![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-415x229.jpg)
Narendra Modi ಒಕ್ಕೂಟ ಧರ್ಮ ಪಾಲನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ ಆಕ್ರೋಶ
ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ....
Team Udayavani, Jun 19, 2023, 3:06 PM IST
![siddanna](https://www.udayavani.com/wp-content/uploads/2023/06/siddanna-2-620x427.jpg)
ಬೆಂಗಳೂರು: ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಹೀಗಾಗಿ ಅವರು ಒಕ್ಕೂಟ ಧರ್ಮ ಪಾಲನೆ ಮಾಡುವ ಮೂಲಕ ರಾಜ್ಯಗಳಿಗೆ ಸಹಕಾರ ನೀಡಬೇಕು” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ”ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ.ಎಂ.ಎಸ್.ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಜಾರಿಗೊಳಿಸಲಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
”ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿಯಷ್ಟು ಪ್ರಮಾಣದ ಅಕ್ಕಿಯನ್ನು ನೀಡಬೇಕಾಗುತ್ತದೆ.” ಎಂದು ಹೇಳಿದ್ದಾರೆ.
”ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಬಿಜೆಪಿ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ ರೂ. 10,092 ಕೋಟಿ ವೆಚ್ಚವಾಗಲಿದೆ. ಬಡಜನರ ಹಸಿವು ನೀಗಿಸಲು ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ.ಭಾರತೀಯ ಆಹಾರ ಮಂಡಳಿ(ಎಫ್.ಸಿ.ಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ.ಎನ್.ಸಿ.ಸಿ.ಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್.ಸಿ.ಸಿ.ಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
MUST WATCH
ಹೊಸ ಸೇರ್ಪಡೆ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.