BJP ಆಡಳಿತದ APMC ಕಾಯ್ದೆಗೆ ತಿದ್ದುಪಡಿ:  ಸಂಪುಟ ನಿರ್ಧಾರ

 ಪ್ರಣಾಳಿಕೆಯಲ್ಲಿ ವಾಪಸ್‌ ಬಗ್ಗೆ ಭರವಸೆ ನೀಡಿದ್ದ ಕಾಂಗ್ರೆಸ್‌

Team Udayavani, Jun 16, 2023, 7:41 AM IST

SIDDU MEETING

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ  ಜತೆಗೆ ರೈತರಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಗೂ ಗೇಟ್‌ಪಾಸ್‌ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.  ಜತೆಗೆ, ಸಾರಿಗೆ ನೌಕರರ ಬಹುಬೇಡಿಕೆಯ ವೇತನ ಹೆಚ್ಚಳ ನಿರ್ಧಾರಕ್ಕೂ  ಅಸ್ತು ಎಂದಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಯನ್ನು ಇದೇ ಅಧಿವೇಶನದಲ್ಲೇ ಮಂಡಿಸಿ ರದ್ದುಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.  ಒಟ್ಟು 17 ವಿಚಾರಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ.ಪಾಟೀಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಮೂರು ಮಹತ್ವದ ಸಂಗತಿಗಳ ಬಗ್ಗೆ ಆಯಾ ಇಲಾಖೆಯ ಸಚಿವರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಎಪಿಎಂಸಿ ಕಾಯ್ದೆ

ಹಿಂದಿನ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ಕಾಯಿದೆಯನ್ನು ರದ್ದುಪಡಿಸಿ ಹಳೆಯ ಸ್ವರೂಪದಲ್ಲೇ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ ಕಾಯ್ದೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ದೊರೆತಿದ್ದು, ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗುವುದು ಎಂದು ಎಪಿಎಂಸಿ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್‌ ವಿವರಿಸಿದರು.

ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಯಾವ ಉದ್ದೇಶ ಇಟ್ಟುಕೊಂಡು ಜಾರಿಗೆ ತರಲಾಗಿತ್ತೋ ಅದು ಈಡೇರಿಲ್ಲ. ರೈತರ ಆದಾಯವೂ ಹೆಚ್ಚಿಲ್ಲ, ಸೂಕ್ತ ಬೆಲೆಯೂ ಲಭಿಸಲಿಲ್ಲ. ಕೃಷಿ ಮಾರುಕಟ್ಟೆಯನ್ನು ಅವಲಂಬಿಸಿದ್ದ ಲಕ್ಷಾಂತರ ಕುಟುಂಬ ತೊಂದರೆ ಅನುಭವಿಸಿದೆ. ಮಾರುಕಟ್ಟೆಯಲ್ಲಿ ವ್ಯಾಪಾರ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಎಪಿಎಂಸಿ ವಹಿವಾಟು 600 ಕೋಟಿಯಿಂದ 100 ಕೋಟಿ ರೂ.ಗೆ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ  ಹಳೆ ಎಪಿಎಂಸಿ ಕಾಯ್ದೆಯನ್ನೇ ಜಾರಿಗೆ ತರಲು ನಿರ್ಧರಿಸಲಾಗಿದೆ. ಲೈಸೆನ್ಸ್‌, ಟ್ರೇಡಿಂಗ್‌, ಪರಿಧಿ ವಿಚಾರದಲ್ಲಿ ಬದಲಾವಣೆ ತರುತ್ತೇವೆ. ಮಾರುಕಟ್ಟೆ ಒಳಗಿದ್ದ ಕಾನೂನು ಹೊರಗೂ ಅನ್ವಯವಾಗುತ್ತದೆ. ಮಾರುಕಟ್ಟೆ ಹೊರಗೂ ವ್ಯಾಪಾರಕ್ಕೆ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

ಕಾಯ್ದೆಯಲ್ಲಿ ಏನಿತ್ತು?

ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಕೇಂದ್ರ ಸರಕಾರ 2017ರಲ್ಲಿ ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯ್ದೆಯನ್ನು ಜಾರಿಗೆ ತಂದು ಅದನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತರುವಂತೆ ರಾಜ್ಯಕ್ಕೆ ಸಲಹೆ ನೀಡಿತ್ತು. ಕೇಂದ್ರದ ತಿದ್ದುಪಡಿ ಕಾಯ್ದೆಯನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರಕಾರ 2020ರಲ್ಲಿ ಕರ್ನಾಟಕದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಇದು  ವಿವಾದಕ್ಕೆ ಕಾರಣವಾಗಿತ್ತು. ಕಡೆಗೆ ರೈತರ ವಿರೋಧದಿಂದಾಗಿ ಕೇಂದ್ರ ಸರಕಾರ ಮೂರು ಕಾಯ್ದೆಗಳನ್ನು ಹಿಂಪಡೆದಿತ್ತಾದರೂ ರಾಜ್ಯ  ವಾಪಸ್‌ ಪಡೆದಿರಲಿಲ್ಲ.

ಸಂವಿಧಾನದ ಓದು

ರಾಜ್ಯದ ಎಲ್ಲ ಶಾಲಾ -ಕಾಲೇಜುಗಳಲ್ಲಿ ಸಂವಿಧಾನದ ಪೂರ್ವಪೀಠಿಕೆಯನ್ನು ಬೆಳಗ್ಗೆ ಪ್ರಾರ್ಥನೆ ಬಳಿಕ ಓದುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ. ಯುವಜನತೆ ಶಾಲೆ, ಕಾಲೇಜು, ವಿವಿಗಳಲ್ಲಿ ಕಡ್ಡಾಯವಾಗಿ ಸಂವಿಧಾನದ ಪೀಠಿಕೆ ಪ್ರತಿ ದಿನ ಓದುವುದು ಕಡ್ಡಾಯ. ಸರಕಾರಿ, ಖಾಸಗಿ ಎಲ್ಲ ಕಡೆ ಇದು ಅನ್ವಯವಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ.ಮಹದೇವಪ್ಪ ವಿವರಿಸಿದರು. ಇದೊಂದು ಐತಿಹಾಸಿಕ ತೀರ್ಮಾನ. ಪ್ರಾರ್ಥನೆ ಬಳಿಕ ಸಂವಿಧಾನದ ಪೂರ್ವ ಪೀಠಿಕೆ ಓದುವುದು ಕಡ್ಡಾಯ. ಸರಕಾರಿ, ಅರೆ ಸರಕಾರಿ ಕಚೇರಿಗಳಲ್ಲಿ ಪೀಠಿಕೆಯ ಫೋಟೋ ಹಾಕಬೇಕು ಎಂದೂ ಸೂಚನೆ ನೀಡಲಾಗುತ್ತದೆ ಎಂದು ವಿವರಿಸಿದರು.

ಸಾರಿಗೆ ನೌಕರರಿಗೆ ಶೇ.15ರ ವೇತನ ಖುಷಿ

ಈ ಹಿಂದೆ ಸರಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ನೀಡಿದ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರಕಾರವು ಸಾರಿಗೆ ನೌಕರರ ಮೂಲವೇತನವನ್ನು ಶೇ. 15ರಷ್ಟು ಹೆಚ್ಚಿಸಿ ಮಾರ್ಚ್‌ನಿಂದ ಪೂರ್ವಾನ್ವಯ ಆಗುವಂತೆ ಕಳೆದ ಮಾರ್ಚ್‌ 17ರಂದು ಆದೇಶ ಹೊರಡಿಸಿತ್ತು. ಮೊದಲಿಗೆ ಶೇ.14ರಷ್ಟು ಹೆಚ್ಚಳಕ್ಕೆ ಆಗಿನ ಸರಕಾರ ಒಪ್ಪಿಗೆ ನೀಡಿತ್ತು. ಇದಕ್ಕೆ ಸಾರಿಗೆ ನೌಕರರು ಒಪ್ಪದೆ, ಕನಿಷ್ಠ ಶೇ.20ರಷ್ಟು ಹೆಚ್ಚಿಸುವಂತೆ ಒತ್ತಾಯಿಸಿದ್ದರು. ಕಡೆಗೆ ಆಗಿನ ಸಿಎಂ ಬೊಮ್ಮಾಯಿ ಅವರು ಶೇ.15ರಷ್ಟು ಏರಿಕೆಗೆ ನಿರ್ಧರಿಸಿದ್ದರು.

ಅಂದು ಸರಕಾರಿ ಆದೇಶದ ಬಳಿಕವೂ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಪಟ್ಟುಹಿಡಿದಿದ್ದರು. ಯಾಕೆಂದರೆ, ಅದೊಂದು “ಏಕಪಕ್ಷೀಯ ನಿರ್ಧಾರ’ವಾಗಿದೆ. ಯಾವುದೇ ನೌಕರರ ಸಂಘದೊಂದಿಗೆ ಚರ್ಚಿಸದೆ, ವಿಶ್ವಾಸಕ್ಕೂ ತೆಗೆದುಕೊಳ್ಳದೆ ಪರಿಷ್ಕರಿಸಲಾಗಿದೆ ಎಂದು ಸಾರಿಗೆ ನೌಕರರ ಸಂಘಟನೆಗಳು ಆರೋಪಿಸಿದ್ದವು. ಈಗ ನೂತನ ಸರಕಾರ ಇದೇ ಆದೇಶಕ್ಕೆ ಗುರುವಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಈ ಪರಿಷ್ಕರಣೆಯಿಂದ ಲಕ್ಷಕ್ಕೂ ಅಧಿಕ ನೌಕರರಿಗೆ ಅನುಕೂಲ ಆಗಲಿದೆ.

ಸಂಪುಟದ  ಪ್ರಮುಖ ನಿರ್ಧಾರಗಳು

 ಕರ್ನಾಟಕ ಹೈಕೋರ್ಟ್‌ ಆಡಳಿತ ವೆಚ್ಚ ಮಿತಿ, ಹಣಕಾಸು ಅಧಿಕಾರ ಹೆಚ್ಚಳ ಮಾಡಲು ಮತ್ತು ಹೆಚ್ಚಿನ ಅಧಿಕಾರಿಗಳ ನಿಯೋಜನೆ ಅಧಿಕಾರವನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಅವಗಾಹನೆಗೆ ನೀಡಲು ಒಪ್ಪಿಗೆ.

 ಕೆಪಿಎಸ್ಸಿಯಲ್ಲಿ ಖಾಲಿ ಇರುವ ಮೂರು ಸದಸ್ಯರ ಭರ್ತಿ ಅಧಿಕಾರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಲು ನಿರ್ಧಾರ.

 ಕರ್ನಾಟಕ ಮಾಹಿತಿ ತಂತ್ರಜ್ಞಾನ ಬಯೋಟೆಕ್ನಾಲಜಿ, ವಿಜ್ಞಾನ, ತಂತ್ರಜ್ಞಾನ ಇಲಾಖೆ ನಡೆಸುವ ಬೆಂಗಳೂರು ಟೆಕ್‌ ಸಮಿಟ್‌ ಕಾರ್ಯಕ್ರಮ ನಡೆಸಲು ಇಸಿಎಂಎ ಸಂಸ್ಥೆಗೆ 17.98 ಕೋ. ರೂ.ಗೆ ಒಪ್ಪಿಗೆ ಹಾಗೂ 4ಜಿ ವಿನಾಯಿತಿ.

 1,081 ಕೋ. ರೂ. ವೆಚ್ಚದಲ್ಲಿ 243 ಎಂಎಲ್‌ಡಿ ವೃಷಭಾವತಿ ನದಿ ನೀರನ್ನು  ಶುದ್ಧೀಕರಿಸಿ 70 ಕೆರೆ ತುಂಬಿಸುವ ಪರಿಷ್ಕೃತ ಯೋಜನೆಗೆ ಒಪ್ಪಿಗೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರ ಜಿಲ್ಲೆಯ ಕೆರೆ ಭರ್ತಿಗೆ ಕ್ರಮ.

 ಸಂಸದೀಯ ವ್ಯವಹಾರಗಳ ಇಲಾಖೆ ಅಡಿಯಲ್ಲಿನ ಡಿಸ್‌ ಕ್ವಾಲಿಫಿಕೇಶ್‌ ಆಕ್ಟ್ ತಿದ್ದುಪಡಿಗೆ ನಿರ್ಧಾರ. ಶಾಸಕರು ಕಾನೂನು ಸಲಹೆಗಾರರಾಗಿದ್ದರೆ ಅವರನ್ನು ಅನರ್ಹತೆ ವ್ಯಾಪ್ತಿಯಿಂದ ಹೊರಗಿಡಲು ನಿರ್ಧಾರ.

 ವಿಪತ್ತು ನಿರ್ವಹಣೆ ಸಂಬಂಧ ನಿರ್ದೇಶನ ನೀಡಲು ಸಂಪುಟ ಉಪ ಸಮಿತಿ ರಚಿಸಲು ಒಪ್ಪಿಗೆ.

ಸಾರಿಗೆ ನಿಗಮಗಳಲ್ಲಿ ಬಾಕಿಯಿದ್ದ ಮೋಟಾರು ವಾಹನ ತೆರಿಗೆ ಮತ್ತು  ಹಿಂಬಾಕಿ ಮೊತ್ತ 79.85 ಕೋ. ರೂ. ವಿನಾಯಿತಿಗೆ ನಿರ್ಧಾರ.

 ಸಾರಿಗೆ ನಿಗಮಕ್ಕೆ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಬಸ್‌ ಖರೀದಿ ಮಾಡುವುದಕ್ಕೆ  28 ಕೋಟಿ ರೂ. ಕೊಡಲು ಒಪ್ಪಿಗೆ.

 ಗೃಹ ಲಕ್ಷ್ಮಿ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಸಮಸ್ಯೆ ರಹಿತವಾಗಿ ಮಾಡಲು ತಂತ್ರಜ್ಞಾನ ಬಳಕೆಗೆ ತೀರ್ಮಾನ.

ಅಗ್ನಿಶಾಮಕ ದಳ ಕಾಯ್ದೆಗೆ ತಿದ್ದುಪಡಿ.

ಟಾಪ್ ನ್ಯೂಸ್

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.