Mescom ವ್ಯಾಪ್ತಿಯಲ್ಲಿ 195 ಇವಿ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ


Team Udayavani, Jun 19, 2023, 8:02 AM IST

Mescom ವ್ಯಾಪ್ತಿಯಲ್ಲಿ 195 ಇವಿ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ

ಮಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳ ಚಾರ್ಜಿಂಗ್‌ ಕೇಂದ್ರಗಳಿಗೂ ಬೇಡಿಕೆ ಏರುತ್ತಿದೆ. ಆದ್ದರಿಂದ ಮುಂದಿನ ಐದು ವರ್ಷಗಳಲ್ಲಿ 1 ಸಾವಿರ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ನಿರ್ಮಿಸಲು ಮೆಸ್ಕಾಂ ಮುಂದಾಗಿದೆ. ಮೊದಲ ಹಂತದಲ್ಲಿ 195 ಕೇಂದ್ರಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ.

ಕೇಂದ್ರಗಳ ನಿರ್ಮಾಣದ ಉಸ್ತುವಾರಿಯನ್ನು ರಾಜ್ಯದಲ್ಲಿ ಬೆಸ್ಕಾಂ ನೇರವಾಗಿ ವಹಿಸಿಕೊಂಡಿದ್ದು, ಮೆಸ್ಕಾಂ ವ್ಯಾಪ್ತಿಯ ದ.ಕ., ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಗುತ್ತಿಗೆಯನ್ನು ಬೆಂಗಳೂರು ಮೆಡಿಕಲ್‌ ಸಿಸ್ಟಂಸ್‌ ಕಂಪೆನಿಗೆ ನೀಡ ಲಾಗಿದೆ. ಉಡುಪಿ ಜಿಲ್ಲೆಯ ಟೆಂಡರ್‌ ಅನ್ನು ಇದು ವರೆಗೆ ಯಾರೂ ವಹಿಸಿಕೊಳ್ಳದ ಕಾರಣ ಇನ್ನೊಮ್ಮೆ ಟೆಂಡರ್‌ ಕರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ಅವಧಿ ಹೆಚ್ಚಿದ್ದು, ಆ ಅವಧಿಯಲ್ಲಿ ಚಾಲಕರ ವಿಶ್ರಾಂತಿ/ ವಿಹಾರಕ್ಕೆ ಪೂರಕ ಅವಕಾಶ ಇರುವಂತಹ ಸ್ಥಳಗಳಲ್ಲೇ ಕೇಂದ್ರ ನಿರ್ಮಿಸುವುದು ಸದ್ಯದ ಗುರಿ. ಮುಖ್ಯವಾಗಿ ಹೆದ್ದಾರಿ ಬದಿ ಮೆಸ್ಕಾಂನ ಜಮೀನು ಇರುವ 32 ಕಡೆಗಳಲ್ಲಿ, ಇತರ ಸರಕಾರಿ ಕಚೇರಿ ಆವರಣವಿರುವ 48 ಸ್ಥಳಗಳನ್ನು ಗುರುತಿಸಲಾಗಿದೆ. ಹೆದ್ದಾರಿ ಬಿಟ್ಟು ಉಳಿದಂತೆ ಮೆಸ್ಕಾಂ ಜಮೀನಿನಲ್ಲಿ 16 ಕಡೆ ಹಾಗೂ ಇತರ ಸರಕಾರಿ ಕಚೇರಿಗಳಿರುವ 75 ಕಡೆಗಳಲ್ಲಿಯೂ ಸ್ಥಳ ನಿಗದಿಪಡಿಸಿದೆ.

ಮೆಸ್ಕಾಂ ವ್ಯಾಪ್ತಿಯಲ್ಲಿವೆ
61 ಚಾರ್ಜಿಂಗ್‌ ಕೇಂದ್ರ
ಪ್ರಸ್ತುತ ಮೆಸ್ಕಾಂ 24 ಲಕ್ಷ ರೂ. ವೆಚ್ಚ ಮಾಡಿ 61 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಿದೆ. ದ.ಕ. ಜಿಲ್ಲೆಯಲ್ಲಿ 17 (ಮಂಗಳೂರಿನಲ್ಲಿ 3), ಉಡುಪಿಯಲ್ಲಿ 12, ಶಿವಮೊಗ್ಗ 17 ಹಾಗೂ ಚಿಕ್ಕ ಮಗಳೂರಿನಲ್ಲಿ 12 ಕಾರ್ಯ ವೆಸಗುತ್ತಿವೆ. ಇವೆಲ್ಲವೂ ಟೈಪ್‌-1 ಎಂದರೆ 3.3 ಕೆವಿ ಸಾಮರ್ಥ್ಯದ ಪಾಯಿಂಟ್‌ಗಳು. ಇಲ್ಲಿ ಆಟೊ, ದ್ವಿಚಕ್ರ ವಾಹನಗಳಷ್ಟೇ ಚಾರ್ಜ್‌ ಆಗುತ್ತವೆ. ಕಾರುಗಳಿಗೆ ಅಧಿಕ ಸಾಮರ್ಥ್ಯದ ಪಾಯಿಂಟ್‌ ಅಗತ್ಯವಾಗಿರುವುದರಿಂದ ಹೊಸ ದಾಗಿ ನಿರ್ಮಿ ಸುವ ಕೇಂದ್ರಗಳಲ್ಲಿ ಕಾರುಗಳನ್ನೂ ಚಾರ್ಜ್‌ ಮಾಡಲು ಅವಕಾಶವಿದೆ.

ಯೂನಿಟ್‌ಗೆ 50 ಪೈಸೆ ಇಳಿಕೆ
ಈ ಬಾರಿಯ ಹೊಸ ಶುಲ್ಕ ಪ್ರಕಟಿಸುವ ವೇಳೆ ಇವಿ ಚಾರ್ಜಿಂಗ್‌ ಶುಲ್ಕವನ್ನೂ 50 ಪೈಸೆ ಇಳಿಸಲಾಗಿದೆ. ಇದುವರೆಗೆ ಯುನಿಟ್‌ಗೆ 5 ರೂ. ವಿಧಿಸಲಾಗುತ್ತಿದ್ದರೆ ಪ್ರಸ್ತುತ 4.50 ರೂ. ಆಗಿದೆ. ಉಳಿದಂತೆ ಸೇವೆ, ಇತರ ಶುಲ್ಕ ಸೇರಿಕೊಂಡು ಒಂದು ಯುನಿಟ್‌ಗೆ 11 ರೂ.ನಷ್ಟು ವಿಧಿಸಲಾಗುತ್ತಿದೆ.

ಪರಿಸರ ಸ್ನೇಹಿ ವಾಹನಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಆಶಯ. ಮುಂದಿನ ಐದು ವರ್ಷಗಳಲ್ಲಿ 1 ಸಾವಿರ ಚಾರ್ಜಿಂಗ್‌ ಸ್ಟೇಷನ್‌ ನಿರ್ಮಾಣದ ಗುರಿ ಹಾಕಿಕೊಂಡಿದ್ದು, ಹಂತ ಹಂತವಾಗಿ ಕೈಗೊಳ್ಳಲಿದ್ದೇವೆ.
– ಎಚ್‌.ಜಿ. ರಮೇಶ್‌,
ವ್ಯವಸ್ಥಾಪಕ ನಿರ್ದೇಶಕರು (ಪ್ರಭಾರ)

– ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.