ಕ್ಷೇತ್ರ ಪುನರ್‌ ವಿಂಗಡಣೆ: ಕೈ ತಪ್ಪಿದ 3 ಕ್ಷೇತ್ರಗಳು


Team Udayavani, Jun 19, 2023, 2:17 PM IST

ಕ್ಷೇತ್ರ ಪುನರ್‌ ವಿಂಗಡಣೆ: ಕೈ ತಪ್ಪಿದ 3 ಕ್ಷೇತ್ರಗಳು

ಮೈಸೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ ವಿಂಗಡಣೆಯಾಗಿದ್ದು, ಅದರಂತೆ ಮೈಸೂರು ಜಿಲ್ಲೆಯಲ್ಲಿದ್ದ 49 ಜಿಪಂ ಕ್ಷೇತ್ರಗಳನ್ನು 46ಕ್ಕೆ ಇಳಿಸಲಾಗಿದೆ. ಈ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಜಿಪಂ ಚುನಾವಣೆ ನಡೆಯಲಿದೆ. ಮರು ವಿಂಗಡಣೆ ಬಳಿಕ ಜಿಲ್ಲೆಯ ಜಿಪಂ ಕ್ಷೇತ್ರಗಳ ಸಂಖ್ಯೆಯನ್ನು ಅಂತಿಮಗೊಳಿಸಿ ರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಪಂಚಾಯತ್‌ರಾಜ್‌ ಸೀಮಾ ನಿರ್ಣಯ ಆಯೋಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯಿಸಿದೆ. ಈಗಾಗಲೇ ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಜಿಪಂ ಕ್ಷೇತ್ರಗಳ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಎಲ್ಲ ಪ್ರಕ್ರಿಯೆ ಪೂರ್ಣ: ರಾಜ್ಯ ಚುನಾವಣಾ ಆಯೋಗ 2021ರಲ್ಲಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಿ ಕರಡು ಪ್ರತಿ ಪ್ರಕಟಿಸಿದ ಸಂದರ್ಭದಲ್ಲಿ ಜಿಪಂ ಕ್ಷೇತ್ರಗಳು (53)ಹೆಚ್ಚಾಗಿತ್ತು. ಜನಸಂಖ್ಯೆಗೆ ಅನುಗುಣವಾಗಿ ಚುನಾವಣಾ ಆಯೋಗ ಕ್ಷೇತ್ರವಾರು ವಿಂಗಡಿಸಿತ್ತು. ಆ ಬಳಿಕ ರಾಜ್ಯ ಸರ್ಕಾರ ಮತ್ತೂಮ್ಮೆ ಮರು ವಿಂಗಡಣೆ ನಡೆಸಿತ್ತು. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಒಳಗೊಂಡಿರುವ ಗ್ರಾಮಗಳು, ಗಡಿ ಮುಂತಾದ ವಿವರಗಳನ್ನೊಳಗಂಡ ಕರಡು ಅಧಿಸೂಚನೆ ಹೊರಡಿಸಿದ್ದ ಆಯೋಗ ಜ.16ರ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿತ್ತು. ಇದೀಗ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿದೆ.

ನಂಜನಗೂಡಿನಲ್ಲಿ ಅತಿ ಹೆಚ್ಚು: ಸದ್ಯ ನಂಜನಗೂಡಿನಲ್ಲಿ ಅತಿ ಹೆಚ್ಚು ಅಂದರೆ 9 ಜಿಪಂ ಕ್ಷೇತ್ರಗಳು, ಕಡಿಮೆ ಅಂದರೆ ಸರಗೂರಿನಲ್ಲಿ 2, ಕೆ.ಆರ್‌.ನಗರ ಕೇವಲ 3 ಜಿಪಂ ಕ್ಷೇತ್ರಗಳಿವೆ. ಉಳಿದಂತೆ ಸಾಲಿಗ್ರಾಮ ಮತ್ತು ಎಚ್‌.ಡಿ.ಕೋಟೆ ತಾಲೂಕಿನಲ್ಲಿ ತಲಾ 4 ಕ್ಷೇತ್ರಗಳಿವೆ. ಮೈಸೂರು, ತಿ.ನರಸೀಪುರ, ಹುಣಸೂರು, ಪಿರಿಯಾಪಟ್ಟಣದಲ್ಲಿ ತಲಾ 6 ಕ್ಷೇತ್ರಗಳಿವೆ. ಮೈಸೂರು ತಾಲೂಕಿನಲ್ಲಿ ರಮ್ಮನಹಳ್ಳಿ, ಕಡಕೊಳ ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ರಚನೆಯಾಗಿರುವುದರಿಂದ ಜಿಪಂ ಸದಸ್ಯ ಸ್ಥಾನಗಳು ಕಡಿಮೆಯಾಗಿವೆ. ಹಿನಕಲ್‌, ಹೂಟಗಳ್ಳಿ, ಶ್ರೀರಾಂಪುರ ಜಿಪಂ ಸ್ಥಾನಗಳು ರದ್ದಾಗಿವೆ. ಇದಲ್ಲದೆ, ಕಳೆದ ಬಾರಿ ಇದ್ದ ಜಿಪಂ ಕ್ಷೇತ್ರಗಳ ಕೇಂದ್ರಸ್ಥಾನಗಳೂ ಅದಲು ಬದಲಾಗಿವೆ.

ತಾಲೂಕುವಾರು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ವಿವರ:

„ಮೈಸೂರು ತಾಲೂಕಿನಲ್ಲಿ 6 ಜಿಪಂ ಕ್ಷೇತ್ರಗ ಳಿದ್ದು, ಇಲವಾಲ, ಜಯಪುರ, ಉದೂºರು, ವರುಣ, ಸಿದ್ದಲಿಂಗಪುರ ಹಾಗೂ ಹಾರೋ ಹಳ್ಳಿ(ಮೆಲ್ಲಹಳ್ಳಿ) ಕ್ಷೇತ್ರಗಳನ್ನು ರಚಿಸಲಾಗಿದೆ.

„ ತಿ.ನರಸೀಪುರ ತಾಲೂಕಿನಲ್ಲಿ 6 ಜಿಪಂ ಕ್ಷೇತ್ರಗಳಿದ್ದು, ತುರುಗನೂರು, ಸೋಮನಾಥ ಪುರ, ಸೋಸಲೆ, ತಲಕಾಡು, ಮೂಗೂರು, ಗಗೇìಶ್ವರಿ ಕ್ಷೇತ್ರಗಳನ್ನು ರಚಿಸಲಾಗಿದೆ.

„ ನಂಜನಗೂಡು ತಾಲೂಕಿನಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಅಂದರೆ 9 ಜಿಪಂ ಕ್ಷೇತ್ರಗಳಿದ್ದು, ಹುರ, ಹುಲ್ಲಹಳ್ಳಿ, ಹೆಗ್ಗಡಹಳ್ಳಿ, ಕಳಲೆ, ಬದನ ವಾಳು, ದೊಡ್ಡಕವಲಂದೆ, ತಗಡೂರು, ಹದಿ ನಾರು, ತಾಂಡವಪುರ ಕ್ಷೇತ್ರಗಳನ್ನು ರಚಿಸಲಾಗಿದೆ.

„ ಹುಣಸೂರು ತಾಲೂಕಿನಲ್ಲಿ 6 ಜಿಪಂ ಕ್ಷೇತ್ರಗಳಿದ್ದು, ಗಾವಡಗೆರೆ, ಬನ್ನಿಕುಪ್ಪೆ, ಬಿಳಿಕೆರೆ, ಧರ್ಮಾಪುರ, ಹನಗೋಡು, ಚಿಲ್ಕುಂದ ಕ್ಷೇತ್ರಗಳನ್ನು ರಚಿಸಲಾಗಿದೆ.

„ ಕೆ.ಆರ್‌.ನಗರ ತಾಲೂಕಿನಲ್ಲಿ ಕೇವಲ 3 ಜಿಪಂ ಕ್ಷೇತ್ರಗಳನ್ನು ರಚಿಸಲಾಗಿದ್ದು, ಗಂಧನ ಹಳ್ಳಿ, ತಿಪ್ಪೂರು, ಹೆಬ್ಟಾಳು ಜಿಲ್ಲಾ ಪಂಚಾಯಿತಿ ಕ್ಷೇತ್ರ ಗಳಾಗಿವೆ. ಸಾಲಿಗ್ರಾಮ ತಾಲೂಕಿನಲ್ಲಿ 4 ಜಿಪಂ ಕ್ಷೇತ್ರಗಳಿದ್ದು, ತಂದ್ರೆ, ಮಿರ್ಲೆ, ಸಾಲಿ ಗ್ರಾಮ, ಹಳಿಯೂರು ಕ್ಷೇತ್ರಗಳನ್ನು ರಚಿಸಲಾಗಿದೆ.

„ ಪಿರಿಯಾಪಟ್ಟಣ ತಾಲೂಕಿನಲ್ಲಿ 6 ಜಿಪಂ ಕ್ಷೇತ್ರಗಳಿದ್ದು, ಹಲಗನಹಳ್ಳಿ, ಬೆಟ್ಟದಪುರ, ರಾವಂದೂರು, ಕಂಪಲಾಪುರ, ಆಮಮಹಳ್ಳಿ, ಕೊಪ್ಪ ಕ್ಷೇತ್ರಗಳನ್ನು ರಚಿಸಲಾಗಿದೆ.

„ ಎಚ್‌.ಡಿ.ಕೋಟೆ ತಾಲೂಕಿನಲ್ಲಿ 4 ಜಿಪಂ ಕ್ಷೇತ್ರಗಳಿದ್ದು, ಹಂಪಾಪುರ, ಹೈರಿಗೆ, ಅಣ್ಣೂರು, ಅಂತರಸಂತೆ, ಸರಗೂರು ತಾಲೂಕಿನಲ್ಲಿ ಅತೀ ಕಡಿಮೆ ಅಂದರೆ 2 ಜಿಪಂ ಕ್ಷೇತ್ರಗಳಿದ್ದು, ಮುಳ್ಳೂರು, ಹಂಚೀಪುರ ಕ್ಷೇತ್ರಗಳನ್ನು ರಚಿಸಲಾಗಿದೆ.

-ಸತೀಶ್‌ ದೇಪುರ

ಟಾಪ್ ನ್ಯೂಸ್

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Brahmavar

Mangaluru: ಅಪರಿಚಿತ ವ್ಯಕ್ತಿ ಸಾವು

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.