IIT, IIM ಪದವೀಧರೆಯಲ್ಲ…ಈಕೆ 33ನೇ ವಯಸ್ಸಲ್ಲೇ 10 ಖಾಸಗಿ ಜೆಟ್‌ ಹೊಂದಿರುವ ಯುವ ಉದ್ಯಮಿ!

ವಿಮಾನಯಾನ ಸ್ಟಾರ್ಟ್‌ ಅಪ್‌ ಆರಂಭಿಸುವ ಬಗ್ಗೆ ಮೂರು ವರ್ಷಗಳ ಕಾಲ ಆಲೋಚಿಸಿದ್ದೆ

Team Udayavani, Jun 20, 2023, 5:56 PM IST

IIT, IIM ಪದವೀಧರೆಯಲ್ಲ…ಈಕೆ 33ನೇ ವಯಸ್ಸಲ್ಲೇ 10 ಖಾಸಗಿ ಜೆಟ್‌ ಹೊಂದಿರುವ ಯುವ ಉದ್ಯಮಿ!

ನವದೆಹಲಿ: ಭಾರತ ಸರ್ಕಾರದಿಂದ ರಾಷ್ಟ್ರೀಯ ವಾಣಿಜ್ಯೋದ್ಯಮ ಪ್ರಶಸ್ತಿ ಮತ್ತು ವರ್ಲ್ಡ್‌ ಎಕನಾಮಿಕ್‌ ಫೋರಮ್‌ ನಿಂದ ಯುವ ಜಾಗತಿಕ ನಾಯಕಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿರುವ JetSetGo ಸಿಇಒ ಕನಿಕಾ ಟೇಕ್ರಿವಾಲ್‌ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ:ಏನಿದು ಗೋಲ್ಡನ್ ಅವರ್? | ಹ್ಯಾಕಿಂಗ್’ನಿಂದ ಹಣ ಕಳೆದುಕೊಂಡರೆ ಗಾಬರಿಯಾಗದೆ ಹೀಗೆ ಮಾಡಿ

ಕನಿಕಾ ಟೇಕ್ರಿವಾಲ್‌(33 ವರ್ಷ) ಅವರ ಆಸ್ತಿಯ ಒಟ್ಟು ಮೌಲ್ಯ 400 ಕೋಟಿ ರೂಪಾಯಿಗೂ ಅಧಿಕ. ತನ್ನ 22ನೇ ವಯಸ್ಸಿನಲ್ಲೇ ಕನಿಕಾ ಜೆಟ್‌ ಸೆಟ್‌ ಗೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು.

JetsetGo ಪ್ಲೇನ್‌ ಅಗ್ರಗೇಟರ್‌ ಸ್ಟಾರ್ಟ್‌ ಅಪ್‌ ಸಂಸ್ಥೆಯಾಗಿದೆ. ಜೆಟ್‌ ಸೆಟ್‌ ಗೋ ಕಂಪನಿ ಗ್ರಾಹಕರಿಗೆ, ಸಂಸ್ಥೆಗಳಿಗೆ, ಉದ್ಯಮಿಗಳಿಗೆ ವಿಮಾನ, ಹೆಲಿಕಾಪ್ಟರ್‌ ಸೇವೆಯನ್ನು ಒದಗಿಸುತ್ತದೆ.

ಕನಿಕಾ ಟೇಕ್ರಿವಾಲ್‌ ಮಾರಣಾಂತಿಕ ಕ್ಯಾನ್ಸರ್‌ ರೋಗದ ವಿರುದ್ಧ ಹೋರಾಡಿ ಬದುಕುಳಿದ ಗಟ್ಟಿಗಿತ್ತಿ. ಕನಿಕಾ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕವಾಗಿದ್ದು, ಕಿರಿಯ ವಯಸ್ಸಿನಲ್ಲೇ ಸ್ವಂತ ವಾಯುಯಾನ ಆಧಾರಿತ ಸ್ಟಾರ್ಟ್‌ ಅಪ್‌ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಈಗ ಕನಿಕಾ ಬಳಿ 10 ಖಾಸಗಿ ಜೆಟ್‌ ವಿಮಾನಗಳಿವೆ.

ಕನಿಕಾ ಅವರ JetSetGo ಭಾರತದ ಮೊದಲ ವಿಮಾನಯಾನ ಗುತ್ತಿಗೆಯಾಧಾರಿತ ಸಂಸ್ಥೆಯಾಗಿದ್ದು, ಅಂದಾಜು 1,00,000 ಪ್ರಯಾಣಿಕರನ್ನು ನಿರ್ವಹಿಸುತ್ತಿದೆ.

ಟೇಕ್ರಿವಾಲ್‌ ಭೋಪಾಲ್‌ ನಲ್ಲಿ ಜನಿಸಿದ್ದು, ಲಾರೆನ್ಸ್‌ ಸ್ಕೂಲ್‌ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ನಂತರ ಭೋಪಾಲ್‌ ನ ಜವಾಹರಲಾಲ್‌ ನೆಹರೂ ಸೀನಿಯರ್‌ ಸೆಕೆಂಡರಿ ಸ್ಕೂಲ್‌ ನಲ್ಲಿ ವಿದ್ಯಾಭ್ಯಾಸ ಪಡೆದಿದ್ದು, ಕೋವೆಂಟ್ರಿ ಯೂನಿರ್ವಸಿಟಿಯಲ್ಲಿ ಪದವಿ ಶಿಕ್ಷಣ ಪಡೆದಿದ್ದರು.

“ನನ್ನಲ್ಲಿ ವಿಮಾನಯಾನ ಸ್ಟಾರ್ಟ್‌ ಅಪ್‌ ಆರಂಭಿಸುವ ಬಗ್ಗೆ ಮೂರು ವರ್ಷಗಳ ಕಾಲ ಆಲೋಚಿಸಿದ್ದೆ. ಇನ್ನೇನು ನನ್ನ ಕನಸನ್ನು ನನಸು ಮಾಡಿಕೊಳ್ಳಬೇಕೆಂದು ಹೊರಟಾಗ ಮಾರಣಾಂತಿಕ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ಪಡೆಯಬೇಕಾದ ಸ್ಥಿತಿ ಎದುರಾಗಿತ್ತು. ಇದರಿಂದಾಗಿ ಕೆಲವು ವರ್ಷಗಳು ಉರುಳಿದ್ದವು. ಆದರೆ ಅದೃಷ್ಟವಶಾತ್‌ ನನ್ನ ಕನಸು ಸಾಕಾರಗೊಂಡಿತ್ತು” ಎಂದು ಕನಿಕಾ ಇಂಡಿಯಾಟೈಮ್ಸ್‌ ಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು.

ಕನಿಕಾ ಟೇಕ್ರಿವಾಲ್‌ ಹೈದರಾಬಾದ್‌ ಮೂಲದ ಉದ್ಯಮಿಯನ್ನು ವಿವಾಹವಾಗಿದ್ದು, ಭಾರತದ ಅತೀ ಕಿರಿಯ ಸ್ವ ಉದ್ಯಮಿ ಎಂದು ಗುರುತಿಸಿಕೊಂಡಿದ್ದಾರೆ. ಅಲ್ಲದೇ ಈಕೆಗೆ “ದ ಸ್ಕೈ ಕ್ವೀನ್”‌ ಎಂಬ ಬಿರುದು ನೀಡಲಾಗಿದೆ.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.