KISSING SCENE: 21ರ ನಟಿಗೆ ಲಿಪ್ಲಾಕ್ ಮಾಡಿ ಟ್ರೋಲಾದ 49ರ ನಟ; ಅಸಹ್ಯವೆಂದ ನೆಟ್ಟಿಗರು
Team Udayavani, Jun 15, 2023, 3:00 PM IST
ಮುಂಬಯಿ: ಸಿನಿಮಾರಂಗಕ್ಕೆ ಬಂದ ಮೇಲೆ ಅಲ್ಲಿ ಎಲ್ಲಾ ಸವಾಲುಗಳನ್ನು ಎದುರಿಸಬೇಕು. ಪಾತ್ರಗಳನು ನಿಭಾಯಿಸುವಾಗ ಆ ಪಾತ್ರಗಳು ಜನರಿಗೆ ಹೇಗೆ ತಲುಪುತ್ತದೆ, ಜನ ಹೇಗೆ ಅದಕ್ಕೆ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವುದು ಮುಖ್ಯ.
ಬಾಲಿವುಡ್ನ ಪ್ರತಿಭಾವಂತ ನಟರಲ್ಲಿ ಒಬ್ಬರಾಗಿರುವ ನವಾಜುದ್ದೀನ್ ಸಿದ್ದಿಕಿ ಅವರನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿರುವುದು ಬಿಟೌನ್ ವಲಯದಲ್ಲಿ ಟ್ರೆಂಡ್ ಆಗಿದೆ. ಅದಕ್ಕೆ ಕಾರಣ ಅವರ ಮುಂಬರುವ ಸಿನಿಮಾ ʼಟಿಕು ವೆಡ್ಸ್ ಶೇರುʼ ಚಿತ್ರದ ಟ್ರೇಲರ್.
ನವಾಜುದ್ದೀನ್ ಸಿದ್ದಿಕಿ, ಅವನೀತ್ ಕೌರ್ ಅಭಿನಯದ ʼʼಟಿಕು ವೆಡ್ಸ್ ಶೇರುʼʼ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದ ಟ್ರೇಲರ್ ನಲ್ಲಿ ಬರುವ ದೃಶ್ಯವೊಂದು ಭಾರೀ ವೈರಲ್ ಆಗುವುದರ ಜೊತೆ ಟ್ರೋಲ್ ಗೆ ಒಳಗಾಗಿದೆ.
ಇದನ್ನೂ ಓದಿ: Mumbai; ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಕಳ್ಳತನ: ಇಬ್ಬರ ಬಂಧನ
ಸಿನಿಮಾದ ಸನ್ನಿವೇಶವೊಂದರಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಸಹ ನಟಿ ಅವನೀತ್ ಕೌರ್ ಅವರಿಗೆ ಕಿಸ್ ಮಾಡುವ ದೃಶ್ಯವೊಂದಿದೆ. ಇದು ಕೆಲವೇ ಸೆಕೆಂಡ್ ಗಳ ದೃಶ್ಯವಾದರೂ ಇದು ಟ್ರೋಲ್ ಗೆ ಒಳಗಾಗಿದೆ. ಅದಕ್ಕೆ ಕಾರಣ ನಟನ ವಯಸ್ಸು. ನವಾಜುದ್ದೀನ್ ಸಿದ್ದಿಕಿ ಅವರಿಗೆ 49 ವರ್ಷವಾಗಿದ್ದು, ನಟಿಗೆ 21 ವರ್ಷ ವಯಸ್ಸಾಗಿದೆ.
ರೆಡ್ಡಿಟ್ ನಲ್ಲಿ ಕೆಲ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಇದು ಅಸಹ್ಯ. ನವಾಜುದ್ದೀನ್ ಸಿದ್ದಿಕಿ ಅವರ ಸಿನಿಮಾಗಳ ಆಯ್ಕೆಯಲ್ಲಿ ಏನಿದೆ?” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. “ನನಗೆ ಈಗಲೂ ನೆನಪಿದೆ ನವಾಜುದ್ದೀನ್ ಸಿದ್ದಿಕಿ ಅವರಿಗೆ ರೊಮ್ಯಾಂಟಿಕ್ ಮೂವಿಗಳನ್ನು ಮಾಡುವುದು ಇಷ್ಟವೆಂದು ಒಮ್ಮೆ ಹೇಳಿದ್ದರು” ಎಂದು ಕಮೆಂಟ್ ಮಾಡಿದ್ದಾರೆ. “ಇನ್ಮುಂದೆ ಸಿದ್ದಿಕಿ ಅವರನ್ನು ಸಹಿಸಲು ಆಗುವುದಿಲ್ಲ” ಎಂದು ಮತ್ತೊಬ್ಬರು ಹೇಳಿದ್ದಾರೆ.
ಕಂಗನಾ ರಣಾವತ್ ನಿರ್ಮಾಣ ಮಾಡಿರುವ ʼʼಟಿಕು ವೆಡ್ಸ್ ಶೇರುʼʼ ಸಿನಿಮಾ ಇದೇ ಜೂ.23 ರಂದು ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.