“ಸಂತೆಕಟ್ಟೆ ರಸ್ತೆ ಸಮಸ್ಯೆ: 3 ದಿನಗಳಲ್ಲಿ ಪರಿಹರಿಸಿ’: ಜಿಲ್ಲಾಧಿಕಾರಿ


Team Udayavani, Jun 17, 2023, 3:55 PM IST

“ಸಂತೆಕಟ್ಟೆ ರಸ್ತೆ ಸಮಸ್ಯೆ: 3 ದಿನಗಳಲ್ಲಿ ಪರಿಹರಿಸಿ’: ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣ ಪುರ ಸಂತೆಕಟ್ಟೆಯಲ್ಲಿ ಓವರ್‌ಪಾಸ್‌ ನಿರ್ಮಾಣಕ್ಕಾಗಿ ತೋಡಿ ರುವ ಹೊಂಡದಿಂದ ಹೆದ್ದಾರಿ ಕುಸಿಯುವ ಅಪಾಯವಿದ್ದು, ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ 3 ದಿನಗಳೊಳಗೆ ಸೂಕ್ತ ಪರಿಹಾರ ಹುಡುಕುವಂತೆ ರಾ.ಹೆ.ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಸೂಚನೆ ನೀಡಿದರು.

ಮಳೆಗಾಲದ ಹಿನ್ನೆಲೆ ಸಾರ್ವಜನಿಕರ ಹಿತ ದೃಷ್ಟಿಯಿಂದ ತುರ್ತಾಗಿ ಕೈಗೊಳ್ಳಬೇಕಾದ ರಾ.ಹೆ. ಕಾಮಗಾರಿಗಳ ಕುರಿತು ಉಡುಪಿ ತಾ| ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದರು.

ಸಂತೆಕಟ್ಟೆ ಜಂಕ್ಷನ್‌ನಲ್ಲಿ ಓವರ್‌ ಪಾಸ್‌ ನಿರ್ಮಾಣಕ್ಕೆ ಕೈಗೊಂಡಿರುವ ಕಾಮಗಾರಿಯಿಂದ ಹೆದ್ದಾರಿ ಪಕ್ಕದಲ್ಲಿ ಬೃಹತ್‌ ಹೊಂಡ ನಿರ್ಮಾಣವಾಗಿದೆ. ಇದರಿಂದ ಮಳೆಗಾಲದಲ್ಲಿ ನೀರು ತುಂಬಿ ಹೆದ್ದಾರಿ ಕುಸಿಯುವ ಸಂಭವವಿದೆ.

ಈ ಭಾಗದಲ್ಲಿ ವಾಹನ ಸಂಚಾರ ಬಂದ್‌ ಆಗುವ ಸಾಧ್ಯತೆಯಿದೆ. ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಯಾವ ಸೂಕ್ತ ವಿಧಾನವನ್ನು ಅಳವಡಿಸುವ ಮೂಲಕ ಹೆದ್ದಾರಿ ಕುಸಿತ ತಡೆಯಬಹುದು. ವಾಹನಗಳ ಸುರಕ್ಷಿತ ಸಂಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆಯನ್ನು ಶೀಘ್ರ ದಲ್ಲಿ ಸಿದ್ಧಪಡಿಸಿ ಕಾರ್ಯನಿರ್ವಹಿಸಬೇಕು. ಕಾಲಮಿತಿಯಲ್ಲಿ ಕಾಮಗಾರಿ ಮುಕ್ತಾಯಗೊಳಿಸಬೇಕೆಂದು ನಿರ್ದೇಶಿಸಿದರು.

ಪೊಲೀಸ್‌ ಇಲಾಖೆಯಿಂದ ಗುರುತಿಸಿರುವ ಬ್ಲ್ಯಾಕ್‌ಸ್ಪಾಟ್‌ಗಳಲ್ಲಿ ಅಗತ್ಯವಿರುವ ವೈಜ್ಞಾನಿಕ ಸುರಕ್ಷಾ ಕ್ರಮಗಳನ್ನು ಆದ್ಯತೆಯ ಮೇಲೆ ಕೈಗೊಂಡು ಲಿಖೀತ ವರದಿ ನೀಡಬೇಕು. ರಾ.ಹೆ. ಕಾಮಗಾರಿಯಿಂದ ನಗರಸಭೆಯ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆಗೆ ಕೆಲವಡೆ ತೊಂದರೆಯಾಗಿದ್ದು ಅದನ್ನು ಸರಿಪಡಿಸಿಕೊಡುವಂತೆ ಸೂಚಿಸಿದರು.
ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಮರದ ಕೊಂಬೆಗಳನ್ನು ತತ್‌ಕ್ಷಣ ತೆರವುಗೊಳಿಸಬೇಕು. ಪರ್ಕಳದಲ್ಲಿ ಹೆದ್ದಾರಿ ಕಾಮಗಾರಿಯ ತಡೆಯಾಜ್ಞೆ ತೆರವುಗೊಳಿಸುವ ಕುರಿತಂತೆ ರಾಜ್ಯದ ಅಡ್ವೊಕೇಟ್‌ ಜನರಲ್‌ ಬಳಿ ಚರ್ಚಿಸಿ, ಶೀಘ್ರದಲ್ಲಿ ಕಾಮಗಾರಿ ಯನ್ನು ಆರಂಭಿಸಲು ಅಗತ್ಯವಿರುವ ಕ್ರಮ ಕೈಗೊಳ್ಳು ವಂತೆ ತಿಳಿಸಿದರು.

ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ ಬಳಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲು, ಕಲ್ಸಂಕ ಜಂಕ್ಷನ್‌, ಟೈಗರ್‌ ಸರ್ಕಲ್‌ ಬಳಿ ವಾಹನ ದಟ್ಟಣೆ ತಪ್ಪಿಸಿ, ಜನ ಸಾಮಾನ್ಯರ ಸಂಚಾರಕ್ಕೆ ಅನುಕೂಲವಾಗುವಂತೆ ಸೂಕ್ತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಮಣಿಪಾಲದಿಂದ ಕಲ್ಸಂಕವರೆಗೆ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಹಾಕೇ ಮಚ್ಚೀಂದ್ರ, ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌, ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್‌ ಅಜ್ಮಿ, ಉಡುಪಿ ತಹಶೀಲ್ದಾರ್‌ ರವಿ ಅಂಗಡಿ, ನಗರಸಭೆ ಪೌರಾಯುಕ್ತ ರಮೇಶ್‌ ನಾಯ್ಕ, ರಾ.ಹೆ. 169ಎ ವಿಭಾಗದ ಎಂಜಿನಿಯರ್‌ ನಾಗರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

SIddaramaih 2

Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

1-wqewqewqe

Maharashtra; ಶಾಲೆಗಳಲ್ಲಿ ಮರಾಠಿ ಕಲಿಕೆ ಕಡ್ಡಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.