Movie review ‘ಬೇರ’; ಅಮಾಯಕ ಜೀವಗಳ ಸುತ್ತ ಧರ್ಮ ಸಂಘರ್ಷ


Team Udayavani, Jun 17, 2023, 12:05 PM IST

Movie review ‘ಬೇರ’; ಅಮಾಯಕ ಜೀವಗಳ ಸುತ್ತ ಧರ್ಮ ಸಂಘರ್ಷ

ಕೆಲವು ಸಿನಿಮಾಗಳ ಕಥಾವಸ್ತು ನೋಡುಗರನ್ನು ಚಿಂತನೆಗೆ ಹಚ್ಚುತ್ತವೆ, ಒಂದಷ್ಟು ಹೊತ್ತು ಆ ಸಿನಿಮಾ ತಲೆಯೊಳಗೆ ಸುತ್ತುತ್ತಲೇ ಇರುತ್ತದೆ. ಈ ವಾರ ತೆರೆಕಂಡಿರುವ “ಬೇರ’ ಕೂಡಾ ಇದೇ ಕೆಟಗರಿಗೆ ಸೇರುವ ಸಿನಿಮಾ.

ಒಂದು ಗಂಭೀರ ವಿಚಾರವನ್ನು ಆಯ್ಕೆ ಮಾಡಿ, ಅದನ್ನು ಅಷ್ಟೇ ಗಂಭೀರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ವಿನು ಬಳಂಜ. ಇವರಿಗಿದು ಚೊಚ್ಚಲ ಸಿನಿಮಾ. ಆದರೆ, ಚೊಚ್ಚಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದಾರೆ. ಕರಾವಳಿಯಲ್ಲಿ ಆಗಾಗ ಕೇಳಿಬರುವ ಕೋಮು ಸಂಘರ್ಷದ ಕಥೆಯನ್ನೇ ತಮ್ಮ ಸಿನಿಮಾದ ಕಥಾವಸ್ತುವನ್ನಾಗಿ ಆಯ್ಕೆ ಮಾಡಿದ್ದಾರೆ. ಅತಿ ಸೂಕ್ಷ್ಮವಾದ ವಿಷಯವನ್ನು ಯಾರಿಗೂ ನೋವಾಗದಂತೆ ಈ ಸಿನಿಮಾದಲ್ಲಿ ಹೇಳಲಾಗಿದೆ. ಈಗಾಗಲೇ ಧರ್ಮಗಳ ವಿಚಾರಗಳನ್ನು ಇಟ್ಟುಕೊಂಡು ಬಂದಿರುವ ಕೆಲವು ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. ಅದೇ ರೀತಿ “ಬೇರ’ ಕೂಡಾ ಧರ್ಮ ಸಂಘರ್ಷ ಕಥೆಯನ್ನು ಹೊಂದಿದೆ.

ಇಡೀ ಸಿನಿಮಾ ನಡೆಯುವುದು ದಕ್ಷಿಣ ಕನ್ನಡದ ಕಲ್ಲಡ್ಕ ಎಂಬ ಪ್ರದೇಶದಲ್ಲಿ. ಸಲೀಂ ಹಾಗೂ ವಿಷ್ಣುವಿನ ಸ್ನೇಹವನ್ನು ಬಂಡವಾಳವನ್ನಾಗಿಸಿ, ಆ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೊಂಚುಹಾಕುತ್ತಿರುವ ಎರಡು ಗುಂಪುಗಳ ನಡುವಿನ ಕಥೆಯನ್ನು “ಬೇರ’ ಹೊಂದಿದೆ. ಇಲ್ಲಿ ಧರ್ಮ ಸಂಘರ್ಷದಲ್ಲಿ ಸಿಲುಕಿದವರ ಪಾಡು, ಅಮಾಯಕರ ನೋವು, ಹೆತ್ತ ಕರುಳಿನ ಸಂಕಟ, ದೂರದಿಂದಲೇ ರಣಕೇಕೆ ಹಾಕುತ್ತಿರುವ ಗುಂಪು, ಇನ್ನೊಂದು ಕಡೆ ಪೊಲೀಸರ ಕೇಸ್‌ ಫೈಲ್‌ ಹಾಗೂ ಫೇಲ್‌ ಕಥೆಗಳು.. ಇಂತಹ ಹಲವು ಅಂಶಗಳ ಸುತ್ತ “ಬೇರ’ ಸುತ್ತುತ್ತದೆ. ನಿರ್ದೇಶಕರು ಮೂಲವಸ್ತುವಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಇಡೀ ಸಿನಿಮಾವನ್ನು ಗಂಭೀರವಾಗಿಯೇ ತೆಗೆದುಕೊಂಡು ಹೋಗಿದ್ದಾರೆ. ಅದೇ ಕಾರಣದಿಂದ ದೃಶ್ಯದಲ್ಲಿ ತೋರಿಸಲಾಗದ ಅನೇಕ ಅಂಶಗಳು ಮಾತುಗಳಾಗಿವೆ.

ಇದನ್ನೂ ಓದಿ:ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ನಿರಾಕರಣೆ: ವಿವಾದಕ್ಕೆ ತುಪ್ಪ ಸುರಿದ ತೆಲಂಗಾಣ ಗೃಹ ಸಚಿವ

ಹಾಗಾಗಿ, ಸಿನಿಮಾದಲ್ಲಿ ಸಂಭಾಷಣೆಗೆ ಮಹತ್ವದ ಪಾತ್ರವಿದೆ. ಕೆಲವೊಮ್ಮೆ ಮಾತು ಹೆಚ್ಚಾಯಿತೆನೋ ಅನಿಸಿದರೂ, ಆಯಾ ಸನ್ನಿವೇಶಕ್ಕೆ ಅದು ಅನಿವಾರ್ಯ ಕೂಡಾ.  ಇವತ್ತಿನ ಸಮಾಜದಲ್ಲಿ ನಡೆಯುತ್ತಿರುವ ಕೆಲವು ನೈಜ ಘಟನೆಗಳನ್ನು ಕೂಡಾ ಸಿನಿಮಾದಲ್ಲಿ ತೋರಿಸಲಾಗಿದೆ. ಆ ಮಟ್ಟಿಗೆ “ಬೇರ’ ಇವತ್ತಿಗೆ ಪ್ರಸ್ತುತ ಕಥಾನಕ.

ಚಿತ್ರದಲ್ಲಿ ದತ್ತಣ್ಣ, ಯಶ್‌ ಶೆಟ್ಟಿ, ಹರ್ಷಿಕಾ ಪೂಣಚ್ಚ, ಅಶ್ವಿ‌ನ್‌ ಹಾಸನ್‌, ಚಿತ್ಕಲ ಬಿರಾದಾರ್‌, ಮಂಜುನಾಥ್‌ ಹೆಗಡೆ, ಗುರು ಹೆಗಡೆ, ರಾಕೇಶ್‌ ಮಯ್ಯ, ಧವಳ್‌ ದೀಪಕ್‌ ಅನೇಕರು ನಟಿಸಿದ್ದಾರೆ. ಮುಖ್ಯವಾಗಿ ಯಶ್‌ ಶೆಟ್ಟಿ ಹಾಗೂ ರಾಕೇಶ್‌ ಮಯ್ಯ ಈ ಸಿನಿಮಾದ ಹೈಲೈಟ್‌. ಸಿನಿಮಾದ ಹಿನ್ನೆಲೆ ಸಂಗೀತ ಕಥೆಯ ವೇಗಕ್ಕೆ ಸಾಥ್‌ ನೀಡಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.