ಗದಗ:ಮುಂಗಾರು ಮಳೆ ಕೊರತೆ: ಬಿತ್ತನೆ ಕುಂಠಿತ


Team Udayavani, Jun 16, 2023, 6:47 PM IST

Udayavani Kannada Newspaper

ಗದಗ: ಮುಂಗಾರು ಆರಂಭದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿತ್ತನೆಯಲ್ಲಿ ಭಾರಿ ಕುಂಠಿತವಾಗಿದ್ದು, 3.09 ಲಕ್ಷ ಹೆಕ್ಟೇರ್‌ ಬಿತ್ತನೆ ಪೈಕಿ ಈವರೆಗೆ ಕೇವಲ 13,995 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.

ಗದಗ ಜಿಲ್ಲೆಯ ಪ್ರಮುಖ ಮುಂಗಾರು ಬೆಳೆ ಹೆಸರು. ಆದ್ದರಿಂದ, ಕೃಷಿ ಇಲಾಖೆ ಕೂಡ ಹೆಸರು ಬೆಳೆಗೆ ಪ್ರಾಮುಖ್ಯತೆ ನೀಡಿ
1,25,000 ಹೆಕ್ಟೇರ್‌ ಬಿತ್ತನೆ ಗುರಿ ನಿಗದಿ ಮಾಡಿಕೊಂಡಿತ್ತು. ಸದ್ಯ ರೋಹಿಣಿ ಮಳೆ ಕೈಕೊಟ್ಟ ಬೆನ್ನಲ್ಲೇ ಜಿಲ್ಲೆಯಲ್ಲಿ ಈವರೆಗೆ ಕೇವಲ 13,430 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಹೆಸರು ಬಿತ್ತನೆಯಾಗಿದೆ.ಕೃಷಿ ಇಲಾಖೆ ಜಿಲ್ಲೆಯ ಆದ್ಯತೆ ಅನುಸಾರವಾಗಿ ಬಿತ್ತನೆ ಕ್ಷೇತ್ರದ ಗುರಿ ನಿಗದಿಪಡಿಸಿಕೊಂಡಿತ್ತು.

1.05 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ ಕೇವಲ 565 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಉಳಿದಂತೆ 32,560 ಹೆಟಕೇರ್‌ ಪ್ರದೇಶದಲ್ಲಿ ಶೇಂಗಾ, 11,300 ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ, 24,000 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ, 4,530 ಹೆಕ್ಟೇರ್‌ ಪ್ರದೇಶದಲ್ಲಿ ಏಕದಳ ಧಾನ್ಯಗಳು, 970 ಹೆಕ್ಟೇರ್‌ ಪ್ರದೇಶದಲ್ಲಿ ಎಣ್ಣೆಕಾಳುಗಳನ್ನು ಬಿತ್ತನೆ ಮಾಡಲು ಗುರಿ ನಿಗದಿಮಾಡಿಕೊಂಡಿತ್ತು. ಈವರೆಗೆ ಹೆಸರು ಮತ್ತು ಜೋಳ ಮಾತ್ರ ತುಸು ಮಟ್ಟಿಗೆ ಬಿತ್ತನೆಯಾಗಿದೆ.

ರೈತರುಪಿಎಂಕಿಸಾನ್‌ಇ-ಕೆವೈಸಿಮಾಡಿಸಿ ಗದಗ ಜಿಲ್ಲೆಯ 1,35,089 ರೈತರ ಪೈಕಿ ಈವರೆಗೆ 97,474(ಶೇ.72.14)ರಷ್ಟು ರೈತರು
ಪಿಎಂ-ಕಿಸಾನ್‌ ಯೋಜನೆಯ ಇ-ಕೆವೈಸಿ ಮಾಡಿಕೊಂಡಿದ್ದು, 37,635 ರೈತರು ಇ-ಕೆವೈಸಿ ಮಾಡಿಸಬೇಕಿದೆ. ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ 11,651 ರೈತರು, ಶಿರಹಟ್ಟಿ ತಾಲೂಕಿನಲ್ಲಿ 8,888, ಗದಗ ತಾಲೂಕಿನಲ್ಲಿ 6,926, ಶಿರಹಟ್ಟಿಯಲ್ಲಿ 6,137
ಮತ್ತು ಮುಂಡರಗಿ ತಾಲೂಕಿನಲ್ಲಿ 3,879 ರೈತರು ಇ-ಕೆವೈಸಿ ಮಾಡಿಸಬೇಕಿದೆ.

ಆದ್ದರಿಂದ ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಮಾಡಿಸದ ರೈತರು ತಿಂಗಳೊಳಗಾಗಿ ಗ್ರಾಮ ಒನ್‌, ರೈತ ಸಂಪರ್ಕ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಪಿಎಂ-ಕಿಸಾನ್‌ ಯೋಜನೆಯ 1ನೇ ಕಂತಿನ ಹಣವು ರೈತರ ಖಾತೆಗೆ ಜಮೆ ಆಗುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್‌. ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಮೇ ತಿಂಗಳ ಅಂತ್ಯದಲ್ಲಿ ಸೈಕ್ಲೋನ್‌ ಎಫೆಕ್ಟ್ನಿಂದಾಗಿ ಮುಂಗಾರು ಆರಂಭಕ್ಕೆ ತೊಂದರೆಯಾಗಿದೆ. ಇನ್ನೂ ಮೂರ್‍ನಾಲ್ಕು ದಿನಗಳ ನಂತರ ಮಳೆಯಾಗುವ ಸಂಭವವಿದ್ದು, ರೈತರು ಒಣಭೂಮಿಯನ್ನು ಬಿತ್ತನೆ ಮಾಡಬಾರದು. ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು. ಮುಂಗಾರು ಮಳೆ ತಡವಾಗಿದ್ದರಿಂದ ಕೃಷಿ ತಜ್ಞರ ಹಾಗೂ ಕೃಷಿ ಅಧಿಕಾರಿಗಳ ಸಲಹೆ ಪಡೆದು ಬಿತ್ತನೆ ಮಾಡಬೇಕು. ಇಲ್ಲವಾದಲ್ಲಿ ಬಿತ್ತಿದ ಬೆಳೆ ಕೈಗೆ ಬರದೆ ಆರ್ಥಿಕ ಸಂಕಷ್ಟಕ್ಕೆ ಎದುರಿಸಬೇಕಾಗುತ್ತದೆ.
ತಾರಾಮಣಿ ಜಿ.ಎಚ್‌., ಜಂಟಿ ಕೃಷಿ ನಿರ್ದೇಶಕರು, ಗದಗ

941 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆ
2023-24ನೇ ಸಾಳಿನ ಮುಂಗಾರು ಹಂಗಾಮಿನಲ್ಲಿ 4,226 ಕ್ವಿಂಟಲ್‌ ಮೆಕ್ಕೆಜೋಳ ಬೇಡಿಕೆ ಪೈಕಿ 2,756 ಕ್ವಿಂಟಲ್‌ ದಾಸ್ತಾನಿದ್ದು, 504 ಕ್ವಿಂಟಲ್‌ ವಿತರಣೆಯಾಗಿದೆ. 1,853 ಕ್ವಿಂಟಲ್‌ ಹೆಸರು ಬೇಡಿಕೆ ಪೈಕಿ 579 ಕ್ವಿಂಟಲ್‌ ದಾಸ್ತಾನಿದ್ದು, 406 ಕ್ವಿಂಟಲ್‌ ವಿತರಣೆಯಾಗಿದೆ. ತೊದರಿ 25.9 ಕ್ವಿಂಟಲ್‌, ಶೇಂಗಾ 1.20 ಕ್ವಿಂಟಲ್‌, ಸಜ್ಜೆ 1.50 ಕ್ವಿಂಟಲ್‌ ಸೇರಿ 9,217 ಕ್ವಿಂಟಲ್‌ ಮುಂಗಾರು ಹಂಗಾಮಿನ ಬೀಜದ ಬೇಡಿಕೆಗನುಗುಣವಾಗಿ 3,761 ಕ್ವಿಂಟಲ್‌ ಬಿತ್ತನೆ ಬೀಜ ದಾಸ್ತಾನಿದ್ದು, ಆ ಪೈಕಿ ಈವರೆಗೆ 941.54 ಕ್ವಿಂಟಲ್‌ ವಿತರಣೆಯಾಗಿದೆ

ಶೇ. 46ರಷ್ಟು ಮಳೆ ಕುಂಠಿತ
2023ರ ಜನವರಿ ಆರಂಭದಿಂದ ಈವರೆಗೆ 148.5 ಎಂಎಂ ಮಳೆಯಾಗಬೇಕಿತ್ತು. ಈವರೆಗೆ ಕೇವಲ 79.6 ಮಿ.ಮೀ.ನಷ್ಟು ಮಳೆಯಾಗಿದ್ದು, ಶೇ. 46ರಷ್ಟು ಮಳೆ ಕುಂಠಿತಗೊಂಡಿದೆ. ಗದಗ ತಾಲೂಕಿನಲ್ಲಿ ಶೇ. 53ರಷ್ಟು, ಮುಂಡರಗಿ ತಾಲೂಕಿನಲ್ಲಿ ಶೇ. 48ರಷ್ಟು, ನರಗುಂದ ತಾಲೂಕಿನಲ್ಲಿ ಶೇ. 37ರಷ್ಟು, ರೋಣ ತಾಲೂಕಿನಲ್ಲಿ ಶೇ. 39ರಷ್ಟು, ಶಿರಹಟ್ಟಿ ತಾಲೂಕಿನಲ್ಲಿ ಶೇ. 62ರಷ್ಟು, ಗಜೇಂದ್ರಗಡ ತಾಲೂಕಿನಲ್ಲಿ ಶೇ. 47ರಷ್ಟು ಹಾಗೂ ಲಕ್ಷ್ಮೇ ಶ್ವರ ತಾಲೂಕಿನಲ್ಲಿ ಶೇ. 57ರಷ್ಟು ಮಳೆ ಕುಂಠಿತಗೊಂಡಿದೆ.

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.