ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ; ಪ್ರೊ.ಪಿ.ಜಿ.ಕೊಣ್ಣೂರ

ಪತ್ರಕರ್ತರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು

Team Udayavani, Jun 19, 2023, 5:49 PM IST

ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ; ಪ್ರೊ.ಪಿ.ಜಿ.ಕೊಣ್ಣೂರ

ಹುಕ್ಕೇರಿ: ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಜೊಳ್ಳು ಮತ್ತು ಕಾರ್ಯಮರೆತ ಪತ್ರಕರ್ತರಿಗೆ ಕಡಿವಾಣ ಹಾಕದಿದ್ದರೆ ನೈಜ ಪತ್ರಕರ್ತರಿಗಂತೂ ಮುಂದೆ ಉಳಿಗಾಲವಿಲ್ಲ ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ಜಿ.ಕೊಣ್ಣೂರ ಎಚ್ಚರಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಯುಟ್ಯೂಬ್‌, ವೆಬ್‌ ಚಾನೆಲ್‌, ಆ್ಯಪ್‌ಗ್ಳ ಹೆಸರಿನಲ್ಲಿ ಇಂದು ರಾಶಿ ರಾಶಿ ಜೊಳ್ಳು ಪತ್ರಕರ್ತರು ಹುಟ್ಟಿಕೊಳ್ಳುತ್ತಿರುವುದು ಪತ್ರಿಕೋದ್ಯಮದ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ರಾತ್ರೋರಾತ್ರಿ ಯುಟ್ಯೂಬ್‌ ಚಾನೆಲ್‌ ಆರಂಭಿಸಿ, ಬೆಳಿಗ್ಗೆ ಲೋಗೋ ಹಿಡಿದು ಪ್ರಶ್ನೆ ಕೇಳಲು ಶುರು ಮಾಡುವವರ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿದೆ. ಅಸಲಿಗೆ ಇಂತವರಿಗೆ ಮಾಧ್ಯಮ ರಂಗದ ಕನಿಷ್ಠ ಗಂಧ ಗಾಳಿಯೂ ಗೊತ್ತಿರುವುದಿಲ್ಲ. ಕೆಲವರು ತಮ್ಮ ಸ್ವಹಿತಾಸಕ್ತಿಗಾಗಿ ಯುಟ್ಯೂಬ್‌ ಚಾನೆಲ್‌ ಮಾಡಿಕೊಳ್ಳುತ್ತಾರೆ. ಮತ್ತೆ ಕೆಲವರು ಬ್ಲ್ಯಾಕ್‌ಮೇಲ್‌ ಮಾಡಿ, ಹಣ ಮಾಡಲು ಪತ್ರಿಕೋದ್ಯಮಕ್ಕೆ ಬರುತ್ತಿದ್ದಾರೆ ಎಂದು ಅವರು ಖೇದ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಘಟಕದ ಖಜಾಂಚಿ ಚೇತನ ಹೊಳೆಪ್ಪಗೋಳ ಮಾತನಾಡಿ, ಬ್ಲ್ಯಾಕ್‌ಮೇಲ್‌ ಮಾಡುವುದು
ಪತ್ರಿಕೋದ್ಯಮದ ಧರ್ಮವಲ್ಲ. ಪತ್ರಕರ್ತರಿಗೆ ಎಲ್ಲರ ಜೊತೆಗೆ ಸಂಬಂಧ ಇರಬೇಕೆ ಹೊರತು, ವ್ಯವಹಾರಿಕವಾಗಿ ಆಗಬಾರದು. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವವರು ಮಾತ್ರ ನೈಜ ಪತ್ರಕರ್ತರಾಗಿರುತ್ತಾರೆ. ಪತ್ರಕರ್ತ ಆದವನು ಸಮಾಜ
ಪರಿವರ್ತನೆ ಮಾಡಬೇಕೆ ಹೊರತು, ಸಮಾಜ ಒಡೆಯಬಾರದು ಎಂದು ಸೂಚ್ಯವಾಗಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ರವಿ ಕಾಂಬಳೆ ಮಾತನಾಡಿ, ಪತ್ರಕರ್ತರ ಮೇಲೆ ಸಾಕಷ್ಟು ಜವಾಬ್ದಾರಿ, ಹೊಣೆಗಾರಿಕೆ ಇದ್ದು ಸುದ್ದಿಯ ಒತ್ತಡಗಳ ಮಧ್ಯೆಯೂ ನೈಜ ಸುದ್ಧಿ ನೀಡುವ ಕೆಲಸವಾಗಬೇಕು. ಒತ್ತಡದಲ್ಲೇ ಸದಾ ಕಾರ್ಯನಿರ್ವಹಿಸುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಸಮಾಜ ಪತ್ರಕರ್ತರ ಬಗ್ಗೆ ಹೊಂದಿರುವ ಕನಿಷ್ಠ ಗೌರವ ಕಾಪಾಡುವ ಕೆಲಸ ಮಾಡಬೇಕಿದೆ.

ನಿಜವಾದ ಸುದ್ದಿ ಹೆಕ್ಕಿ ತೆಗೆದು, ಸುದ್ಧಿ ಮಾಡುವುದು ಸವಾಲಿನ ಕೆಲಸವಾಗಿದೆ. ಯಾರೂ ದಿಢೀರನೆ ಪತ್ರಕರ್ತ ಆಗುವುದಿಲ್ಲ. ಸುದ್ದಿ ಮನೆಯಲ್ಲಿ ಹಿರಿಯ ಪತ್ರಕರ್ತರು ತಿದ್ದಿ, ತೀಡಿದ ನಂತರವಷ್ಟೇ ಒಬ್ಬ ಪತ್ರಕರ್ತ ರೂಪಗೊಳ್ಳಲು ಸಾಧ್ಯ ಎಂದರು.

ಪತ್ರಕರ್ತರಾದ ಮಹಾದೇವ ನಾಯಿಕ, ಬಿ.ಬಿ.ಕೋತೆಕರ, ರಾಮಣ್ಣಾ ನಾಯಿಕ, ರಾಜು ಕುರಂದವಾಡೆ, ವಿಶ್ವನಾಥ ನಾಯಿಕ, ಸಚಿನ್‌ ಖೋತ, ಆನಂದ ಭಮ್ಮನ್ನವರ, ಶಶಾಂಕ ಮಾಳಿ, ಸಚಿನ್‌ ಕಾಂಬಳೆ, ಅಪ್ಪು ಹುಕ್ಕೇರಿ, ಸುರೇಶ ಕಿಲ್ಲೇದಾರ, ಬಸವರಾಜ ಕೊಂಡಿ, ಬಾಬು ಸುಂಕದ, ಸಂಜು ಮುತಾಲಿಕ, ರಾಜು ಬಾಗಲಕೋಟಿ, ನಂದು ಹುಕ್ಕೇರಿ, ಎ.ಎಂ.ಕರ್ನಾಚಿ, ಎಂ.ಎ.ಗುಂಡಕಲ್ಲೆ ಮತ್ತಿತರರು ಉಪಸ್ಥಿತರಿದ್ದರು.

ಜುಲೈನಲ್ಲಿ ವಿವಿಧ ಕಾರ್ಯಕ್ರಮ ಹುಕ್ಕೇರಿಯಲ್ಲಿ ಹೈಟೆಕ್‌ ಪತ್ರಕರ್ತರ ಭವನ ನಿರ್ಮಾಣ, ಬರುವ ಜುಲೆ„ ತಿಂಗಳಲ್ಲಿ ನಡೆಯಲಿರುವ ಪತ್ರಕರ್ತರ ದಿನಾಚರಣೆಯಲ್ಲಿ ಅಧಿಕಾರಿ-ಸಿಬ್ಬಂದಿಗಳಿಗೆ ಕಾರ್ಯಾಗಾರ, ಜನಪ್ರತಿನಿಧಿಗಳೊಂದಿಗೆ ಸಂವಾದ, ಪತ್ರಕರ್ತರಿಗೆ ಆರೋಗ್ಯ ವಿಮೆ, ಸಚಿವ ಸತೀಶ ಜಾರಕಿಹೊಳಿ, ಶಾಸಕ ನಿಖಿಲ್‌ ಕತ್ತಿ ಅವರ ಸನ್ಮಾನ ಸಮಾರಂಭ ಆಯೋಜಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.