Bihar ಸಿಎಂ ನಿತೀಶ್ ರತ್ತ ನುಗ್ಗಿ ಬಂದ ಬೈಕ್ ಚಾಲಕನ ಬಂಧನ; ತನಿಖೆ
Team Udayavani, Jun 15, 2023, 4:13 PM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಭದ್ರತೆಯಲ್ಲಿ ಗುರುವಾರ (ಜೂನ್ 15) ಬೆಳಗ್ಗೆ ಭಾರಿ ಲೋಪವಾಗಿದ್ದು, ಅವರು ನಿವಾಸದ ಬಳಿ ಬೆಳಗಿನ ವಾಕ್ ಮಾಡುತ್ತಿದ್ದ ವೇಳೆ ಅಪರಿಚಿತ ಬೈಕ್ ಚಾಲಕನೊಬ್ಬ ನುಗ್ಗಿ ಬಂದಿದ್ದಾನೆ. ಯುವಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬೈಕ್ ಚಾಲಕ ಸಿಎಂ ನಿತೀಶ್ ಕುಮಾರ್ ಅವರತ್ತ ಬೈಕ್ ತೆಗೆದುಕೊಂಡು ಹೋಗಲು ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದ್ದು, ತೀರಾ ಹತ್ತಿರಕ್ಕೆ ಬಂದ ವೇಳೆ ನಿತೀಶ್ ಕುಮಾರ್ ಫುಟ್ ಪಾತ್ ಮೇಲೆ ಹತ್ತಿದ್ದಾರೆ. ಮುಖ್ಯಮಂತ್ರಿ ಎಚ್ಚೆತ್ತುಕೊಳ್ಳದಿದ್ದರೆ ಅವಘಡ ಸಂಭವಿಸಬಹುದಿತ್ತು ಎಂದು ಹೇಳಲಾಗಿದೆ. ತತ್ ಕ್ಷಣ ಬೈಕ್ ಸವಾರ ಸಿಕ್ಕಿಬಿದ್ದಿದ್ದಾನೆ. ಆದರೆ ಆತನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ.
ಈ ವಿಚಾರದಲ್ಲಿ ಉನ್ನತ ಮಟ್ಟದ ಸಭೆ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯ ನಂತರ ಮತ್ತೊಮ್ಮೆ ಮುಖ್ಯಮಂತ್ರಿ ಭದ್ರತೆಯ ಪ್ರಶ್ನೆ ಎದ್ದಿದೆ. SSG ಕಮಾಂಡೆಂಟ್ ಮತ್ತು ಅಧಿಕಾರಿಗಳನ್ನು ಕರೆಯಲಾಗಿದ್ದು ಪಾಟ್ನಾದ ಎಸ್ಎಸ್ಪಿ ಕೂಡ ಸಿಎಂ ನಿವಾಸಕ್ಕೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.