ಪ್ರಜ್ವಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಜಾತರ’ ಶುರು
Team Udayavani, Jun 23, 2023, 2:28 PM IST
ನಟ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಜಾತರ’ ಎಂದು ಹೆಸರಿಡಲಾಗಿದೆ. ಇತ್ತೀಚೆಗಷ್ಟೇ “ಜಾತರ’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿರುವ ಚಿತ್ರತಂಡ, ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿದೆ.
ಇನ್ನು “ಜಾತರ’ ಲವ್, ಫ್ಯಾಮಿಲಿ ಸೆಂಟಿಮೆಂಟ್ ಕಥಾಹಂದರ ಸಿನಿಮಾವಾಗಿದ್ದು, ಇಲ್ಲಿಯವರೆಗೂ ಕಾಣಿಸಿಕೊಂಡಿರದ ವಿಭಿನ್ನ ಗೆಟಪ್ನಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಚಿತ್ರತಂಡದ ಮಾಹಿತಿ.
ಈಗಾಗಲೇ ತೆಲುಗಿನಲ್ಲಿ ಹಲವಾರು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಉದಯ ನಂದನವನಂ “ಜಾತರ’ ಸಿನಿಮಾಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ವರ್ಧಮಾನ್ ಫಿಲಂಸ್’ ಹಾಗೂ “ಲೋಟಸ್ ಎಂಟರ್ಟೈನ್ಮೆಂಟ್ಸ್’ ಬ್ಯಾನರ್ ಮೂಲಕ ಹೈದರಾಬಾದ್ ಮೂಲದ ಗೋವರ್ಧನ್ ರೆಡ್ಡಿ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಬಿಗ್ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ “ಜಾತರ’ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ.
ಇದನ್ನೂ ಓದಿ:Meghalaya: 6 ತಿಂಗಳ ಹಿಂದೆ ಉದ್ಘಾಟನೆಗೊಂಡ ಫುಟ್ಬಾಲ್ ಕ್ರೀಡಾಂಗಣದ ತಡೆಗೋಡೆ ಕುಸಿತ
ಸದ್ಯ “ಜಾತರ’ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಸಿರುವ ಚಿತ್ರತಂಡ, ಇದೇ ಆಗಸ್ಟ್ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭಿಸಿ, ಮುಂದಿನ ವರ್ಷದ ಜನವರಿ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ಇನ್ನು “ಜಾತರ’ ಸಿನಿಮಾದ ಹಾಡುಗಳಿಗೆ ಭೀಮ್ಸ್ ಸೆಸಿರೋಲಿಯೋ ಸಂಗೀತ ಸಂಯೋಜನೆಯಿದ್ದು, ಸಾಯಿಶ್ರೀರಾಂ ಛಾಯಾಗ್ರಹಣವಿದೆ. ಚಿತ್ರಕ್ಕೆ ಬಿ. ವಾಸುದೇವರೆಡ್ಡಿ ಕಥೆ, ಮಾಸ್ತಿ ಸಂಭಾಷಣೆಯಿದೆ. ಸದ್ಯ “ಜಾತರ’ ಸಿನಿಮಾದ ನಾಯಕಿ, ಮತ್ತು ಉಳಿದ ಪ್ರಮುಖ ಪಾತ್ರವರ್ಗ ಹಾಗೂ ತಂತ್ರಜ್ಞರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.