ಛಲದೊಂದಿಗೆ ಗುರಿ ಇದ್ದರೆ ಸಾಧನೆ ಸಾಧ್ಯ: ಸಚಿವ ಕೆ.ವೆಂಕಟೇಶ್

ಪ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ತನುಶ್ರೀಗೌಡ ರಿಗೆ ಅಭಿನಂದನೆ

Team Udayavani, Jun 24, 2023, 10:34 PM IST

1-swdsadasd

ಪಿರಿಯಾಪಟ್ಟಣ: ಜೀವನದಲ್ಲಿ ಕನಸುಗಳು ಎಷ್ಟು ಮುಖ್ಯವೋ, ಹಾಗೆಯೇ ಗುರಿಯೂ ಅಷ್ಟೇ ಮುಖ್ಯ, ಛಲವಿದ್ದರೂ ಮಾತ್ರ ಗುರಿಯನ್ನು ಮುಟ್ಟೇ ತೀರುತ್ತಾರೆ ಎಂದು ಪಶುಪಾಲನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವಂಕಟೇಶ್ ತಿಳಿಸಿದರು.

ಪಟ್ಟಣದ ಡಿ.ದೇವರಾಜು ಅರಸು ಕಲಾ ಭವನದಲ್ಲಿ ಶನಿವಾರ ವಾಯುಸೇನೆಯ ಪ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ತನುಶ್ರೀಗೌಡ ರವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಇಂದು ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗಿಂತ ಕಡಿಮೆಯಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೆಣ್ಣುಮಕ್ಕಳು ಮನದಲ್ಲಿರುವ ಕೀಳರಿಮೆಯನ್ನು ತೊರೆದು ತನ್ನಲ್ಲಿರುವ ಸಾಮರ್ಥ್ಯ ಅರಿತು ಸಾಧನೆ ಮಾಡಲು ಮುಂದಾಗಬೇಕು. ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಬುದ್ದಿವಂತ ಮಕ್ಕಳಿದ್ದಾರೆ ಇವರಿಗೆ ಸರಿಯಾದ ಮಾರ್ಗದರ್ಶನ ದೊರೆತರೆ ಏನು ಬೇಕಾದರೂ ಸಾಧಿಸುತ್ತಾರೆ ಎಂಬುದಕ್ಕೆ ಈ ದಿನದ ಕಾರ್ಯಕ್ರಮವೇ ಸಾಕ್ಷಿ. ವಿದ್ಯಾರ್ಥಿಗಳು ಕಾಲೇಜು ಜೀವನವನ್ನು ಕೇವಲ ಮೋಜಿಗಾಗಿ ಎಂದು ಭಾವಿಸದೇ, ನಮ್ಮ ಮುಂದಿನ ಜೀವನದ ಅಡಿಪಾಯವಿದ್ದಂತೆ ಎಂದು ತಿಳಿದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಯಾವಾಗಲೂ ದೊಡ್ಡ ದೊಡ್ಡ ಕನಸನ್ನೇ ಕಾಣಬೇಕು. ಇದಕ್ಕಾಗಿ ದುಡ್ಡು ಕೊಡಬೇಕಾಗಿಲ್ಲ. ಪ್ರಾಮಾಣಿಕ ಪ್ರಯತ್ನ, ಕೆಲಸದಲ್ಲಿ ಅರ್ಪಣಾಭಾವ, ದೃಢ ನಿರ್ಧಾರ ಇವುಗಳನ್ನು ಅಳವಡಿಸಿಕೊಂಡರೆ ಜಗತ್ತೇ ಬೆೇರಗುಗೊಳಿಸುವಂತಹ ಸಾಧನೆಯನ್ನು ಮಾಡಬಹುದು ಎಂದರು. ಇದಕ್ಕೆ ಉದಾಹರಣೆಯಾಗಿ ನಮ್ಮ ತಾಲ್ಲೂಕಿನ ಹೆಮ್ಮಯ ಹೆಣ್ಣು ಮಗಳು ತನುಶ್ರೀಗೌಡ ವಾಯುಸೇನೆಯ ಪ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾಗಿರುವುದೆ ಸಾಕ್ಷಿ ಎಂದರು.

ಕಾರ್ಯಕ್ರಮದಲ್ಲಿ ಕೊಡಗು ಸೈನಿಕ ಶಾಲೆಯ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಮಾತನಾಡಿ ಭಾರತೀಯ ಸೇನಾ ಪಡೆಗಳಲ್ಲಿ ಕೆಲವು ದಶಕಗಳ ಕಾಲ ಪುರುಷರ ಪ್ರಾಬಲ್ಯವೇ ಇತ್ತು. ಆದರೆ ಈಗ ಮಹಿಳೆಯರ ಕೈ ಮೇಲಾಗಿದೆ. ಮಹಿಳೆಯರೂ ಹೆಗಲಿಗೆ ಹೆಗಲು ಕೊಟ್ಟು ದೇಶದ ಹೆಮ್ಮೆ, ಕೀರ್ತಿಯನ್ನು ಕಾಪಾಡುತ್ತಿದ್ದಾರೆ. ತಾಲ್ಲೂಕಿನ ಹೆಣ್ಣು ಮಗು ಮೈಸೂರು ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ವಾಯುಪಡೆಯ ಪೈಲಟ್ ಆಗಿ ಸೇರ್ಪಡೆಗೊಂಡು ಐತಿಹಾಸಿಕ ಸಾಧನೆ ಮಾಡಿರುವುದು ಹೆಮ್ಮಯ ವಿಷಯ ಇಂಥ ಸಹಸ್ರಾರು ಮಕ್ಕಳು ದೇಶಸೇವೆಗೆ ಮುಂದೆ ಬರಬೇಕು ಎಂದು ಹರಸಿದರು.

ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ವಾಸುಕಿ ಮಾತನಾಡಿ ನಾನು 25 ವರ್ಷಗಳಿಗೂ ಹೆಚ್ಚು ಕಾಲ ದೇಶ ಸೇವೆ ಮಾಡಿ ಬಂದು ಇಂದು ಭೂಮಿತಾಯಿ ಸೇವೆ ಮಾಡುತ್ತಿದ್ದೇನೆ, ಉತ್ತಮ ಆರೋಗ್ಯಕ್ಕಾಗಿ ನಮ್ಮ ರೈತರು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ಸಾವಯವ ಕೃಷಿ ಪದ್ದತಿಯಲ್ಲಿ ಬೆಳೆ ಬೆಳೆದರೆ ಆರೋಗ್ಯಪೂರ್ಣ ದೇಹ ಮನಸ್ಸು ದೊರೆಯುತ್ತದೆ. ದಕ್ಷಿಣ ಪ್ರಾಂತ್ಯದ ಜನರು ಸುಖ ಪುರುಷರು ಇವರಿಗೆ ಯಾವುದೇ ಭೀತಿ ಇಲ್ಲ, ಆದರೆ ಉತ್ತರ ಭಾರತ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಜನತೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ ಕಾರಣ ನೆರೆಯವರ ಹಾವಳಿ, ಆದ್ದರಿಂದ ದೇಶ ಸೇವೆಗೆ ಈ ಭಾಗದಲ್ಲಿ ಮುಂದೆ ಬರಬೇಕು. ನಮ್ಮ ಮಾಜಿ ಸೈನಿಕರ ಹೆಣ್ಣು ಮಕ್ಕಳು ಪೈಲೆಟ್ಟಾಗಿ ಸೇವೆಗೆ ಸೇರುವುದು ನಿಜವಾದ ಸಾಧನೆ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕುಂಞಿ ಅಹಮದ್, ಮಾಜಿ ಸೈನಿಕ ವಿಕ್ರಂ ರಾಜ್, ವಾಯುಸೇನೆಗೆ ಆಯ್ಕೆಯಾದ ತನು ಶ್ರೀ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪಟ್ಟಣದ ಡಿ.ದೇವರಾಜು ಅರಸು ಕಲಾ ಭವನದಲ್ಲಿ ವಾಯುಸೇನೆಯ ಪ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ತನುಶ್ರೀಗೌಡರನ್ನು ಸಚಿವ ಕೆ.ವೆಂಕಟೇಶ್ ಅಭಿನಂಧಿಸಿದರು.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.