![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 19, 2023, 5:23 PM IST
ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.
“ಹೆಲ್ಮೆಟ್ ವಿಚಾರ ಸ್ವಲ್ಪ ಹೆಚ್ಚೇ ಆಗಿತ್ತು. ನಾನು ಹಾಗೆ ಮಾಡಬಾರದಿತ್ತು ಎಂದು ಕೆಲವು ದಿನಗಳ ಬಳಿಕ ಅರ್ಥವಾಗಿತ್ತು. ಅದು ಆ ಕ್ಷಣದಲ್ಲಿ ಸಂಭವಿಸಿ ಹೋಯಿತು. ನಾನು ಹಾಗೆ ಮಾಡಬಾರದಿತ್ತು ಎಂದು ಮತ್ತೆ ನನಗನಿಸಿತು” ಎಂದು ಆವೇಶ್ ಖಾನ್ ಹೇಳಿದ್ದಾರೆ.
ಇದನ್ನೂ ಓದಿ:Bengaluru hit-and-run;100 ಮೀಟರ್ ಎಳೆದೊಯ್ದ ಕಾರು: ಡೆಲಿವರಿ ಬಾಯ್ ಮೃತ್ಯು
ಐಪಿಎಲ್ 2023 ರ ಋತುವಿನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವೇಶ್ ಅವರು, ತಮ್ಮ ಮಟ್ಟವನ್ನು ತಲುಪದಿದ್ದರೂ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.