ಪಿ.ಸಿ. ಶೇಖರ್ ‘ಬ್ಯಾಡ್’ ಡ್ರೀಮ್: ವಿಲನ್ ಗಳ ಚಿತ್ರದಲ್ಲಿ ನಕುಲ್, ಮಾನ್ವಿತಾ
Team Udayavani, Jun 25, 2023, 5:54 PM IST
ಪಿ.ಸಿ. ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರಕ್ಕೆ “ಬ್ಯಾಡ್’ ಎಂದು ಹೆಸರಿಡಲಾಗಿದೆ. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.
ಈ ಚಿತ್ರಕ್ಕೆ ಬ್ಯಾಡ್ ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೇ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. ರೋಷಮಾನ್ ಎಫೆಕ್ಟ್ ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಜಪಾನ್ ನಿರ್ದೇಶರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಕಡಿಮೆ.
ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
“ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಭತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ. ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ ರಾಗ ಹಾಗೂ ದಿ ಟೆರರಿಸ್ಟ್ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ’ ಎನ್ನುವುದು ನಿರ್ದೇಶಕರ ಮಾತು.
ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರು ಅಭಿನಯಿಸುತ್ತಿದ್ದಾರೆ.
ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತಾ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.