![DK-Shivakumar](https://www.udayavani.com/wp-content/uploads/2024/07/DK-Shivakumar-1-415x249.jpg)
ಕಾವಡಿ: ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಸಾವು
Team Udayavani, Jun 25, 2023, 7:33 AM IST
![ಕಾವಡಿ: ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಸಾವು](https://www.udayavani.com/wp-content/uploads/2023/06/kota-620x432.jpg)
ಕೋಟ: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕ ಮೃತ ಘಟನೆ ಜೂ. 23ರಂದು ಕಾವಡಿಯಲ್ಲಿ ಸಂಭವಿಸಿದೆ. ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಮೃತ ಯುವಕ.
ನಾಗೇಶ್ ಅವರು ಕೋಟ ಸಮೀಪದ ಖಾಸಗಿ ಗೇರುಬೀಜ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ಕಾವಡಿ ಸೇತುವೆ ಸಮೀಪ ಯಾವುದೋ ವಾಹನ ಢಿಕ್ಕಿಯಾಗಿ ಬಿದ್ದುಕೊಂಡಿದ್ದರು. ಸ್ವಲ್ಪ ಸಮಯದ ಅನಂತರ ಪರಿಚಯಸ್ಥರೋರ್ವರು ಅದೇ ದಾರಿಯಲ್ಲಿ ಬರುವಾಗ ಗಮನಿಸಿ ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅಪಘಾತವೆಸಗಿದ ವಾಹನ ಸವಾರನು ವಾಹನವನ್ನು ನಿಲ್ಲಿಸದೇ ಹಾಗೂ ಗಾಯಾಳುವಿಗೆ ಚಿಕಿತ್ಸೆ ಕೊಡಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಮುಂದುವರಿದಿದೆ.
ಮನೆಗೆ ಆಧಾರ
ಮೃತ ನಾಗೇಶ್ ತಂದೆ- ತಾಯಿಗೆ ಏಕೈಕ ಪುತ್ರನಾಗಿದ್ದು, ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ಅವರಿಗೆ ಪ್ರಸ್ತುತ ಮೂರು ತಿಂಗಳ ಪುಟ್ಟ ಹೆಣ್ಣು ಮಗು ಇದೆ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಹೆತ್ತವರು ಹಾಗೂ ಪತ್ನಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಟಾಪ್ ನ್ಯೂಸ್
![DK-Shivakumar](https://www.udayavani.com/wp-content/uploads/2024/07/DK-Shivakumar-1-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.