಹೊರತುಪಡಿಸಿ ಎಲ್ಲರಿಗೂ ಬಂದರಿನೊಳಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ.

25 ವರ್ಷಗಳಲ್ಲಿ ಮೊದಲು

ಕುತೂಹಲದ ವಿಚಾರವೆಂದರೆ 25 ವರ್ಷಗಳಲ್ಲಿ ಮೊದಲ ಬಾರಿಗೆ ಜೂನ್‌ನಲ್ಲಿ ಗುಜರಾತ್‌ ಅನ್ನು ಹಾದು ಹೋಗಲಿರುವ ಮೊದಲ ಚಂಡಮಾರುತ ಬೈಪರ್‌ಜಾಯ್‌. ಅದು ಪ್ರತಿ ಗಂಟೆಗೆ 48ರಿಂದ 63 ಕಿಮೀ ವೇಗದಲ್ಲಿ ಗಾಳಿಯನ್ನೂ ಹೊಂದಿರಲಿದೆ. 1891ರ ಬಳಿಕ ಅತ್ಯಂತ ತೀವ್ರ ಗತಿಯ ಚಂಡಮಾರುತ ಜೂನ್‌ನಲ್ಲಿ ಗುಜರಾತ್‌ ಕರಾವಳಿಯನ್ನು ಅಪ್ಪಳಿಸಿದ್ದವು. 1920, 1961, 1964, 1996 ಮತ್ತು 1998ರಲ್ಲಿ ಇಂಥ ಘಟನೆ ನಡೆದಿದ್ದವು. ಅರಬ್ಬೀ ಸಮುದ್ರದಲ್ಲಿ 1965ರ ಬಳಿಕ ಎದ್ದ ಅತ್ಯಂತ ಗಂಭೀರ ಪರಿಣಾಮ ಉಂಟುಮಾಡುವ ಚಂಡಮಾರುತ ಬೈಪರ್‌ಜಾಯ್‌ ಆಗಿದೆ ಎಂದು ಐಎಂಡಿ ದಾಖಲೆಗಳಲ್ಲಿ ಉಲ್ಲೇಖಗೊಂಡಿದೆ.

ರೈಲುಗಳ ಸಂಚಾರ ವ್ಯತ್ಯಯ

ಪ್ರಬಲ ಚಂಡಮಾರುತವು ಗುಜರಾತ್‌ ಕರಾವಳಿಯತ್ತ ಆಗಮಿಸುತ್ತಿರುವಂತೆಯೇ ಪಶ್ಚಿಮ ರೈಲ್ವೆಯು ಗುಜರಾತ್‌ನ ಕರಾವಳಿ ಪ್ರದೇಶಗಳಿಗೆ ಸಂಚರಿಸುವ 50ಕ್ಕೂ ಅಧಿಕ ರೈಲುಗಳನ್ನು ಅಲ್ಪಾವಧಿಗೆ ಸ್ಥಗಿತಗೊಳಿಸಿದೆ. ಮುಂದಿನ 3 ದಿನಗಳಲ್ಲಿ ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ ಎಂದೂ ತಿಳಿಸಿದೆ. ಇದಲ್ಲದೇ, ವಿಪತ್ತು ನಿರ್ವಹಣಾ ಕೊಠಡಿಗಳು, ಸಹಾಯವಾಣಿ, ಪರಿಹಾರ ಮತ್ತು ರಕ್ಷಣಾ ರೈಲುಗಳ ಸನ್ನದ್ಧತೆ ಸೇರಿದಂತೆ ಇತರೆ ಸಿದ್ಧತಾ ಕಾರ್ಯಗಳನ್ನೂ ಪಶ್ಚಿಮ ರೈಲ್ವೆ ಕೈಗೊಂಡಿದೆ.

ಪಾಕ್‌ನಲ್ಲೂ ಸಿದ್ಧತೆ

ಬೈಪರ್‌ಜಾಯ್‌ ಚಂಡಮಾರುತವು ಪಾಕಿಸ್ತಾನದ ವಾಣಿಜ್ಯ ಹಬ್‌ ಕರಾಚಿ ಕರಾವಳಿಯನ್ನು ಹಾದುಹೋಗಲಿರುವ ಕಾರಣ ಪಾಕ್‌ ಸರ್ಕಾರ ಕೂಡ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಸನ್ನದ್ಧವಾಗಿದೆ. ತೀರದ ಸಮೀಪದಲ್ಲಿ ನೆಲೆಸಿರುವ ಸುಮಾರು 80 ಸಾವಿರ ಮಂದಿಯನ್ನು ಸ್ಥಳಾಂತರಿಸಲು ಸೇನೆ ಮತ್ತು ನೌಕಾಪಡೆಯ ನೆರವು ಪಡೆಯಲಾಗಿದೆ. ದಕ್ಷಿಣ ಸಿಂಧ್‌ ಪ್ರಾಂತ್ಯದಲ್ಲೇ ಅತಿ ಹೆಚ್ಚು ಮಂದಿಯ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.