ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ


Team Udayavani, Jun 21, 2023, 1:48 PM IST

ಶ್ರೇಯಂಕಾ,ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

ಟಾಪ್ ನ್ಯೂಸ್

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

1-asdadad

IPL; ತಂಡಗಳಲ್ಲಿ ಉಳಿದುಕೊಳ್ಳಬಲ್ಲ ಸಂಭಾವ್ಯ ಆಟಗಾರರು ಯಾರ್ಯಾರು?

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.