![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 20, 2023, 2:17 PM IST
ಮುಂಬಯಿ: ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ಏನೇನೆಲ್ಲಾ ಮಾಡಿಕೊಳ್ಳುತ್ತಾರೆ, ಇದರಿಂದ ಕೆಲವರ ಸೌಂದರ್ಯ ಹೆಚ್ಚಾದರೆ ಇನ್ನು ಕೆಲವರದ್ದು ಇದ್ದ ಸೌಂದರ್ಯವೂ ಹೋಗಿ ಇನ್ನೇನೋ ಆಗಿ ಬಿಡುತ್ತದೆ, ಅದರಂತೆ ಮಹಾರಾಷ್ಟ್ರದ ಮಹಿಳೆಯೊಬ್ಬರು ತನ್ನ ಮುಖದ ಸೌಂದರ್ಯ ಹೆಚ್ಚಿಸಲು ಬರೋಬ್ಬರಿ 17,500 ಖರ್ಚು ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಘಟನೆ ನಡೆದಿದೆ.
ಹೌದು ಕೆಲವೊಮ್ಮೆ ನಾವು ಹಚ್ಚಿಕೊಳ್ಳುವ ಸೌಂದರ್ಯ ವರ್ಧಕಗಳು ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತವೆ ಅದೇ ರೀತಿ ಮಹಾರಾಷ್ಟ್ರದ ಮಹಿಳೆಯ ಮುಖಕ್ಕೆ ಮಾಡಿದ ಫೇಷಿಯಲ್ ನಿಂದ ಮಹಿಳೆಯ ಮುಖದ ಚರ್ಮವೇ ಸುಟ್ಟು ಹೋಗಿದೆ.
ಘಟನೆಯ ವಿವರ:
ಜೂನ್ 17 ರಂದು ಮಹಿಳೆಯೊಬ್ಬರು ಅಂಧೇರಿಯ ಕಾಮಧೇನು ಶಾಪಿಂಗ್ ಸೆಂಟರ್ನಲ್ಲಿರುವ ಗ್ಲೋ ಲಕ್ಸ್ ಸಲೂನ್ ಗೆ ತೆರಳಿ 17,500 ರೂಪಾಯಿ ಮೌಲ್ಯದ ಹೈಡ್ರಾಫೇಶಿಯಲ್ ಚಿಕಿತ್ಸೆ ಪಡೆದುಕೊಂಡಿದ್ದರು ಚಿಕಿತ್ಸೆ ಪಡೆದು ಮನೆಗೆ ಬಂದ ಮಹಿಳೆಗೆ ಮುಖದಲ್ಲಿ ತುರಿಕೆಯ ಅನುಭವಾಗಿದೆ ಅಲ್ಲದೆ ಕೆಲವೇ ಹೊತ್ತಿನಲ್ಲಿ ಮುಖದ ಚರ್ಮ ಸುಟ್ಟು ಹೋಗಿ ವಿರೂಪಗೊಂಡಿದೆ.
ಹೈಡ್ರಾಫೇಶಿಯಲ್ ಎಂಬುದು ವೈದ್ಯಕೀಯ – ದರ್ಜೆಯ ರಿಸರ್ಫೇಸಿಂಗ್ ಚಿಕಿತ್ಸೆಯಾಗಿದ್ದು ಪರವಾನಗಿ ಪಡೆದ ವೈದ್ಯಕೀಯ ವೃತ್ತಿಪರರು, ಪ್ರಮಾಣೀಕೃತ ಹೈಡ್ರಾಫೇಶಿಯಲ್ ಸೌಂದರ್ಯಶಾಸ್ತ್ರಜ್ಞರು ಲಭ್ಯವಿರುವಲ್ಲಿ ಈ ಚಿಕಿತ್ಸೆಯನ್ನು ನೀಡಲಾಗುತ್ತದೆ ಆದರೆ ಈ ಬ್ಯೂಟಿ ಪಾರ್ಲರ್ ನಲ್ಲಿ ನುರಿತ ತಜ್ಞರಿಂದಲೇ ಚಿಕಿತ್ಸೆ ನೀಡಲಾಗಿತ್ತೆ ಎಂಬುದು ಪ್ರಶ್ನೆಯಾಗಿದೆ.
ಮಹಿಳೆ ತನ್ನ ಸುಂದರವಾದ ಮುಖದ ಕಳೆಯನ್ನು ಕಳೆದುಕೊಂಡು ನರಕಯಾತನೆ ಅನುಭವಿಸುತ್ತಿದ್ದಾರೆ. ಅಲ್ಲದೆ ಚಿಕಿತ್ಸೆ ನೀಡಿದ ಬ್ಯೂಟಿ ಪಾರ್ಲರ್ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ : 13000 ಅಡಿ ಆಳ; Titanic ಅವಶೇಷ ವೀಕ್ಷಿಸಲು ತೆರಳಿದ ಪ್ರವಾಸಿಗರ ಸಬ್ ಮರ್ಸಿಬಲ್ ನಾಪತ್ತೆ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.