ಡಾರ್ವಿನ್ ಪಠ್ಯವನ್ನು ಕೈಬಿಟ್ಟಿಲ್ಲ:ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ!
Team Udayavani, Jun 22, 2023, 7:38 AM IST
ಪುಣೆ: ಎನ್ಸಿಇಆರ್ಟಿ ಪಠ್ಯ ಕ್ರಮದಿಂದ ಡಾರ್ವಿನ್ನ ವಿಕಾಸವಾದದ ಸಿದ್ಧಾಂತವನ್ನು ತೆಗೆಯಲಾಗಿಲ್ಲ. ಅಂಥ ನಿರ್ಧಾರವನ್ನೇ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಪುಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವು ದಿನಗಳಿಂದ ಎನ್ಸಿಇಆರ್ಟಿ ಪಠ್ಯ ಕ್ರಮದಿಂದ ಡಾರ್ವಿನ್ ವಿಕಾಸವಾದದ ಸಿದ್ಧಾಂತಕ್ಕೆ ಸಂಬಂಧಿಸಿದ ಪಠ್ಯವನ್ನು ತೆಗೆಯಲಾಗಿದೆ ಎಂಬ ವಾದ ಎದ್ದಿದೆ. ಅಂಥ ಬೆಳವಣಿಗೆಯೇ ನಡೆದಿಲ್ಲ.
ಕೊರೊನಾ ಅವಧಿಯಲ್ಲಿ ತಜ್ಞರ ಸಲಹೆಯಂತೆ ಪುನರಾವರ್ತನೆಗೊಂಡಿರುವ ಕೆಲವೊಂದು ಪಠ್ಯಗಳನ್ನು ಕೈಬಿಡುವ ಬಗ್ಗೆ ವಿಷಯ ಪರಿಣಿತರು ಸಲಹೆ ಮಾಡಿದ್ದರು. ಅದನ್ನು ಈಗ ಮತ್ತೆ ಅಳವಡಿಸಲಾಗಿದೆ. 8 ಮತ್ತು 9ನೇ ತರಗತಿಗಳ ಪಠ್ಯದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 10ನೇ ತರಗತಿಯ ಪಠ್ಯದಲ್ಲಿ ವಿಕಾಸವಾದಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ಹಿಂಪಡೆಯಲಾಗಿತ್ತು. 11 ಮತ್ತು 12ನೇ ತರಗತಿಯ ಪಠ್ಯದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.