BJP ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ: ಎಂ.ಬಿ.ಪಾಟೀಲ್ ವಾಗ್ದಾಳಿ

ಜುಲೈ ಮೊದಲ ವಾರ ಕೇಂದ್ರ ಸಚಿವರ ಭೇಟಿ...

Team Udayavani, Jun 22, 2023, 2:59 PM IST

M B Patil

ವಿಜಯಪುರ : ಬಡವರ ಹಸಿವು ನೀಗಿಸುವ ಅಕ್ಕಿ ವಿತರಣೆ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ರಾಜ್ಯ ಸರ್ಕಾರ ಪತ್ರ ಬರೆದಾಗ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಎಂದು ಹೇಳಿ, ನಂತರ ಉಲ್ಟಾ ಹೊಡೆದಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿ, ಬಡವರ ಅನ್ನದ ವಿಷಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ರಾಜಕೀಯ ಸಣ್ಣತನದ ವರ್ತನೆ ಸಲ್ಲದು. ಇಷ್ಟಕ್ಕೂ ನಾವೇನೂ ಪುಕ್ಕಟೆಯಾಗಿ ಕೇಳುತ್ತಿಲ್ಲ. ಹಣ ಕೊಡುತ್ತೇವೆ ಕೊಡಿ ಎಂದರೂ ಮೊದಲು ಒಪ್ಪಿಕೊಂಡವರು, ನಂತರ ನಿರಾಕರಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಅಕ್ಕಿಗೆ ಬದಲಾಗಿ ಉತ್ತರ ಕರ್ನಾಟದಕ ಜಿಲ್ಲೆಗಳಿಗೆ ಜೋಳ, ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ರಾಗಿ ವಿತರಿಸುವ ಬಗ್ಗೆ ಚರ್ಚೆ ನಡೆದಿವೆ. ಆದರೆ ಈ ಹಂತದಲ್ಲಿ ಏಕಾಏಕಿ ಬೇಕು ಎಂದರೆ ತುರ್ತಾಗಿ ಜೋಳ, ರಾಗಿ ನಿರೀಕ್ಷಿತ ಪ್ರಮಾಣದಲ್ಲಿ ಸಿಗುವುದಿಲ್ಲ. ಈ ವಾಸ್ತವದ ಅರಿವು ನಮಗಿದೆ ಎಂದರು.

ಇನ್ನು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ಕಾಂಗ್ರೆಸ್ ಸರ್ಕಾರವಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ ) ದರ ಹೆಚ್ಚಳ ಮಾಡಿದೆ. ಕಾಲ ಕಾಲಕ್ಕೆ ವಿದ್ಯುತ್ ದರ ಹೆಚ್ಚಳ ಮಾಡುವ ಅಧಿಕಾರ ಹೊಂದಿರುವ ಕೆಇಆರ್ ಸಿಸಿ, ಭವಿಷ್ಯದಲ್ಲೂ ನಿಗದಿತವಾಗಿ ವಿದ್ಯುತ್ ದರ ಪರಿಷ್ಕರಣೆ ಮಾಡಲಿದೆ ಎಂದು ಸಮಜಾಯಿಸಿ ನೀಡಿ, ಅಧಿಕಾರಕ್ಕೆ ಬರುತ್ತಲೇ ಕಾಂಗ್ರೆಸ್ ವಿದ್ಯುತ್ ದರ ಏರಿಸಿದೆ ಎಂದು ಬಿಜೆಪಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ರಾಜಕೀಯ ಕಾರಣಕ್ಕೆ ಮಾಡುವ ಪ್ರತಿಭಟನೆಗಳಿಗೆ ಬೆಲೆ ಇರುವುದಿಲ್ಲ. ಆದರೆ ವಿದ್ಯುತ್ ದರ ಹೆಚ್ಚಳದ ಕುರಿತು ಸಂಬಂಧಿಸಿದ ಸಚಿವರೊಂದಿಗೆ ಸೇರಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಜೊತೆ ಕೆಲವೇ ಆಯ್ದ ಸಚಿವರು ತಮ್ಮ ತಮ್ಮ ಇಲಾಖೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಜೂನ್ 27 ನಂತರ ನಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಸಿದ್ಧಪಡಿಸಿಕೊಂಡು, ಜುಲೈ ಮೊದಲ ವಾರ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.