Congress ಕಾರ್ಯಕರ್ತರೇ ಲಂಚ ಪಡೆದರೂ ಕ್ರಮ: ಡಿಕೆಶಿ ಎಚ್ಚರಿಕೆ
Team Udayavani, Jun 21, 2023, 7:26 AM IST
ಬೆಂಗಳೂರು: ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿಗಳಿಗೆ ಫಲಾನುಭವಿಗಳ ಅರ್ಜಿ ಭರ್ತಿ ಮಾಡಲು ಯಾರೂ ಲಂಚ ಸ್ವೀಕರಿಸಕೂಡದು. ಒಂದು ವೇಳೆ ಲಂಚ ಪಡೆದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಕಾರ್ಯಕರ್ತರೇ ಅಕ್ರಮದಲ್ಲಿ ಭಾಗಿಯಾದರೂ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿ, ಎಷ್ಟು ಪಾರದರ್ಶಕವಾಗಿ ಯೋಜನೆ ಜಾರಿ ಮಾಡಲು ಸಾಧ್ಯವೋ ಅಷ್ಟು ಪಾರದರ್ಶಕವಾಗಿ ಮಾಡಲಾಗುವುದು. ಯಾರಿಗೆ ಯೋಜನೆ ಬೇಡ ಎಂದು ತೀರ್ಮಾನಿಸುತ್ತಾರೆ ಅವರ ಹೊರತುಪಡಿಸಿ ಉಳಿದವರು ಈ ಯೋಜನೆಗೆ ಅರ್ಜಿ ತುಂಬಬೇಕು. ಗೃಹಜ್ಯೋತಿ ಯೋಜನೆ ನೋಂದಣಿ ಈಗಷ್ಟೇ ಆರಂಭವಾಗಿದೆ. ಎಲ್ಲರೂ ತಾಳ್ಮೆಯಿಂದ ನೋಂದಣಿ ಮಾಡಿಕೊಳ್ಳಬೇಕು. ಎಲ್ಲರಿಗೂ ಈ ಯೋಜನೆ ಸಿಗಲಿದೆ ಎಂದು ಭರವಸೆ ನೀಡಿದರು.
ಈಗಾಗಲೇ ಗೃಹಜ್ಯೋತಿ ಅಡಿ ನಿರೀಕ್ಷೆ ಮೀರಿ ಅರ್ಜಿ ಸಲ್ಲಿಕೆಯಾಗುತ್ತಿವೆ. ಆತಂಕಗೊಂಡು ಎಲ್ಲರೂ ಏಕಕಾಲದಲ್ಲಿ ಮುಗಿಬೀಳುವುದು ಬೇಡ. ಇದರಿಂದ ಸರ್ವರ್ ಮೇಲೆ ಒತ್ತಡ ಉಂಟಾಗುತ್ತದೆ ಎಂದ ಅವರು, ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆಗೆ ಕಾಲಾವಕಾಶ ಪಡೆದು ಜಾರಿ ಮಾಡಲಾಗುತ್ತಿದೆ. ಬಾಪು ಕೇಂದ್ರ, ಪಂಚಾಯ್ತಿ ಕೇಂದ್ರ ಹಾಗೂ ಸ್ವಂತ ಮೊಬೈಲ್ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದರ ಜತೆಗೆ ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮನೆ-ಮನೆಗೆ ತೆರಳಿ ಪಕ್ಷಬೇಧ ಮರೆತು ಈ ಯೋಜನೆ ಅರ್ಜಿ ತುಂಬಬೇಕು. ಪ್ರತಿ ಬೂತ್ ಮಟ್ಟದಲ್ಲಿ ಓರ್ವ ವಿದ್ಯಾವಂತ ಮಹಿಳೆ ಹಾಗೂ ಪುರುಷ ಪ್ರತಿ ಮನೆಗೆ ಹೋಗಿ ಅರ್ಜಿ ತುಂಬಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ
PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.