ದುರಸ್ತಿಗೆ ಕಾದಿವೆ 437 ಶಾಲಾ ಕೊಠಡಿಗಳು! 


Team Udayavani, Jun 17, 2023, 3:22 PM IST

ದುರಸ್ತಿಗೆ ಕಾದಿವೆ 437 ಶಾಲಾ ಕೊಠಡಿಗಳು! 

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿ 15 ದಿನಗಳು ಕಳೆಯುತ್ತಿವೆ. ಮಕ್ಕಳು ಉತ್ಸಾಹದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಆದರೆ ಶಾಲೆಗೆ ಬರುವ ಮಕ್ಕಳು ಮಾತ್ರ ಅಭದ್ರತೆಯಲ್ಲಿ ಪಾಠ ಪ್ರವಚನ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುರಕ್ಷತೆ ಮರೀಚಿಕೆ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬರೋಬ್ಬರಿ 437ಕ್ಕೂ ಹೆಚ್ಚು ಕೊಠಡಿಗಳು ಶಿಥಿಲಗೊಂಡು ದುರಸ್ತಿಗಾಗಿ ಎದುರು ನೋಡುವಂತಾಗಿದ್ದು, ಇದರ ಪರಿಣಾಮ ಶಾಲೆಗಳಲ್ಲಿ ಮಕ್ಕಳ ಪಾಲಿಗೆ ಸುರಕ್ಷತೆ ಎನ್ನುವುದು ಮರೀಚಿಕೆಯಾಗಿದೆ.

ಗೋಡೆ, ಚಾವಣಿ ಕುಸಿಯುವ ಭೀತಿ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಸರ್ಕಾರಿ ಶಾಲೆಗಳಿಗೆ ಹೊಸ ಕಟ್ಟಡಗಳ ನಿರ್ಮಾಣ ನಿರೀಕ್ಷಿತ ಮಟ್ಟದಲ್ಲಿ ಆಗದ ಕಾರಣ ಹಳೆಯ ಓಬಿ ರಾ ಯನ ಕಾಲದಲ್ಲಿ ನಿರ್ಮಿಸಿರುವ ದಶಕಗಳು ಪೂರೈಸಿರುವ ಹಳೆ ಕಟ್ಟಡಗಳಲ್ಲಿಯೇ ಅನಿವಾರ್ಯವಾಗಿ ಮಕ್ಕಳಿಗೆ ತರಗತಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸದ್ಯ ಮಳೆಗಾಲ ಶುರುವಾಗಿರುವ ಪರಿಣಾಮ ದುರಸ್ತಿಗೊಳ್ಳದ ಕೊಠಡಿಗಳು ಮಳೆಗೆ ಸೋರುವುದರ ಜೊತೆಗೆ ಕೆಲವೊಂದು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟು ಚಾವಣಿ ಕುಸಿದು ಬೀಳುವ ಭೀತಿ ಶಾಲಾ ಮಕ್ಕಳು, ಪೋಷಕರು ಹಾಗೂ ಶಿಕ್ಷಕರದ್ದಾಗಿದೆ.

ಸರ್ಕಾರಿ ಶಾಲೆಗಳು 1,449 ಶಾಲೆಗಳು: ಜಿಲ್ಲೆಯಲ್ಲಿ 1,680 ಪ್ರಾಥಮಿಕ ಶಾಲೆಗಳಿದ್ದು, ಆ ಪೈಕಿ ಸರ್ಕಾರಿ ಶಾಲೆಗಳು 1,449 ಇದ್ದರೆ ಅನುದಾನಿತ ಶಾಲೆಗಳು 47 ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ 177 ಅನುದಾನರಹಿತ ಶಾಲೆಗಳು ಶಾಲೆಗಳು ಇವೆ. ಇನ್ನೂ ವಸತಿ ಶಾಲೆಗಳು 6 ಮತ್ತು ಇತರೆ 1 ಶಾಲೆ ಇದ್ದು ಜಿಲ್ಲೆಯಲ್ಲಿ 349 ಪ್ರೌಢಶಾಲೆಗಳಿದ್ದು, ಇದರಲ್ಲಿ 111 ಸರ್ಕಾರಿ ಶಾಲೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅನುದಾನಿತ ಶಾಲೆಗಳು 46 ಇವೆ. ಅನುದಾನರಹಿತ ಶಾಲೆಗಳು 164, ವಸತಿ ಶಾಲೆಗಳು 26 ಮತ್ತು 2 ಕೇಂದ್ರೀಯ ಪ್ರೌಢಶಾಲೆಗಳು ಜಿಲ್ಲೆಯಲ್ಲಿವೆ.

ಶಿಥಿಲ ಕೊಠಡಿಗಳ ತೆರವಿಗೆ ಪಟ್ಟಿ ಸಿದ್ಧ!: ಜಿಲ್ಲೆಯ ಸರ್ಕಾರಿ ಕಿರಿಯ, ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿ ಬಳಕೆಗೆ ಯೋಗ್ಯವಲ್ಲದ ಬರೋಬ್ಬರಿ 288 ಕೊಠಡಿಗಳನ್ನು ತೆರವು ಗೊಳಿಸಲು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪಟ್ಟಿಸಿದ್ಧಪಡಿಸಿದ್ದಾರೆ. ಈ ಕೊಠಡಿಗಳು ದುರಸ್ತಿ ಮಾಡಿದರೂ ಬಳಕೆಗೆ ಬಾರದಷ್ಟು ತೀವ್ರವಾಗಿ ಶಿಥಿಲಗೊಂಡಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 288 ಕೊಠಡಿಗಳನ್ನು ತೆರವುಗೊಳಿಸಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.

ಶಾಲೆಗಳಲ್ಲಿನ ಕಳಪೆ ಕಾಮಗಾರಿಗೆ ಇಲ್ಲ ಬ್ರೇಕ್‌ : ಸಾಮಾನ್ಯವಾಗಿ ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕವಾಗಿ ನಡೆಯುವ ದುರಸ್ತಿ ಕಾಮಗಾರಿಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿರುವ ಪರಿಣಾಮ ಪದೇ ಪದೆ ಕೊಠಡಿಗಳು ಶಿಥಿಲಗೊಳ್ಳುತ್ತಿರುವುದು ಎದ್ದು ಕಾಣುತ್ತಿದೆ. ಇತ್ತೀಚೆಗೆ ಚೇಳೂರು ತಾಲೂಕಿನ ಯರಗುಡಿ ಗ್ರಾಮದ ಸರ್ಕಾರಿ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು ಇಬ್ಬರು ಮಕ್ಕಳ ತಲೆಗೆ ಪೆಟ್ಟು ಬಿದ್ದಿತ್ತು. ಅಲ್ಲದೇ ಚಿಂತಾಮಣಿಯ ಕೆಲವು ಸರ್ಕಾರಿ ಶಾಲೆಗಳಲ್ಲಿ ಚಾವಣಿ ಕಿತ್ತು ಬಂದಿದೆ. ಹೀಗೆ ಬಹುತೇಕ ಶಾಲೆಗಳಲ್ಲಿ ಕಳಪೆ ಕಾಮಗಾರಿ ಪರಿಣಾಮ ಶಾಲಾ ಕೊಠಡಿಗಳು ನಿರ್ಮಾಣಗೊಂಡ ವರ್ಷದಲ್ಲಿಯೇ ಕಳಪೆ ಕಾಮಗಾರಿಗೆ ದುರಸ್ತಿಗೆ ಎದುರಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.