![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-415x249.jpg)
ಮತಾಂತರ ನಿಷೇಧ ಕಾಯ್ದೆ ವಾಪಾಸ್: ಆಂದೋಲನದ ಎಚ್ಚರಿಕೆ ನೀಡಿದ ಶಾಸಕ ಭರತ್ ಶೆಟ್ಟಿ
Team Udayavani, Jun 15, 2023, 6:20 PM IST
![ಮತಾಂತರ ನಿಷೇಧ ಕಾಯ್ದೆ ವಾಪಾಸ್: ಆಂದೋಲನದ ಎಚ್ಚರಿಕೆ ನೀಡಿದ ಶಾಸಕ ಭರತ್ ಶೆಟ್ಟಿ](https://www.udayavani.com/wp-content/uploads/2023/06/bharat-1-620x342.jpg)
ಸುರತ್ಕಲ್: ಹಿಂದುತ್ವದ ಮೇಲೆ ಸದಾ ಕೆಂಡ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು ವಿರೋಧವಾಗಿದ್ದರೂ ಲೆಕ್ಕಿಸದೆ, ಹಿಂದೂ ಸಮಾಜದ ರಕ್ಷಣೆಗಾಗಿ ಬಿಜೆಪಿ ಸರಕಾರ ಈ ನಿರ್ಧಾರ ತಳೆದಿತ್ತು. ಇದೀಗ ಒಂದೆರಡು ಸಮುದಾಯದ ಒಲೈಕೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ತಳೆದಿರುವುದು ಮುಂದೆ ಬೃಹತ್ ಆಂದೋಲನ ಒಂದಕ್ಕೆ ನಾಂದಿ ಹಾಡಿದೆ ಎಂದು ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ:ದಿಗ್ಗಜರ ವಿದಾಯದ ಬಳಿಕ…; ಭಾರತದ ಭವಿಷ್ಯದ ಟೆಸ್ಟ್ ತಂಡ ಹೀಗೆ ಇರುತ್ತದೆ..
ಲವ್ ಜಿಹಾದ್, ಮತಾಂತರ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೆ ನೆರೆಯ ಕೇರಳವನ್ನ ಕೂಡ ಬಾಧಿಸುತ್ತಿದ್ದು, ನೂರಾರು ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದೆ. ಇದರ ನಡುವೆ ಕಾಯಿದೆ ಬಲಪಡಿಸುವ ಬದಲು ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರ ಮತಾಂತರವಾದಿ ಸಂಘಟನೆಗಳಲ್ಲಿ ಹೊಸ ಹುಮ್ಮಸ್ಸು ನೀಡಿದಂತಾಗಿದೆ ಎಂದು ಭರತ್ ಶೆಟ್ಟಿ ವೈ ಟೀಕಿಸಿದ್ದಾರೆ.
ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯತೆ, ದೇಶ ಪ್ರೇಮವನ್ನು ಬಿಂಬಿಸುವ ಪಠ್ಯಕ್ರಮವನ್ನು ಹಿಂಪಡೆದಿರುವುದು ದೇಶದಲ್ಲಿ ಮತ್ತೆ ಮತಾಂಧತೆಯ ಶಕ್ತಿಗಳು ವಿಜ್ರಂಬಿಸುವಂತೆ ಮಾಡುವಲ್ಲಿ ಸಂಶಯವಿಲ್ಲ. ಮತದಾರ ಕೇವಲ ಒಂದು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಎಡವಟ್ಟುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರ ಸೂಕ್ತ ಉತ್ತರ ನೀಡಲಿದ್ದಾನೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ](https://www.udayavani.com/wp-content/uploads/2024/07/road-1-150x97.jpg)
Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ
![supreem](https://www.udayavani.com/wp-content/uploads/2024/07/supreem-150x94.jpg)
NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ
![UK Polls: ಬ್ರಿಟನ್ ಸಂಸತ್ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್ ಪಕ್ಷ ಜಯಭೇರಿ?](https://www.udayavani.com/wp-content/uploads/2024/07/Labour-150x93.jpg)
UK Polls: ಬ್ರಿಟನ್ ಸಂಸತ್ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್ ಪಕ್ಷ ಜಯಭೇರಿ?
![Special tribute to Kohli-Rohit by Vistara airlines](https://www.udayavani.com/wp-content/uploads/2024/07/ro-ko-150x83.jpg)
Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.