TTD: ಪ್ರತೀ ರಾಜ್ಯದಲ್ಲಿ ತಿರುಪತಿ ದೇಗುಲ ನಿರ್ಮಾಣ!
Team Udayavani, Jun 26, 2023, 6:55 AM IST
ವಿಶಾಖಪಟ್ಟಣ: ದೇಶದ ಪ್ರತೀ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಟ್ರಸ್ಟ್ ಮುಂದಾಗಿದೆ. ಜಮ್ಮುನ ಶಿವಾಲಿಕ್ ಕಾಡಿನಲ್ಲಿ 62 ಎಕ್ರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ವೆಂಕಟೇಶ್ವರ ಸ್ವಾಮಿ ದೇಗುಲವು ಇತ್ತೀಚೆಗೆ ಲೋಕಾರ್ಪಣೆಯಾಯಿತು. ಅಲ್ಲದೇ ಗುಜರಾತ್ ಮತ್ತು ಛತ್ತೀಸ್ಗಢದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಾಣಕ್ಕೆ ಯೋಜನೆ ಸಿದ್ಧವಾಗಿದೆ.
ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಟಾರೆಡ್ಡಿ, “ಭಗವಂತ ವೆಂಕಟೇಶ್ವರ ಸ್ವಾಮಿಯನ್ನು ಭಕ್ತರ ಮನೆಯ ಸಮೀಪ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಪ್ರತೀ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ಟಿಟಿಡಿ ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ. ಬಿಹಾರದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ನಿತೀಶ್ ಕುಮಾರ್ ಸರಕಾರದೊಂದಿಗೆ ಮಾತುಕತೆಯಲ್ಲಿ ಟಿಟಿಡಿ ತೊಡಗಿದೆ.
ಅಲ್ಲದೇ ನವೀಮುಂಬಯಿಯಲ್ಲಿ ದೇಗುಲ ನಿರ್ಮಿಸಲು ಟಿಟಿಡಿಗೆ 10 ಎಕ್ರೆ ಸ್ಥಳವನ್ನು ಮಹಾರಾಷ್ಟ್ರ ಸರಕಾರ ನೀಡಿದೆ. ಇಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ದೇಗುಲ ನಿರ್ಮಾಣವಾಗಲಿದೆ. ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಡಿಯೊ- ನ್ಯೂರೊ ಘಟಕ ಸ್ಥಾಪನೆಗೆ ಟಿಟಿಡಿ ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.