Gyanvapi ಶಿವಲಿಂಗ ಮುಕ್ತಿಗಾಗಿ ನಿರಂತರ ಹೋರಾಟ: ವಿಷ್ಣು ಶಂಕರ ಜೈನ್
ಗೋವಾದಲ್ಲಿ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ
Team Udayavani, Jun 17, 2023, 11:00 PM IST
ಪಣಜಿ: ಉತ್ತರಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಮುಕ್ತಿಗಾಗಿ ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಇದರ ವಕ್ತಾರ ಮತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ವಿಷ್ಣು ಶಂಕರ ಜೈನ್ ಹೇಳಿಕೆ ನೀಡಿದ್ದಾರೆ.
ಗೋವಾದ ಫೋಂಡಾದಲ್ಲಿರುವ ಶ್ರೀ ರಾಮನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಎರಡನೇ ದಿನದ ದೇವಸ್ಥಾನ ಮುಕ್ತಿ ಅಭಿಯಾನದ ಕುರಿತ ಭಾಗದಲ್ಲಿ ಮಾತನಾಡಿ, 2022,ಮೇ 16 ರಂದು ಶಿವಲಿಂಗ ಪತ್ತೆಯಾಗಿದ್ದಾಗಿನಿಂದ ನಾವು ಅದರ ಮುಕ್ತಿಗಾಗಿ ನಿರಂತರವಾಗಿ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ಮುಸಲ್ಮಾನ ಪಕ್ಷದವರು ಯಶಸ್ವಿಯಾಗಲಾರರು ಎಂಬುದು ಗೊತ್ತಿರುವುದರಿಂದ ಈ ಅರ್ಜಿಗೆ ಸಂಬಂಧಿಸಿದಂತೆ ಅಡೆತಡೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಕೆಲವರು ಅರ್ಜಿ ಹಿಂಪಡೆದಿರುವ ವದಂತಿ ಹಬ್ಬಿಸುತ್ತಿದ್ದಾರೆ. ವಾಸ್ತವದಲ್ಲಿ ನಾವು ಯಾವುದೇ ಅರ್ಜಿಯನ್ನು ಹಿಂಪಡೆದಿಲ್ಲ ಮತ್ತು ಶ್ರೀ ಕಾಶಿ ವಿಶ್ವೇಶ್ವರನ ಮುಕ್ತಿಗಾಗಿ ನಾವು ಜೀವನದ ಕೊನೆಯ ಉಸಿರಿರುವವರೆಗೂ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಎಲ್ಲರಿಗೂ ಭರವಸೆ ನೀಡುತ್ತೇನೆ, ಎಂದರು.
ಈ ಸಂದರ್ಭದಲ್ಲಿ ನ್ಯಾಯವಾದಿ ನೀಲೇಶ ಸಂಗೋಲಕರ್ ಅವರು ಕೊಲ್ಲಾಪುರದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮಹಾಲಕ್ಷ್ಮೀ ದೇವಿಯ ವಿಗ್ರಹದ ಬಗ್ಗೆ ಪ್ರಸ್ತುತ ಪರಿಸ್ಥಿತಿ, ಜೊತೆಗೆ ಕರ್ನಾಟಕದ ಸಹಕಾರ ಸಂಜೀವನಿ ಆಸ್ಪತ್ರೆಯ ಡಾ. ಎನ್. ರಮೇಶ ಹಾಸನ ಇವರು ಚನ್ನಕೇಶವ ದೇವಸ್ಥಾನದಲ್ಲಿ ಕುರಾನ್ ಓದುವ ವಿರುದ್ಧ ತಮ್ಮ ಯಶಸ್ವಿ ಹೋರಾಟದ ಬಗ್ಗೆ ವಿವರಿಸಿದರು,
ಗಂಗಾನದಿಗೆ ರೋಗಮುಕ್ತ ಮಾಡುವ ಕ್ಷಮತೆ ಇರುವುದರಿಂದ ಗಂಗಾಜಲದ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ ಎಂದು ನ್ಯಾಯವಾದಿ ಅರುಣ ಗುಪ್ತ ಹೇಳಿದರು. ಅಲಹಾಬಾದ್ ಉಚ್ಚನ್ಯಾಯಾಲಯ ಗಂಗಾನದಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಆಮ್ಲಜನಕವಿದ್ದು ನದಿಯಲ್ಲಿ ಬ್ಯಾಕ್ಟೀರಿಯಾ ಫಾಸ್ ಎಂಬ ವೈರಸ್ ಇದೆ. ಹಾಗಾಗಿ ಗಂಗಾಜಲ ಕೆಡುವುದಿಲ್ಲ. ಕರೋನಾ ಸಮಯದಲ್ಲಿ, ಗಂಗಾ ನದಿಯ ದಡದಲ್ಲಿರುವ ನಗರಗಳಲ್ಲಿ,ಕರೋನಾ ರೋಗಿಗಳ ಸಂಖ್ಯೆ ಇತರ ನಗರಗಳ ತುಲನೆಯಲ್ಲಿ ಅತ್ಯಂತ ಕಡಿಮೆ ಕಂಡುಬಂದಿದೆ ಮತ್ತು ಚೇತರಿಸಿಕೊಂಡವರ ಸಂಖ್ಯೆಯೂ ಹೆಚ್ಚಿನಪ್ರಮಾಣದಲ್ಲಿ ಕಂಡುಬಂದಿದೆ. ಗಂಗಾಜಲದಿಂದ ಕರೋನಾ ಮಾತ್ರವಲ್ಲ, ಇತರ ಕಾಯಿಲೆಗಳನ್ನೂ ಗುಣಪಡಿಸಬಹುದು. ಹಾಗಾಗಿ ಇಂತಹ ಗಂಗಾಜಲದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.