ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ 20 ವರ್ಷ ಕಠಿನ ಸಜೆ


Team Udayavani, Jun 14, 2023, 6:19 AM IST

lok adalat

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದೆ.

ಅಂಕೋಲಾ ಕಾವಳಗದ್ದೆಯ ಸಚಿನ್‌ ಸಂತೋಷ್‌ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್‌ ಜಯಪಾಲ್‌ ನಾಯ್ಕ (33) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ
ಪಿಯುಸಿ ವಿದ್ಯಾರ್ಥಿನಿ 2022ರ ಎ.12ರಂದು ಮಧ್ಯಾಹ್ನ 12.45ರ ಸುಮಾರಿಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗುವ ಟಿಕೆಟ್‌ ಪಡೆಯಲೆಂದು ನಿಂತಿದ್ದಾಗ ಅಲ್ಲಿಗೆ ಬಂದ ಅಪರಾಧಿಗಳು ಆಕೆಯನ್ನು ಮಾತನಾಡಿಸುತ್ತ ಟಿಕೆಟ್‌ ಮಾಡಿಸಿಕೊಡುವುದಾಗಿ ಹೇಳಿದ್ದರು. ಅನಂತರ ಟಿಕೆಟ್‌ ಕೌಂಟರ್‌ನಲ್ಲಿ ಟಿಕೆಟ್‌ ಪಡೆಯುವಂತೆ ನಟಿಸಿ ಬಳಿಕ “ಇಲ್ಲಿ ಟಿಕೆಟ್‌ ಸಿಗುವುದಿಲ್ಲ. ಕಾರವಾರದಲ್ಲಿ ಟಿಕೆಟ್‌ ತೆಗೆಸಿಕೊಡುತ್ತೇವೆ. ಅಲ್ಲಿಗೆ ಹೋಗೋಣ” ಎಂದು ನಂಬಿಸಿ ಆಕೆಯನ್ನು ರೈಲಿನಲ್ಲಿ ಕಾರವಾರಕ್ಕೆ ಕರೆದೊಯ್ದಿದ್ದರು.

ಅಂಕೋಲಾದಲ್ಲಿ ಅಪರಾಧಿ ಪ್ರವೀಣ್‌ ಜಯಪಾಲ್‌ ನಾಯ್ಕನ ಮನೆಗೆ ಕರೆದೊಯ್ದು ಇಬ್ಬರು ಕೂಡ ಅತ್ಯಾಚಾರ ನಡೆಸಿದ್ದರು. ಎ.13ರಂದು ಕಾರವಾರದ ಲಾಡ್ಜ್ಗೆ ಕರೆದೊಯ್ದು ಅಲ್ಲಿಯೂ ಅತ್ಯಾಚಾರವೆಸಗಿದ್ದರು. ಎ.14ರಂದು ಮಂಗಳೂರು ರೈಲು ನಿಲ್ದಾಣಕ್ಕೆ ಕರೆತಂದು ಬಿಟ್ಟಿದ್ದರು. ಬಾಲಕಿಯನ್ನು ಗಮನಿಸಿದ ರೈಲ್ವೆ ಪೊಲೀಸರಿಗೆ ಸಂಶಯ ಬಂದು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಳು. ಅಪರಾಧಿಗಳನ್ನು ಬಂಧಿಸುವಲ್ಲಿ ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದರು. ರೈಲ್ವೇ ಪೊಲೀಸ್‌ ಇನ್‌ಸ್ಪೆಕ್ಟರ್‌ ಮೋಹನ್‌ ಕೊಟ್ಟಾರಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ಜೂ.12ರಂದು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಕ್ಸೋ ಕಾಯಿದೆ ಕಲಂ 6ರಂತೆ ಇಬ್ಬರಿಗೂ ತಲಾ 20 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಠಿನ ಸಜೆ, ಭಾರತೀಯ ದಂಡ ಸಂಹಿತೆ ಕಲಂ 366ರಡಿ ತಲಾ 10 ವರ್ಷ ಕಠಿನ ಸಜೆ, 30,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 6 ತಿಂಗಳ ಕಠಿನ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ 5 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶ ನೀಡಿದರು. ಆ ಹಣದಲ್ಲಿ 1 ಲ.ರೂ.ಗಳನ್ನು ಕೂಡಲೇ ಆಕೆಯ ವಿದ್ಯಾಭ್ಯಾಸಕ್ಕೆ ಒದಗಿಸಬೇಕು. ಉಳಿದ ಮೊತ್ತವನ್ನು ಠೇವಣಿಯಾಗಿ ಇಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.